Categories: ಕ್ರೀಡೆ

ಮೊದಲ ಟೆಸ್ಟ್‌ಗೆ ರೋಹಿತ್‌ ಅಲಭ್ಯ: ಟೀಂ ಇಂಡಿಯಾದ ನಾಯಕತ್ವ ಬುಮ್ರಾಗೆ

ಕ್ರಿಕೆಟ್‌ನ ಪ್ರತಿಷ್ಠಿತ ಟೆಸ್ಟ್‌ ಟೂರ್ನಿಯಲ್ಲಿ ಒಂದಾಗಿರುವ ಬಾರ್ಡರ್-‌ಗವಾಸ್ಕರ್‌ ಟೂರ್ನಿಯು ಇದೇ ತಿಂಗಳ.22ರಂದು ಶುರುವಾಗಲಿದೆ. ಈ ಟೂರ್ನಿಯ ಆತಿಥ್ಯವನ್ನು ಆಸ್ಟ್ರೇಲಿಯಾ ವಹಿಸಿಕೊಂಡಿದ್ದು, ಮೊದಲ ಪಂದ್ಯ ಪರ್ತ್‌ನಲ್ಲಿ ಜರುಗಲಿದೆ.

ವೈಯಕ್ತಿಕ ಕಾರಣದಿಂದಾಗಿ ಟೀಂ ಇಂಡಿಯಾದ ನಾಯಕ ರೋಹಿತ್‌ ಶರ್ಮಾ ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್‌ ಪಂದ್ಯದಿಂದ ದೂರ ಉಳಿದಿದ್ದು, ತಂಡವನ್ನು ಜಸ್ಪ್ರಿತ್‌ ಬುಮ್ರಾ ಮುನ್ನಡೆಸಲಿದ್ದಾರೆ.

ರೋಹಿತ್‌ ಗೈರು ಹಾಜರಿಯಲ್ಲಿ ಯಶಸ್ವಿ ಜೈಸ್ವಾಲ್‌ ಜೊತೆ ಆರಂಭಿಕ ಜೋಡಿಯಾಗಿ ಕಣಕ್ಕಿಳಿಯುವವರು ಯಾರು ಎಂಬ ಪ್ರಶ್ನೆ ಟೀಂ ಇಂಡಿಯಾಗೆ ಕಾಡತೊಡಗಿದೆ.

ವರ್ಷದ ಆರಂಭದಿಂದಲೂ ಉತ್ತಮ ಲಯದಲ್ಲಿರುವ ಯಶಸ್ವಿ ಜೈಸ್ವಾಲ್‌ ಆಸ್ಟ್ರೇಲಿಯಾದಲ್ಲಿ ಇನ್ನಿಂಗ್ಸ್‌ ಆರಂಭಿಸುವುದು ಖಚಿತ. ಆದರೆ ಮತ್ತೊಂದು ತುದಿಯಲ್ಲಿ ಕಣಕ್ಕಿಳಿಯುವವರ ಕೊರತೆ ಟೀಂ ಇಂಡಿಯಾಗೆ ಎದ್ದು ಕಾಣುತ್ತಿದೆ.

ರೋಹಿತ್‌ ಅಲಭ್ಯದಿಂದ ಶುಭ್‌ಮನ್‌ ಗಿಲ್‌ ಆರಂಭಿಕ ಬ್ಯಾಟರ್‌ ಆಗಿ ಕಣಕಿಳಿಯುತ್ತಿದ್ದರು.ಆದರೆ ಹೆಬ್ಬೆರಳಿನ ಗಾಯದಿಂದ ಅವರು ಈ ಪಂದ್ಯದಿಂದ ಹೊರಗುಳಿದಿರುವ ಕಾರಣ ಹೊಸ ಆರಂಭಿಕನಿಗೆ ಮಣೆ ಹಾಕುವ ಸಾಧ್ಯತೆ ಇದೆ.

ಟೀಂ ಇಂಡಿಯಾದ ಆರಂಭಿಕನಾಗಿ ಅನುಭವ ಹೊಂದಿರುವ ಕೆ.ಎಲ್‌.ರಾಹುಲ್‌ ವಿದೇಶದ ಪಿಚ್‌ನಲ್ಲಿ ಉತ್ತಮವಾಗಿ ಆಡಿದ್ದಾರೆ. ಇವರು ಆರಂಭಿಕನಾಗಿ ಕಣಕ್ಕಿಳಿದರೆ ಮಧ್ಯಮ ಕ್ರಮಾಂಕ ದುರ್ಬಲವಾಗುವುದರಿಂದ ಅಭಿಮನ್ಯು ಈಶ್ವರನ್‌ ಟೀಂ ಇಂಡಿಯಾ ಪರ ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆ ಇದೆ.

ಪ್ರಥಮ ದರ್ಜೆ ಪಂದ್ಯಗಳಲ್ಲಿ ಉತ್ತಮ ಆಟವಾಡಿರುವ ಅಭಿಮನ್ಯು, 101 ಪಂದ್ಯಗಳಿಂದ 27 ಶತಕ ಹಾಗೂ 29 ಅರ್ಧಶತಕಗಳೊಂದಿಗೆ ಒಟ್ಟು 7674 ರನ್‌ ಕಲೆ ಹಾಕಿದ್ದಾರೆ.

ಭಾರತ ಟೆಸ್ಟ್‌ ತಂಡ : ರೋಹಿತ್‌ ಶರ್ಮಾ(ನಾಯಕ), ಜಸ್‌ಪ್ರೀತ್‌ ಬುಮ್ರಾ(ಉಪನಾಯಕ), ಯಶಸ್ವಿ ಜೈಸ್ವಾಲ್‌, ಅಭಿಮನ್ಯು ಈಶ್ವರನ್‌, ಶುಭ್‌ಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಕೆಎಲ್‌ ರಾಹುಲ್‌, ರಿಷಭ್‌ ಪಂತ್(ವಿಕೆಟ್‌ ಕೀಪರ್)‌, ಸರ್ಫರಾಜ್‌ ಖಾನ್‌, ಧ್ರುವ ಜುರೆಲ್(ವಿಕೆಟ್‌ ಕೀಪರ್)‌, ರವಿಚಂದ್ರನ್‌ ಅಶ್ವಿನ್‌, ರವೀಂದ್ರ ಜಡೇಜಾ, ಮೊಹಮ್ಮದ್‌ ಸಿರಾಜ್‌, ಆಕಾಶ್‌ ದೀಪ್‌, ಪ್ರಸಿದ್ಧ ಕೃಷ್ಣ, ಹರ್ಷಿತ್‌ ರಾಣಾ, ನತೀಶ್‌ ಕುಮಾರ್‌ ರೆಡ್ಡಿ, ವಾಷಿಂಗ್ಟನ್‌ ಸುಂದರ್.

ಆಂದೋಲನ ಡೆಸ್ಕ್

Recent Posts

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

18 mins ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

54 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

6 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

7 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

7 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

8 hours ago