ಕ್ರೀಡೆ

ICC t20 worldcup: ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಈವರೆಗಿನ ಸಾಧನೆಯಿದು!

ಇದೇ ಜೂನ್.‌2 ರಿಂದ ವೆಸ್ಟ್‌ ಇಂಡೀಸ್‌ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ಸಜ್ಜಾಗಿದೆ. ಅನುಭವಿ ಹಾಗೂ ಯುವ ಬ್ಯಾಟರ್‌ಗಳ ದಂಡೇ ಇರುವ ಈ ತಂಡ ಈ ಬಾರಿಯ ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದ್ದು, ಈ ತಂಡಕ್ಕೆ ರೋಹಿತ್‌ ಶರ್ಮಾ ಸಾರಥ್ಯ ವಹಿಸಲಿದ್ದಾರೆ.

ಈ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಜೂನ್‌.5 ರಂದು ಐರ್ಲೆಂಡ್‌ ವಿರುದ್ಧ ಪಂದ್ಯ ಆಡುವ ಮೂಲಕ ಟೂರ್ನಿಯಲ್ಲಿ ಅಭಿಯಾನ ಆರಂಭಿಸಲಿದೆ.

ಇನ್ನು ಒಟ್ಟು 11 ವರ್ಷಗಳ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಮಾಡಿರುವ ಸಾಧನೆಗಳ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

2007: ಚೊಚ್ಚಲ ಟಿ20 ವಿಶ್ವಕಪ್‌ ಟೂರ್ನಿ ನಡೆದದ್ದು 2007 ರಲ್ಲಿ. ಈ ಆವೃತ್ತಿಯನ್ನು ಸೌಥ್‌ ಆಫ್ರಿಕಾ ಆಯೋಜಿಸಿತ್ತು. ಸೆಪ್ಟೆಂಬರ್‌ 24 ರಂದು ಜೋಹಾನ್ಸ್‌ ಬರ್ಗ್‌ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ್‌ ತಂಡವನ್ನು 5 ರನ್‌ಗಳ ಅಂತರಿದಂದ ಮಣಿಸಿದ ಎಂ.ಎಸ್‌ ಧೋನಿ ನೇತೃತ್ವದ ಟೀಂ ಇಂಡಿಯಾ ಮೊಲದ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

2009: ಇಂಗ್ಲೆಂಡ್‌ ನಲ್ಲಿ ನಡೆದ ಎರಡನೇ ಆವೃತ್ತಿಯ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ನಿರೀಕ್ಷಿತ ಆಟ ಆಡಲಿಲ್ಲ. ಈ ಟೂರ್ನಿಯಲ್ಲಿ ಇಂಡಿಯಾ ಸೂಪರ್‌-8 ಅಂತರದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿತು. ಟೂರ್ನಿಯಲ್ಲಿ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಸೋತು ನಿರ್ಗಮಿಸಿತು.

2010: ವೆಸ್ಟ್‌ ಇಂಡೀಸ್‌ ಆಯೋಜಿಸಿದ್ದ ಈ ಟೂರ್ನಿಯಲ್ಲಿಯೂ ಸಹಾ ಟೀಂ ಇಂಡಿಯಾ ಗ್ರೂಪ್‌ ಹಂತದಲ್ಲಿ ಎರಡು ಪಂದ್ಯಗಳನ್ನು ಗೆದ್ದು ಸೂಪರ್‌-8 ಹಂತಕ್ಕೆ ತಲುಪಿತು. ಆದರೆ ಕಳೆದ ಸೀಸನ್‌ನಂತೆಯೇ ಇದರಲ್ಲಿಯೂ ಸೋತು ಟೂರ್ನಿಯಿಂದ ಹೊರಬಿದ್ದಿತು.

2012: ಸೆಪ್ಟೆಂಬರ್‌ನಲ್ಲಿ ನಡೆದ ಈ ಟೂರ್ನಿಯನ್ನು ಶ್ರೀಲಂಕಾ ಆಯೋಜಿಸಿತ್ತು. ಟೀಂ ಇಂಡಿಯಾ ಇದರಲ್ಲಿ ಸೂಪರ್‌-8 ಹಂತದಲ್ಲಿ ಮೂರಕ್ಕೆ ಎರಡು ಪಂದ್ಯಗಳನ್ನು ಗೆದ್ದು ಸೆಮಿಸ್‌ಗೆ ಅರ್ಹತೆ ಪಡೆಯಿತು. ಆದರೆ ನೆಟ್‌ ರನ್‌ರೇಟ್‌ ಆಧಾರದಲ್ಲಿ ಹೆಚ್ಚು ಅಂಕ ಪಡೆದಿದ್ದ ಪಾಕಿಸ್ತಾನ ಟೀಂ ಇಂಡಿಯಾವನ್ನು ಬದಿಗೊತ್ತಿ ಸೆಮಿಸ್‌ಗೆ ಲಗ್ಗೆಯಿಟ್ಟಿತು. ಆ ಮೂಲಕ ಟೀಂ ಇಂಡಿಯಾ ಅಭಿಯಾನ ಅಂತ್ಯಗೊಂಡಿತ್ತು.

