ನವದೆಹಲಿ: ದಕ್ಷಿಣ ಆಫ್ರಿಕಾ ತಂಡದ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿದ ಹಿನ್ನಲೆಯಲ್ಲಿ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಯನ್ ಶಿಪ್ ಟೂರ್ನಿಯಲ್ಲಿ ಅಗ್ರಸ್ಥಾನಕೇರಿದೆ.
ಕೇಪ್ಟೌನ್ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳ ಬೇಟೆಯಾಡಿತು. ಭಾರತ ಬೌಲರ್ಗಳ ಮುಂದೆ ಮಂಕಾದ ಆಫ್ರಿಕಾ ತಂಡ ತತ್ತರಿಸಿ ಹೋಯಿತು. ಟೀಂ ಇಂಡಿಯಾ ಪರ ಬುಮ್ರಾ ಮತ್ತು ಸಿರಾಜ್ ೧೫ ವಿಕೆಟ್ಗಳನ್ನು ಪಡೆದು ಗಮನ ಸೆಳೆದರು.
೨೦೨೩-೨೫ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಭಾರತ ೫೪.೧೫ ಶೇಕಡಾವಾರು ಅಂಕದೊಂದಿಗೆ ಅಗ್ರಸ್ಥಾನಕ್ಕೇರಿತು. ಹರಿಣ ಪಡೆ ೫೦ ಶೇಕಡಾವಾರು ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದೆ.
ಭಾರತ 26 ಅಂಕಗಳನ್ನು ತನ್ನ ಖಾತೆಯಲ್ಲಿ ಹೊಂದಿದ್ದು ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಲಾ 12 ಅಂಕಗಳನ್ನು ಹೊಂದಿವೆ. ಆಸ್ಟ್ರೇಲಿಯಾ 42 ಹಾಗೂ ಬಾಂಗ್ಲಾದೇಶ 12 ಅಂಕ ಪಡೆದಿದ್ದು, ಎಲ್ಲ ತಂಡಗಳ ಯಶಸ್ಸಿನ ದರ ಶೇಕಡ 50ರಷ್ಟಿದೆ. ಪಾಕಿಸ್ತಾನ 22 ಅಂಕ ಹೊಂದಿದ್ದರೂ, ಶೇಕಡಾವಾರು ಯಶಸ್ಸಿನ ದರದಲ್ಲಿ ಆರನೇ ಸ್ಥಾನಗಳಲ್ಲಿವೆ.
ಕೇವಲ ೧೦೭ ಓವರ್ಗಳಲ್ಲಿಯೇ ಅಂತ್ಯಗೊಂಡ ಪಂದ್ಯದಲ್ಲಿ ಟೀಂ ಇಂಡಿಯಾ ತಂಡ ಹರಿಣಗಳ ವಿರುದ್ಧ ಏಳು ವಿಕೆಟ್ಗಳ ಅಂತರದಿಂದ ಸೋಲಿಸಿತು. ಮೊದಲ ಪಂದ್ಯದಲ್ಲಿ ಹಿನಾಯ ಸೋಲು ಅನುಭವಿಸಿದ್ದ ಭಾರತ ತಂಡ ಎರಡನೇ ಟೆಸ್ಟ್ನಲ್ಲಿ ಗೆಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿತ್ತು. ಇದರೊಂದಿಗೆ ಕೇಪ್ಟೌನ್ ನಲ್ಲಿ ಗೆಲುವನ್ನೇ ಕಾಣದ ಟೀಂ ಇಂಡಿಯಾ ತಂಡ ತನ್ನ ಮೊಲದ ಗೆಲುವು ದಾಖಲಿಸಿತು.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…