Categories: ಕ್ರೀಡೆ

ಮೊದಲ ಟೆಸ್ಟ್‌ಗೆ ರೋಹಿತ್‌ ಅಲಭ್ಯ: ಟೀಂ ಇಂಡಿಯಾದ ನಾಯಕತ್ವ ಬುಮ್ರಾಗೆ

ಕ್ರಿಕೆಟ್‌ನ ಪ್ರತಿಷ್ಠಿತ ಟೆಸ್ಟ್‌ ಟೂರ್ನಿಯಲ್ಲಿ ಒಂದಾಗಿರುವ ಬಾರ್ಡರ್-‌ಗವಾಸ್ಕರ್‌ ಟೂರ್ನಿಯು ಇದೇ ತಿಂಗಳ.22ರಂದು ಶುರುವಾಗಲಿದೆ. ಈ ಟೂರ್ನಿಯ ಆತಿಥ್ಯವನ್ನು ಆಸ್ಟ್ರೇಲಿಯಾ ವಹಿಸಿಕೊಂಡಿದ್ದು, ಮೊದಲ ಪಂದ್ಯ ಪರ್ತ್‌ನಲ್ಲಿ ಜರುಗಲಿದೆ.

ವೈಯಕ್ತಿಕ ಕಾರಣದಿಂದಾಗಿ ಟೀಂ ಇಂಡಿಯಾದ ನಾಯಕ ರೋಹಿತ್‌ ಶರ್ಮಾ ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್‌ ಪಂದ್ಯದಿಂದ ದೂರ ಉಳಿದಿದ್ದು, ತಂಡವನ್ನು ಜಸ್ಪ್ರಿತ್‌ ಬುಮ್ರಾ ಮುನ್ನಡೆಸಲಿದ್ದಾರೆ.

ರೋಹಿತ್‌ ಗೈರು ಹಾಜರಿಯಲ್ಲಿ ಯಶಸ್ವಿ ಜೈಸ್ವಾಲ್‌ ಜೊತೆ ಆರಂಭಿಕ ಜೋಡಿಯಾಗಿ ಕಣಕ್ಕಿಳಿಯುವವರು ಯಾರು ಎಂಬ ಪ್ರಶ್ನೆ ಟೀಂ ಇಂಡಿಯಾಗೆ ಕಾಡತೊಡಗಿದೆ.

ವರ್ಷದ ಆರಂಭದಿಂದಲೂ ಉತ್ತಮ ಲಯದಲ್ಲಿರುವ ಯಶಸ್ವಿ ಜೈಸ್ವಾಲ್‌ ಆಸ್ಟ್ರೇಲಿಯಾದಲ್ಲಿ ಇನ್ನಿಂಗ್ಸ್‌ ಆರಂಭಿಸುವುದು ಖಚಿತ. ಆದರೆ ಮತ್ತೊಂದು ತುದಿಯಲ್ಲಿ ಕಣಕ್ಕಿಳಿಯುವವರ ಕೊರತೆ ಟೀಂ ಇಂಡಿಯಾಗೆ ಎದ್ದು ಕಾಣುತ್ತಿದೆ.

ರೋಹಿತ್‌ ಅಲಭ್ಯದಿಂದ ಶುಭ್‌ಮನ್‌ ಗಿಲ್‌ ಆರಂಭಿಕ ಬ್ಯಾಟರ್‌ ಆಗಿ ಕಣಕಿಳಿಯುತ್ತಿದ್ದರು.ಆದರೆ ಹೆಬ್ಬೆರಳಿನ ಗಾಯದಿಂದ ಅವರು ಈ ಪಂದ್ಯದಿಂದ ಹೊರಗುಳಿದಿರುವ ಕಾರಣ ಹೊಸ ಆರಂಭಿಕನಿಗೆ ಮಣೆ ಹಾಕುವ ಸಾಧ್ಯತೆ ಇದೆ.

ಟೀಂ ಇಂಡಿಯಾದ ಆರಂಭಿಕನಾಗಿ ಅನುಭವ ಹೊಂದಿರುವ ಕೆ.ಎಲ್‌.ರಾಹುಲ್‌ ವಿದೇಶದ ಪಿಚ್‌ನಲ್ಲಿ ಉತ್ತಮವಾಗಿ ಆಡಿದ್ದಾರೆ. ಇವರು ಆರಂಭಿಕನಾಗಿ ಕಣಕ್ಕಿಳಿದರೆ ಮಧ್ಯಮ ಕ್ರಮಾಂಕ ದುರ್ಬಲವಾಗುವುದರಿಂದ ಅಭಿಮನ್ಯು ಈಶ್ವರನ್‌ ಟೀಂ ಇಂಡಿಯಾ ಪರ ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆ ಇದೆ.

ಪ್ರಥಮ ದರ್ಜೆ ಪಂದ್ಯಗಳಲ್ಲಿ ಉತ್ತಮ ಆಟವಾಡಿರುವ ಅಭಿಮನ್ಯು, 101 ಪಂದ್ಯಗಳಿಂದ 27 ಶತಕ ಹಾಗೂ 29 ಅರ್ಧಶತಕಗಳೊಂದಿಗೆ ಒಟ್ಟು 7674 ರನ್‌ ಕಲೆ ಹಾಕಿದ್ದಾರೆ.

ಭಾರತ ಟೆಸ್ಟ್‌ ತಂಡ : ರೋಹಿತ್‌ ಶರ್ಮಾ(ನಾಯಕ), ಜಸ್‌ಪ್ರೀತ್‌ ಬುಮ್ರಾ(ಉಪನಾಯಕ), ಯಶಸ್ವಿ ಜೈಸ್ವಾಲ್‌, ಅಭಿಮನ್ಯು ಈಶ್ವರನ್‌, ಶುಭ್‌ಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಕೆಎಲ್‌ ರಾಹುಲ್‌, ರಿಷಭ್‌ ಪಂತ್(ವಿಕೆಟ್‌ ಕೀಪರ್)‌, ಸರ್ಫರಾಜ್‌ ಖಾನ್‌, ಧ್ರುವ ಜುರೆಲ್(ವಿಕೆಟ್‌ ಕೀಪರ್)‌, ರವಿಚಂದ್ರನ್‌ ಅಶ್ವಿನ್‌, ರವೀಂದ್ರ ಜಡೇಜಾ, ಮೊಹಮ್ಮದ್‌ ಸಿರಾಜ್‌, ಆಕಾಶ್‌ ದೀಪ್‌, ಪ್ರಸಿದ್ಧ ಕೃಷ್ಣ, ಹರ್ಷಿತ್‌ ರಾಣಾ, ನತೀಶ್‌ ಕುಮಾರ್‌ ರೆಡ್ಡಿ, ವಾಷಿಂಗ್ಟನ್‌ ಸುಂದರ್.

ಆಂದೋಲನ ಡೆಸ್ಕ್

Recent Posts

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

2 hours ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

2 hours ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

3 hours ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

14 hours ago