ಕ್ರೀಡೆ

ಬಾರ್ಬಡೋಸ್‌ನಲ್ಲಿಯೇ ಬೀಡುಬಿಟ್ಟ ಟೀಂ ಇಂಡಿಯಾ: ಅಸಲಿ ಕಾರಣ ಇದು!

ಬಾರ್ಬಡೋಸ್‌: ಟಿ20 ವಿಶ್ವಕಪ್‌ ವಿಜೇತ ಭಾರತ ತಂಡ ಟೂರ್ನಿ ನಡೆದು ಎರಡು ದಿನಗಳಾಗಿದ್ದರೂ ಇನ್ನು ಭಾರತದ ಮಣ್ಣಿಗೆ ಕಾಲಿಟ್ಟಿಲ್ಲ. ಭಾರತೀಯರು ವಿಶ್ವಕಪ್‌ ವಿಜಯ ಸಂಭ್ರಮಾಚರಣೆ ಮಾಡಲು ಇನ್ನು ಕೆಲವು ದಿನಗಳು ಕಾಯಬೇಕಾಗಿದೆ.

ವೆಸ್ಟ್‌ ಇಂಡೀಸ್‌ನ ಕೆರೆಬಿಯ್‌ ದ್ವೀಪಗಳಲ್ಲಿ ಸೋಮವಾರ ಬೆಳಿಗಿನ ಜಾವದಿಂದಲೂ ಕೆಟಗರಿ ಚಂಡಮಾರುತ ಬೀಸುತ್ತಿರುವುದರಿಂದ ವಿಮಾನವೂ ಸೇರಿದಂತೆ ಎಲ್ಲ ನಾಗರೀಕ ಸೇವೆಗಳನ್ನು ಸ್ಥಗಿತಗೊಳಸಿದ್ದು, ವಿಮಾನ ಹಾರಾಟವೂ ಕೂಡಾ ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಬಿರುಗಾಳಿಯ ಮಟ್ಟ ತೀವ್ರವಾದ ಹಿನ್ನೆಲೆ ಮೂರು ಲಕ್ಷ ಜನಸಂಖ್ಯೆ ಇರುವ ಈ ದ್ವೀಪವನ್ನು ಭಾನುವಾರ ಸಂಜೆಯಿಂದಲೇ ಲಾಕ್‌ಡೌನ್‌ ಮಾಡಲಾಗಿದೆ. ಇಂದು (ಜುಲೈ.2) ಅಥವಾ ನಾಳೆ (ಜುಲೈ.3) ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಮರಳಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಾರ್ಯರ್ಶಿ ಜೈ ಶಾ, ನಾವು ಇಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಮೊದಲಿಗೆ ಆಟಗಾರರನ್ನು ಸುರಕ್ಷಿತವಾಗಿ ದೇಶಕ್ಕೆ ರವಾನಿಸಲಾಗುವುದು ಇದಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದರ ಜೊತೆಗೆ ಭಾರತದಿಂದ ತೆರಳಿರುವ ಮಾಧ್ಯಮ ಮಿತ್ರರರನ್ನು ಸಹಾ ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಗುವುದು ಎಂದು ಅವರು ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

8 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

9 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

10 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

10 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

11 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

12 hours ago