2014: ಈ ಬಾರಿ ಬಾಂಗ್ಲಾದೇಶ ಆಯೋಜಿಸಿದ್ದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಎರಡನೇ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿತು. ಆದರೆ ಫೈನಲ್‌ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲುವ ಮೂಲಕ ರನ್ನರ್‌ಅಪ್‌ಗೆ ತೃಪ್ತಿಪಟ್ಟುಕೊಂಡಿತು. ಈ ಟೂರ್ನಿಯಲ್ಲಿ ಅತಿಹೆಚ್ಚು ರನ್‌ ಗಳಿಸಿದ ಆಟಗರನಾಗಿ ವಿರಾಟ್‌ ಮುಂಚೂಣಿಯಲ್ಲಿದ್ದರು.

2016: ಭಾರತವೇ ಆತಿಥ್ಯ ವಹಿಸಿದ್ದ ಟಿ20 ವಿಶ್ವಕಪ್‌ನಲ್ಲಿ ಭಾರೀ ಮುಖಭಂಗ ಅನುಭಿವಿಸಿತ್ತು ಟೀಂ ಇಂಡಿಯಾ. ಸೆಮಿಸ್‌ನಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಹೀನಾಯ ಪ್ರದರ್ಶನ ನೀಡಿದ ಟೀಂ ಇಂಡಿಯಾ ಸೆಮಿಸ್‌ಗೆ ಅಭಿಯಾನ ಮುಗಿಸಿದರು. ಟೀಮ್‌ ಇಂಡಿಯಾ ಸೋಲಿಸಿದ ವೆಸ್ಟ್‌ ಇಂಡೀಸ್‌, ಇಂಗ್ಲೆಂಡ್‌ ವಿರುದ್ಧ ಗೆದ್ದು ದಾಖಲೆಯ ಎರಡನೇ ಬಾರಿಗೆ ವಿಶ್ವಕಪ್‌ಗೆ ಮುತ್ತಿಕ್ಕಿತು.

2021: ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್‌ ಆಡಿದ ಟೀಂ ಇಂಡಿಯಾಗೆ ಭಾರೀ ಮುಖಭಂಗ ಉಂಟಾಯಿತು. ಪಾಕಿಸ್ತಾನದ ವಿರುದ್ಧ ನೋ ಲಾಸ್‌ನಲ್ಲಿ ಪಂದ್ಯ ಸೋಲುವ ಮೂಲಕ ಟಾಪ್‌-6 ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿ ಟೂರ್ನಿಯಿಂದ ಹೊರಬಿದ್ದಿತು.

20222: ಆಸೀಸ್‌ನಲ್ಲಿ ನಡೆದ ಈ ಟೂರ್ನಿಯಲ್ಲಿ ರೋಹಿತ್‌ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸೆಮಿಸ್‌ ಗೆ ಅರ್ಹತೆ ಪಡೆಯಿತು. ಆದರೆ ಸೆಮಿಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ನೋ ಲಾಸ್‌ನಲ್ಲಿ ಪಂದ್ಯ ಸೋಲುವ ಮೂಲಕ ಹೀನಾಯ ಸೋಲು ಅನುಭವಿಸಿ ಅಭಿಯಾನ ಅಂತ್ಯಗೊಳಿಸಿತು. ಈ ಸೀಸನ್‌ನಲ್ಲಿ ವಿರಾಟ್‌ 296 ರನ್‌ಗಳಿಸಿ ಟಾಪ್‌ ಸ್ಕೋರರ್‌ ಆಗಿ ಹೊರಹೊಮ್ಮಿದರು.

ಇನ್ನು ವಿಶ್ವಕಪ್‌ನಲ್ಲಿ ಭಾರತದ ಆಟಗಾರನೊಬ್ಬ ಶತಕ ಸಿಡಿಸಿರುವ ದಾಖಲೆ ಸುರೇಶ್‌ ರೈನಾ ಪಾಲಾಗಿದೆ. 2010ರಲ್ಲಿ ಸೌಥ್‌ ಆಫ್ರಿಕಾ ವಿರುದ್ಧ ಶತಕ ಸಿಡಿಸಿದ್ದ ರೈನಾ ಟಿ20 ವಿಶ್ವಕಪ್‌ನಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಮತ್ತು ಈವರೆಗೆ ರೈನಾ ಹೊರತುಪಡಿಸಿ ಭಾರತ ಬೇರಾವ ಆಟಗಾರರಿಂದಲೂ ಟಿ20 ವಿಶ್ವಕಪ್‌ ಶತಕ ದಾಖಲಾಗಿಲ್ಲ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

8 mins ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

17 mins ago

ನಮ್ಮ ತಂದೆಯ ಮರಣ ಮತ್ತು ನನ್ನ ಇಮ್ಮಡಿ ಅವಮಾನ

ಗಾಂಧಿ ಅಭಿಯಾನ ಅರಿವಿನ ಯಾನ  ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…

33 mins ago

ಸಂಪಾದನೆ ಎಂಬ ಧರ್ಮ ಸಂಕಟಕ್ಕೆ ಸಿಲುಕಿ…

ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…

4 hours ago

ಪ್ರವಾಸಿಗರಿಗೆ ಮುಕ್ತವಾದ ಮಾಂದಲ್‌ಪಟ್ಟಿ

ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…

4 hours ago

ಯತೀಂದ್ರಗೆ ನಗರಾಭಿವೃದ್ಧಿ; ಮೈಸೂರಿಗೆ ಯೋಜನೆಗಳ ಸಮೃದ್ಧಿ?

ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…

4 hours ago