ಬೆಂಗಳೂರು: ಮತಚಲಾವಣೆ ನಮ್ಮ ಸಂವಿಧಾನ ಹಕ್ಕಾಗಿದ್ದು, ಮತದಾನ ಪ್ರಜಾಪ್ರಭುತ್ವವನ್ನು ಮುಂದೆ ತರಲು ಒಂದು ಉತ್ತಮ ಅವಕಾಶವಾಗಿದೆ ಹೀಗಾಗಿ ಎಲ್ಲರು ತಪ್ಪದೇ ಮತದಾನ ಮಾಡಿ ಎಂದು ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಸಲಹೆ ನೀಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದ ಶಿಕ್ಷಾ ಸ್ಕೂಲ್ ಮತಗಟ್ಟೆಗೆ ಕೋಚ್ ರಾಹುಲ್ ದ್ರಾವಿಡ್, ತಮ್ಮ ಪತ್ನಿ ಮತ್ತು ಮಗನ ಜೊತೆಯಲ್ಲಿ ಆಗಮಿಸಿ ಮತದಾನ ಮಾಡಿದ್ದಾರೆ.
ಬಳಿಕ ಮಾತನಾಡಿದ ಅವರು, ಮತದಾನ ಮಾಡುವುದು ಸಂವಿಧಾನಾತ್ಮಕ ಹಕ್ಕು ಎಲ್ಲರೂ ಬಂದು ಮತದಾನ ಮಾಡಿ, ಅತಿ ಹೆಚ್ಚು ಹೆಚ್ಚು ಜನರು ಬಂದು ಮತದಾನ ಮಾಡಿ, ಈ ಬಾರಿ ಬೆಂಗಳೂರಿನಲ್ಲಿ ಮತದಾನ ಹೆಚ್ಚಾಗಿ ನಡೆಯಬೇಕು ಎಂದಿದ್ದಾರೆ.
ಮತಗಟ್ಟೆಗಳಲ್ಲಿ ಬಿಗಿ ಬಂದೋಬಸ್ತ್ ಹಾಗೂ ಅಚ್ಚುಕಟ್ಟಿನ ನಿರ್ವಹಣೆ ಮಾಡಲಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ನೀಡಿದ್ದಾರೆ. ಎಲ್ಲವು ಚೆನ್ನಾಗಿ ನಡೆಯುತ್ತಿದೆ ಎಂದರು.
ಇನ್ನು ಬೆಂಗಳೂರಿನಲ್ಲಿ ಯುವಕರು ಮತದಾನ ಮಾಡಲು ನಿರ್ಲಕ್ಷ್ಯ ವಹಿಸುತ್ತಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ, ಯುವಕರೆಲ್ಲಾ ಬರಬೇಕು. ಮತದಾನದ ಬಗ್ಗೆ ಮಾಧ್ಯಮಗಳು ಹೆಚ್ಚಿನ ಪ್ರಚಾರ ಮಾಡಬೇಕು. ಯುವಕ-ಯುವತಿಯರನ್ನು ಮತದಾನಕ್ಕೆ ಸೆಳೆಯಲು ಮಾಧ್ಯಮದ ಪಾತ್ರ ಮುಖ್ಯವಾಗಿದ್ದು, ಅದನ್ನು ನೀವು ಮಾಡಬೇಕು. ಈ ಬಾರಿ ಮೊದಲ ಬಾರಿ ಮತದಾನ ಮಾಡುವವರು ಹೆಚ್ಚಾಗಿದ್ದು, ಎಲ್ಲರೂ ಬಂದು ತಪ್ಪದೇ ಮತದಾನ ಮಾಡಿ ಎಂದು ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…