ಕ್ರೀಡೆ

ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ!

ನವದೆಹಲಿ: ದಕ್ಷಿಣ ಆಫ್ರಿಕಾ ತಂಡದ ನಡುವಿನ ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿದ ಹಿನ್ನಲೆಯಲ್ಲಿ ಭಾರತ ತಂಡ ವಿಶ್ವ ಟೆಸ್ಟ್‌ ಚಾಂಪಯನ್‌ ಶಿಪ್‌ ಟೂರ್ನಿಯಲ್ಲಿ ಅಗ್ರಸ್ಥಾನಕೇರಿದೆ.

ಕೇಪ್‌ಟೌನ್‌ ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳ ಬೇಟೆಯಾಡಿತು. ಭಾರತ ಬೌಲರ್‌ಗಳ ಮುಂದೆ ಮಂಕಾದ ಆಫ್ರಿಕಾ ತಂಡ ತತ್ತರಿಸಿ ಹೋಯಿತು. ಟೀಂ ಇಂಡಿಯಾ ಪರ ಬುಮ್ರಾ ಮತ್ತು ಸಿರಾಜ್‌ ೧೫ ವಿಕೆಟ್‌ಗಳನ್ನು ಪಡೆದು ಗಮನ ಸೆಳೆದರು.

೨೦೨೩-೨೫ರ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಭಾರತ ೫೪.೧೫ ಶೇಕಡಾವಾರು ಅಂಕದೊಂದಿಗೆ ಅಗ್ರಸ್ಥಾನಕ್ಕೇರಿತು. ಹರಿಣ ಪಡೆ ೫೦ ಶೇಕಡಾವಾರು ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದೆ.

ಭಾರತ 26 ಅಂಕಗಳನ್ನು ತನ್ನ ಖಾತೆಯಲ್ಲಿ ಹೊಂದಿದ್ದು ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಲಾ 12 ಅಂಕಗಳನ್ನು ಹೊಂದಿವೆ. ಆಸ್ಟ್ರೇಲಿಯಾ 42 ಹಾಗೂ ಬಾಂಗ್ಲಾದೇಶ 12 ಅಂಕ ಪಡೆದಿದ್ದು, ಎಲ್ಲ ತಂಡಗಳ ಯಶಸ್ಸಿನ ದರ ಶೇಕಡ 50ರಷ್ಟಿದೆ. ಪಾಕಿಸ್ತಾನ 22 ಅಂಕ ಹೊಂದಿದ್ದರೂ, ಶೇಕಡಾವಾರು ಯಶಸ್ಸಿನ ದರದಲ್ಲಿ ಆರನೇ ಸ್ಥಾನಗಳಲ್ಲಿವೆ.

ಕೇವಲ ೧೦೭ ಓವರ್‌ಗಳಲ್ಲಿಯೇ ಅಂತ್ಯಗೊಂಡ ಪಂದ್ಯದಲ್ಲಿ ಟೀಂ ಇಂಡಿಯಾ ತಂಡ ಹರಿಣಗಳ ವಿರುದ್ಧ ಏಳು ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಮೊದಲ ಪಂದ್ಯದಲ್ಲಿ ಹಿನಾಯ ಸೋಲು ಅನುಭವಿಸಿದ್ದ ಭಾರತ ತಂಡ ಎರಡನೇ ಟೆಸ್ಟ್‌ನಲ್ಲಿ ಗೆಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿತ್ತು. ಇದರೊಂದಿಗೆ ಕೇಪ್‌ಟೌನ್‌ ನಲ್ಲಿ ಗೆಲುವನ್ನೇ ಕಾಣದ ಟೀಂ ಇಂಡಿಯಾ ತಂಡ ತನ್ನ ಮೊಲದ ಗೆಲುವು ದಾಖಲಿಸಿತು.

andolanait

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

3 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

4 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

4 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

4 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

4 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

5 hours ago