ಕ್ರೀಡೆ

ಬಾರ್ಬಡೋಸ್‌ನಲ್ಲಿಯೇ ಬೀಡುಬಿಟ್ಟ ಟೀಂ ಇಂಡಿಯಾ: ಅಸಲಿ ಕಾರಣ ಇದು!

ಬಾರ್ಬಡೋಸ್‌: ಟಿ20 ವಿಶ್ವಕಪ್‌ ವಿಜೇತ ಭಾರತ ತಂಡ ಟೂರ್ನಿ ನಡೆದು ಎರಡು ದಿನಗಳಾಗಿದ್ದರೂ ಇನ್ನು ಭಾರತದ ಮಣ್ಣಿಗೆ ಕಾಲಿಟ್ಟಿಲ್ಲ. ಭಾರತೀಯರು ವಿಶ್ವಕಪ್‌ ವಿಜಯ ಸಂಭ್ರಮಾಚರಣೆ ಮಾಡಲು ಇನ್ನು ಕೆಲವು ದಿನಗಳು ಕಾಯಬೇಕಾಗಿದೆ.

ವೆಸ್ಟ್‌ ಇಂಡೀಸ್‌ನ ಕೆರೆಬಿಯ್‌ ದ್ವೀಪಗಳಲ್ಲಿ ಸೋಮವಾರ ಬೆಳಿಗಿನ ಜಾವದಿಂದಲೂ ಕೆಟಗರಿ ಚಂಡಮಾರುತ ಬೀಸುತ್ತಿರುವುದರಿಂದ ವಿಮಾನವೂ ಸೇರಿದಂತೆ ಎಲ್ಲ ನಾಗರೀಕ ಸೇವೆಗಳನ್ನು ಸ್ಥಗಿತಗೊಳಸಿದ್ದು, ವಿಮಾನ ಹಾರಾಟವೂ ಕೂಡಾ ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಬಿರುಗಾಳಿಯ ಮಟ್ಟ ತೀವ್ರವಾದ ಹಿನ್ನೆಲೆ ಮೂರು ಲಕ್ಷ ಜನಸಂಖ್ಯೆ ಇರುವ ಈ ದ್ವೀಪವನ್ನು ಭಾನುವಾರ ಸಂಜೆಯಿಂದಲೇ ಲಾಕ್‌ಡೌನ್‌ ಮಾಡಲಾಗಿದೆ. ಇಂದು (ಜುಲೈ.2) ಅಥವಾ ನಾಳೆ (ಜುಲೈ.3) ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಮರಳಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಾರ್ಯರ್ಶಿ ಜೈ ಶಾ, ನಾವು ಇಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಮೊದಲಿಗೆ ಆಟಗಾರರನ್ನು ಸುರಕ್ಷಿತವಾಗಿ ದೇಶಕ್ಕೆ ರವಾನಿಸಲಾಗುವುದು ಇದಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದರ ಜೊತೆಗೆ ಭಾರತದಿಂದ ತೆರಳಿರುವ ಮಾಧ್ಯಮ ಮಿತ್ರರರನ್ನು ಸಹಾ ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಗುವುದು ಎಂದು ಅವರು ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

2 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago