ಕ್ರೀಡೆ

ದೀಪಾವಳಿ ಆಚರಿಸಿದ ಟೀಮ್‌ ಇಂಡಿಯಾ; ಹಬ್ಬದ ಉಡುಗೆಯಲ್ಲಿ ಮಿಂಚಿದ ಆಟಗಾರರು

ಸದ್ಯ ಏಕದಿನ ವಿಶ್ವಕಪ್‌ ಟೂರ್ನಿ ಜರುಗುತ್ತಿದ್ದು, ತವರಿನಲ್ಲೇ ನಡೆಯುತ್ತಿರುವ ಈ ಮಹಾ ಕದನದಲ್ಲಿ ಟೀಮ್‌ ಇಂಡಿಯಾ ಯಶಸ್ವಿಯಾಗಿ ಸೆಮಿಫೈನಲ್‌ ಹಂತಕ್ಕೆ ಲಗ್ಗೆ ಇಟ್ಟಿದೆ. ಲೀಗ್‌ ಹಂತದಲ್ಲಿ ಇಲ್ಲಿಯವರೆಗೆ ಒಟ್ಟು ಎಂಟು ಪಂದ್ಯಗಳನ್ನು ಆಡಿರುವ ಭಾರತ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದಿದ್ದು ಇಂದು ( ನವೆಂಬರ್‌ 12 ) ನಡೆಯಲಿರುವ ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ನೆದರ್‌ಲೆಂಡ್‌ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗಲಿದ್ದು ಮಧ್ಯಾಹ್ನ 2 ಗಂಟೆಗೆ ಈ ಪಂದ್ಯ ಶುರುವಾಗಲಿದೆ. ಈ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಟೀಮ್‌ ಇಂಡಿಯಾ ಆಟಗಾರರು ಹಾಗೂ ಸಿಬ್ಬಂದಿ ವರ್ಗ ದೀಪಾವಳಿ ಹಬ್ಬವನ್ನು ಆಚರಿಸಿದೆ.

ಹೌದು, ಬಿಸಿಸಿಐ ಟೀಮ್‌ ಇಂಡಿಯಾ ಆಟಗಾರರು ದೀಪಾವಳಿ ಆಚರಿಸಿದ ವಿಡಿಯೊವನ್ನು ಸಾಮಾಜಿಕ ಜಾಲತಾಣದ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದೆ. ಈ ವಿಡಿಯೊದಲ್ಲಿ ಕೋಚ್‌ ರಾಹುಲ್‌ ದ್ರಾವಿಡ್‌, ತಂಡಡ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಕೆಎಲ್‌ ರಾಹುಲ್‌, ಜಪ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಇಶಾನ್‌ ಕಿಶನ್‌, ಸೂರ್ಯಕುಮಾರ್‌ ಯಾದವ್‌ ಸೇರಿದಂತೆ ಇನ್ನೂ ಹಲವಾರು ಆಟಗಾರರು ಕಾಣಿಸಿಕೊಂಡಿದ್ದಾರೆ.

ದೇವರ ಪೂಜೆ ಹಾಗೂ ದೀಪಾವಳಿ ಪ್ರಯುಕ್ತ ದೀಪ ಹಚ್ಚುವ ಮೂಲಕ ಹಬ್ಬದ ಆಚರಣೆ ಮಾಡಿರುವ ಟೀಮ್‌ ಇಂಡಿಯಾ ಆಟಗಾರರು ತಮ್ಮ ಕುಟುಂಬ ಸದಸ್ಯರ ಜತೆ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ನೆದರ್‌ಲೆಂಡ್‌ ಹಾಗೂ ಭಾರತದ ನಡುವಿನ ಇಂದಿನ ಪಂದ್ಯದ ಮೂಲಕ ಈ ಬಾರಿಯ ವಿಶ್ವಕಪ್‌ ಟೂರ್ನಿಯ ಲೀಗ್‌ ಹಂತ ಮುಕ್ತಾಯಗೊಳ್ಳಲಿದ್ದು, ಸೆಮಿಫೈನಲ್‌ ಸುತ್ತಿನ ಪಂದ್ಯಗಳು ನವೆಂಬರ್‌ 15 & 16ರಂದು ಜರುಗಲಿವೆ.

ಅಂಕಪಟ್ಟಿಯಲ್ಲಿ ಒಂದನೇ ಸ್ಥಾನವನ್ನು ಪಡೆದುಕೊಂಡಿರುವ ಭಾರತ ತಂಡ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸೆಣಸಾಟ ನಡೆಸಲಿವೆ.

andolana

Recent Posts

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

57 mins ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

1 hour ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

2 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

3 hours ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

3 hours ago