ಬೆಂಗಳೂರು: ಮತಚಲಾವಣೆ ನಮ್ಮ ಸಂವಿಧಾನ ಹಕ್ಕಾಗಿದ್ದು, ಮತದಾನ ಪ್ರಜಾಪ್ರಭುತ್ವವನ್ನು ಮುಂದೆ ತರಲು ಒಂದು ಉತ್ತಮ ಅವಕಾಶವಾಗಿದೆ ಹೀಗಾಗಿ ಎಲ್ಲರು ತಪ್ಪದೇ ಮತದಾನ ಮಾಡಿ ಎಂದು ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಸಲಹೆ ನೀಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದ ಶಿಕ್ಷಾ ಸ್ಕೂಲ್ ಮತಗಟ್ಟೆಗೆ ಕೋಚ್ ರಾಹುಲ್ ದ್ರಾವಿಡ್, ತಮ್ಮ ಪತ್ನಿ ಮತ್ತು ಮಗನ ಜೊತೆಯಲ್ಲಿ ಆಗಮಿಸಿ ಮತದಾನ ಮಾಡಿದ್ದಾರೆ.
ಬಳಿಕ ಮಾತನಾಡಿದ ಅವರು, ಮತದಾನ ಮಾಡುವುದು ಸಂವಿಧಾನಾತ್ಮಕ ಹಕ್ಕು ಎಲ್ಲರೂ ಬಂದು ಮತದಾನ ಮಾಡಿ, ಅತಿ ಹೆಚ್ಚು ಹೆಚ್ಚು ಜನರು ಬಂದು ಮತದಾನ ಮಾಡಿ, ಈ ಬಾರಿ ಬೆಂಗಳೂರಿನಲ್ಲಿ ಮತದಾನ ಹೆಚ್ಚಾಗಿ ನಡೆಯಬೇಕು ಎಂದಿದ್ದಾರೆ.
ಮತಗಟ್ಟೆಗಳಲ್ಲಿ ಬಿಗಿ ಬಂದೋಬಸ್ತ್ ಹಾಗೂ ಅಚ್ಚುಕಟ್ಟಿನ ನಿರ್ವಹಣೆ ಮಾಡಲಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ನೀಡಿದ್ದಾರೆ. ಎಲ್ಲವು ಚೆನ್ನಾಗಿ ನಡೆಯುತ್ತಿದೆ ಎಂದರು.
ಇನ್ನು ಬೆಂಗಳೂರಿನಲ್ಲಿ ಯುವಕರು ಮತದಾನ ಮಾಡಲು ನಿರ್ಲಕ್ಷ್ಯ ವಹಿಸುತ್ತಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ, ಯುವಕರೆಲ್ಲಾ ಬರಬೇಕು. ಮತದಾನದ ಬಗ್ಗೆ ಮಾಧ್ಯಮಗಳು ಹೆಚ್ಚಿನ ಪ್ರಚಾರ ಮಾಡಬೇಕು. ಯುವಕ-ಯುವತಿಯರನ್ನು ಮತದಾನಕ್ಕೆ ಸೆಳೆಯಲು ಮಾಧ್ಯಮದ ಪಾತ್ರ ಮುಖ್ಯವಾಗಿದ್ದು, ಅದನ್ನು ನೀವು ಮಾಡಬೇಕು. ಈ ಬಾರಿ ಮೊದಲ ಬಾರಿ ಮತದಾನ ಮಾಡುವವರು ಹೆಚ್ಚಾಗಿದ್ದು, ಎಲ್ಲರೂ ಬಂದು ತಪ್ಪದೇ ಮತದಾನ ಮಾಡಿ ಎಂದು ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…