ಕ್ರೀಡೆ

ದೀಪಾವಳಿ ಆಚರಿಸಿದ ಟೀಮ್‌ ಇಂಡಿಯಾ; ಹಬ್ಬದ ಉಡುಗೆಯಲ್ಲಿ ಮಿಂಚಿದ ಆಟಗಾರರು

ಸದ್ಯ ಏಕದಿನ ವಿಶ್ವಕಪ್‌ ಟೂರ್ನಿ ಜರುಗುತ್ತಿದ್ದು, ತವರಿನಲ್ಲೇ ನಡೆಯುತ್ತಿರುವ ಈ ಮಹಾ ಕದನದಲ್ಲಿ ಟೀಮ್‌ ಇಂಡಿಯಾ ಯಶಸ್ವಿಯಾಗಿ ಸೆಮಿಫೈನಲ್‌ ಹಂತಕ್ಕೆ ಲಗ್ಗೆ ಇಟ್ಟಿದೆ. ಲೀಗ್‌ ಹಂತದಲ್ಲಿ ಇಲ್ಲಿಯವರೆಗೆ ಒಟ್ಟು ಎಂಟು ಪಂದ್ಯಗಳನ್ನು ಆಡಿರುವ ಭಾರತ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದಿದ್ದು ಇಂದು ( ನವೆಂಬರ್‌ 12 ) ನಡೆಯಲಿರುವ ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ನೆದರ್‌ಲೆಂಡ್‌ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗಲಿದ್ದು ಮಧ್ಯಾಹ್ನ 2 ಗಂಟೆಗೆ ಈ ಪಂದ್ಯ ಶುರುವಾಗಲಿದೆ. ಈ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಟೀಮ್‌ ಇಂಡಿಯಾ ಆಟಗಾರರು ಹಾಗೂ ಸಿಬ್ಬಂದಿ ವರ್ಗ ದೀಪಾವಳಿ ಹಬ್ಬವನ್ನು ಆಚರಿಸಿದೆ.

ಹೌದು, ಬಿಸಿಸಿಐ ಟೀಮ್‌ ಇಂಡಿಯಾ ಆಟಗಾರರು ದೀಪಾವಳಿ ಆಚರಿಸಿದ ವಿಡಿಯೊವನ್ನು ಸಾಮಾಜಿಕ ಜಾಲತಾಣದ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದೆ. ಈ ವಿಡಿಯೊದಲ್ಲಿ ಕೋಚ್‌ ರಾಹುಲ್‌ ದ್ರಾವಿಡ್‌, ತಂಡಡ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಕೆಎಲ್‌ ರಾಹುಲ್‌, ಜಪ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಇಶಾನ್‌ ಕಿಶನ್‌, ಸೂರ್ಯಕುಮಾರ್‌ ಯಾದವ್‌ ಸೇರಿದಂತೆ ಇನ್ನೂ ಹಲವಾರು ಆಟಗಾರರು ಕಾಣಿಸಿಕೊಂಡಿದ್ದಾರೆ.

ದೇವರ ಪೂಜೆ ಹಾಗೂ ದೀಪಾವಳಿ ಪ್ರಯುಕ್ತ ದೀಪ ಹಚ್ಚುವ ಮೂಲಕ ಹಬ್ಬದ ಆಚರಣೆ ಮಾಡಿರುವ ಟೀಮ್‌ ಇಂಡಿಯಾ ಆಟಗಾರರು ತಮ್ಮ ಕುಟುಂಬ ಸದಸ್ಯರ ಜತೆ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ನೆದರ್‌ಲೆಂಡ್‌ ಹಾಗೂ ಭಾರತದ ನಡುವಿನ ಇಂದಿನ ಪಂದ್ಯದ ಮೂಲಕ ಈ ಬಾರಿಯ ವಿಶ್ವಕಪ್‌ ಟೂರ್ನಿಯ ಲೀಗ್‌ ಹಂತ ಮುಕ್ತಾಯಗೊಳ್ಳಲಿದ್ದು, ಸೆಮಿಫೈನಲ್‌ ಸುತ್ತಿನ ಪಂದ್ಯಗಳು ನವೆಂಬರ್‌ 15 & 16ರಂದು ಜರುಗಲಿವೆ.

ಅಂಕಪಟ್ಟಿಯಲ್ಲಿ ಒಂದನೇ ಸ್ಥಾನವನ್ನು ಪಡೆದುಕೊಂಡಿರುವ ಭಾರತ ತಂಡ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸೆಣಸಾಟ ನಡೆಸಲಿವೆ.

andolana

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

3 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

5 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

5 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

5 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

5 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

6 hours ago