ಕ್ರೀಡೆ

ದೀಪಾವಳಿ ಆಚರಿಸಿದ ಟೀಮ್‌ ಇಂಡಿಯಾ; ಹಬ್ಬದ ಉಡುಗೆಯಲ್ಲಿ ಮಿಂಚಿದ ಆಟಗಾರರು

ಸದ್ಯ ಏಕದಿನ ವಿಶ್ವಕಪ್‌ ಟೂರ್ನಿ ಜರುಗುತ್ತಿದ್ದು, ತವರಿನಲ್ಲೇ ನಡೆಯುತ್ತಿರುವ ಈ ಮಹಾ ಕದನದಲ್ಲಿ ಟೀಮ್‌ ಇಂಡಿಯಾ ಯಶಸ್ವಿಯಾಗಿ ಸೆಮಿಫೈನಲ್‌ ಹಂತಕ್ಕೆ ಲಗ್ಗೆ ಇಟ್ಟಿದೆ. ಲೀಗ್‌ ಹಂತದಲ್ಲಿ ಇಲ್ಲಿಯವರೆಗೆ ಒಟ್ಟು ಎಂಟು ಪಂದ್ಯಗಳನ್ನು ಆಡಿರುವ ಭಾರತ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದಿದ್ದು ಇಂದು ( ನವೆಂಬರ್‌ 12 ) ನಡೆಯಲಿರುವ ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ನೆದರ್‌ಲೆಂಡ್‌ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗಲಿದ್ದು ಮಧ್ಯಾಹ್ನ 2 ಗಂಟೆಗೆ ಈ ಪಂದ್ಯ ಶುರುವಾಗಲಿದೆ. ಈ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಟೀಮ್‌ ಇಂಡಿಯಾ ಆಟಗಾರರು ಹಾಗೂ ಸಿಬ್ಬಂದಿ ವರ್ಗ ದೀಪಾವಳಿ ಹಬ್ಬವನ್ನು ಆಚರಿಸಿದೆ.

ಹೌದು, ಬಿಸಿಸಿಐ ಟೀಮ್‌ ಇಂಡಿಯಾ ಆಟಗಾರರು ದೀಪಾವಳಿ ಆಚರಿಸಿದ ವಿಡಿಯೊವನ್ನು ಸಾಮಾಜಿಕ ಜಾಲತಾಣದ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದೆ. ಈ ವಿಡಿಯೊದಲ್ಲಿ ಕೋಚ್‌ ರಾಹುಲ್‌ ದ್ರಾವಿಡ್‌, ತಂಡಡ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಕೆಎಲ್‌ ರಾಹುಲ್‌, ಜಪ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಇಶಾನ್‌ ಕಿಶನ್‌, ಸೂರ್ಯಕುಮಾರ್‌ ಯಾದವ್‌ ಸೇರಿದಂತೆ ಇನ್ನೂ ಹಲವಾರು ಆಟಗಾರರು ಕಾಣಿಸಿಕೊಂಡಿದ್ದಾರೆ.

ದೇವರ ಪೂಜೆ ಹಾಗೂ ದೀಪಾವಳಿ ಪ್ರಯುಕ್ತ ದೀಪ ಹಚ್ಚುವ ಮೂಲಕ ಹಬ್ಬದ ಆಚರಣೆ ಮಾಡಿರುವ ಟೀಮ್‌ ಇಂಡಿಯಾ ಆಟಗಾರರು ತಮ್ಮ ಕುಟುಂಬ ಸದಸ್ಯರ ಜತೆ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ನೆದರ್‌ಲೆಂಡ್‌ ಹಾಗೂ ಭಾರತದ ನಡುವಿನ ಇಂದಿನ ಪಂದ್ಯದ ಮೂಲಕ ಈ ಬಾರಿಯ ವಿಶ್ವಕಪ್‌ ಟೂರ್ನಿಯ ಲೀಗ್‌ ಹಂತ ಮುಕ್ತಾಯಗೊಳ್ಳಲಿದ್ದು, ಸೆಮಿಫೈನಲ್‌ ಸುತ್ತಿನ ಪಂದ್ಯಗಳು ನವೆಂಬರ್‌ 15 & 16ರಂದು ಜರುಗಲಿವೆ.

ಅಂಕಪಟ್ಟಿಯಲ್ಲಿ ಒಂದನೇ ಸ್ಥಾನವನ್ನು ಪಡೆದುಕೊಂಡಿರುವ ಭಾರತ ತಂಡ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸೆಣಸಾಟ ನಡೆಸಲಿವೆ.

andolana

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

3 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

4 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

5 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

6 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

7 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

8 hours ago