ಕ್ರೀಡೆ

ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ!

ನವದೆಹಲಿ: ದಕ್ಷಿಣ ಆಫ್ರಿಕಾ ತಂಡದ ನಡುವಿನ ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿದ ಹಿನ್ನಲೆಯಲ್ಲಿ ಭಾರತ ತಂಡ ವಿಶ್ವ ಟೆಸ್ಟ್‌ ಚಾಂಪಯನ್‌ ಶಿಪ್‌ ಟೂರ್ನಿಯಲ್ಲಿ ಅಗ್ರಸ್ಥಾನಕೇರಿದೆ.

ಕೇಪ್‌ಟೌನ್‌ ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳ ಬೇಟೆಯಾಡಿತು. ಭಾರತ ಬೌಲರ್‌ಗಳ ಮುಂದೆ ಮಂಕಾದ ಆಫ್ರಿಕಾ ತಂಡ ತತ್ತರಿಸಿ ಹೋಯಿತು. ಟೀಂ ಇಂಡಿಯಾ ಪರ ಬುಮ್ರಾ ಮತ್ತು ಸಿರಾಜ್‌ ೧೫ ವಿಕೆಟ್‌ಗಳನ್ನು ಪಡೆದು ಗಮನ ಸೆಳೆದರು.

೨೦೨೩-೨೫ರ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಭಾರತ ೫೪.೧೫ ಶೇಕಡಾವಾರು ಅಂಕದೊಂದಿಗೆ ಅಗ್ರಸ್ಥಾನಕ್ಕೇರಿತು. ಹರಿಣ ಪಡೆ ೫೦ ಶೇಕಡಾವಾರು ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದೆ.

ಭಾರತ 26 ಅಂಕಗಳನ್ನು ತನ್ನ ಖಾತೆಯಲ್ಲಿ ಹೊಂದಿದ್ದು ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಲಾ 12 ಅಂಕಗಳನ್ನು ಹೊಂದಿವೆ. ಆಸ್ಟ್ರೇಲಿಯಾ 42 ಹಾಗೂ ಬಾಂಗ್ಲಾದೇಶ 12 ಅಂಕ ಪಡೆದಿದ್ದು, ಎಲ್ಲ ತಂಡಗಳ ಯಶಸ್ಸಿನ ದರ ಶೇಕಡ 50ರಷ್ಟಿದೆ. ಪಾಕಿಸ್ತಾನ 22 ಅಂಕ ಹೊಂದಿದ್ದರೂ, ಶೇಕಡಾವಾರು ಯಶಸ್ಸಿನ ದರದಲ್ಲಿ ಆರನೇ ಸ್ಥಾನಗಳಲ್ಲಿವೆ.

ಕೇವಲ ೧೦೭ ಓವರ್‌ಗಳಲ್ಲಿಯೇ ಅಂತ್ಯಗೊಂಡ ಪಂದ್ಯದಲ್ಲಿ ಟೀಂ ಇಂಡಿಯಾ ತಂಡ ಹರಿಣಗಳ ವಿರುದ್ಧ ಏಳು ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಮೊದಲ ಪಂದ್ಯದಲ್ಲಿ ಹಿನಾಯ ಸೋಲು ಅನುಭವಿಸಿದ್ದ ಭಾರತ ತಂಡ ಎರಡನೇ ಟೆಸ್ಟ್‌ನಲ್ಲಿ ಗೆಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿತ್ತು. ಇದರೊಂದಿಗೆ ಕೇಪ್‌ಟೌನ್‌ ನಲ್ಲಿ ಗೆಲುವನ್ನೇ ಕಾಣದ ಟೀಂ ಇಂಡಿಯಾ ತಂಡ ತನ್ನ ಮೊಲದ ಗೆಲುವು ದಾಖಲಿಸಿತು.

andolanait

Recent Posts

ದಿಲ್ಲಿಯಲ್ಲಿ ಅಟಲ್‌ ಕ್ಯಾಂಟಿನ್‌ ಆರಂಭ : ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ 5 ರೂ.ಗೆ ಊಟ

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…

5 mins ago

ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…

14 mins ago

ಮೈಸೂರು | ಮನುಸ್ಮೃತಿ ಸುಟ್ಟು ಸಮಾನತೆ ಜ್ಯೋತಿ ಬೆಳಗಿಸಿದ ದಸಂಸ

ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…

21 mins ago

ಮರ್ಯಾದೆ ಹತ್ಯೆಗೆ ಮನುಸ್ಮೃತಿ ನಿಯಮಗಳೇ ಕಾರಣ : ಚಿಂತಕ ಶಿವಸುಂದರ್‌ ಪ್ರತಿಪಾದನೆ

ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ…

40 mins ago

ಚಾ.ನಗರ | ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ

ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…

51 mins ago

ಕರ್ನಾಟಕದಲ್ಲಿ ಉದ್ಯೋಗ ಸೃಷ್ಠಿ | ರಾಹುಲ್‌ ಗಾಂಧಿ ಹಾಗೂ ಅಶ್ವಿನ್‌ ವೈಷ್ಣವ್‌ ನಡುವೆ ಟ್ವಿಟ್‌ ವಾರ್…

ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…

2 hours ago