ನವದೆಹಲಿ: ದಕ್ಷಿಣ ಆಫ್ರಿಕಾ ತಂಡದ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿದ ಹಿನ್ನಲೆಯಲ್ಲಿ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಯನ್ ಶಿಪ್ ಟೂರ್ನಿಯಲ್ಲಿ ಅಗ್ರಸ್ಥಾನಕೇರಿದೆ.
ಕೇಪ್ಟೌನ್ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳ ಬೇಟೆಯಾಡಿತು. ಭಾರತ ಬೌಲರ್ಗಳ ಮುಂದೆ ಮಂಕಾದ ಆಫ್ರಿಕಾ ತಂಡ ತತ್ತರಿಸಿ ಹೋಯಿತು. ಟೀಂ ಇಂಡಿಯಾ ಪರ ಬುಮ್ರಾ ಮತ್ತು ಸಿರಾಜ್ ೧೫ ವಿಕೆಟ್ಗಳನ್ನು ಪಡೆದು ಗಮನ ಸೆಳೆದರು.
೨೦೨೩-೨೫ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಭಾರತ ೫೪.೧೫ ಶೇಕಡಾವಾರು ಅಂಕದೊಂದಿಗೆ ಅಗ್ರಸ್ಥಾನಕ್ಕೇರಿತು. ಹರಿಣ ಪಡೆ ೫೦ ಶೇಕಡಾವಾರು ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದೆ.
ಭಾರತ 26 ಅಂಕಗಳನ್ನು ತನ್ನ ಖಾತೆಯಲ್ಲಿ ಹೊಂದಿದ್ದು ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಲಾ 12 ಅಂಕಗಳನ್ನು ಹೊಂದಿವೆ. ಆಸ್ಟ್ರೇಲಿಯಾ 42 ಹಾಗೂ ಬಾಂಗ್ಲಾದೇಶ 12 ಅಂಕ ಪಡೆದಿದ್ದು, ಎಲ್ಲ ತಂಡಗಳ ಯಶಸ್ಸಿನ ದರ ಶೇಕಡ 50ರಷ್ಟಿದೆ. ಪಾಕಿಸ್ತಾನ 22 ಅಂಕ ಹೊಂದಿದ್ದರೂ, ಶೇಕಡಾವಾರು ಯಶಸ್ಸಿನ ದರದಲ್ಲಿ ಆರನೇ ಸ್ಥಾನಗಳಲ್ಲಿವೆ.
ಕೇವಲ ೧೦೭ ಓವರ್ಗಳಲ್ಲಿಯೇ ಅಂತ್ಯಗೊಂಡ ಪಂದ್ಯದಲ್ಲಿ ಟೀಂ ಇಂಡಿಯಾ ತಂಡ ಹರಿಣಗಳ ವಿರುದ್ಧ ಏಳು ವಿಕೆಟ್ಗಳ ಅಂತರದಿಂದ ಸೋಲಿಸಿತು. ಮೊದಲ ಪಂದ್ಯದಲ್ಲಿ ಹಿನಾಯ ಸೋಲು ಅನುಭವಿಸಿದ್ದ ಭಾರತ ತಂಡ ಎರಡನೇ ಟೆಸ್ಟ್ನಲ್ಲಿ ಗೆಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿತ್ತು. ಇದರೊಂದಿಗೆ ಕೇಪ್ಟೌನ್ ನಲ್ಲಿ ಗೆಲುವನ್ನೇ ಕಾಣದ ಟೀಂ ಇಂಡಿಯಾ ತಂಡ ತನ್ನ ಮೊಲದ ಗೆಲುವು ದಾಖಲಿಸಿತು.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…