ಕ್ರೀಡೆ

ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ!

ನವದೆಹಲಿ: ದಕ್ಷಿಣ ಆಫ್ರಿಕಾ ತಂಡದ ನಡುವಿನ ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿದ ಹಿನ್ನಲೆಯಲ್ಲಿ ಭಾರತ ತಂಡ ವಿಶ್ವ ಟೆಸ್ಟ್‌ ಚಾಂಪಯನ್‌ ಶಿಪ್‌ ಟೂರ್ನಿಯಲ್ಲಿ ಅಗ್ರಸ್ಥಾನಕೇರಿದೆ.

ಕೇಪ್‌ಟೌನ್‌ ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳ ಬೇಟೆಯಾಡಿತು. ಭಾರತ ಬೌಲರ್‌ಗಳ ಮುಂದೆ ಮಂಕಾದ ಆಫ್ರಿಕಾ ತಂಡ ತತ್ತರಿಸಿ ಹೋಯಿತು. ಟೀಂ ಇಂಡಿಯಾ ಪರ ಬುಮ್ರಾ ಮತ್ತು ಸಿರಾಜ್‌ ೧೫ ವಿಕೆಟ್‌ಗಳನ್ನು ಪಡೆದು ಗಮನ ಸೆಳೆದರು.

೨೦೨೩-೨೫ರ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಭಾರತ ೫೪.೧೫ ಶೇಕಡಾವಾರು ಅಂಕದೊಂದಿಗೆ ಅಗ್ರಸ್ಥಾನಕ್ಕೇರಿತು. ಹರಿಣ ಪಡೆ ೫೦ ಶೇಕಡಾವಾರು ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದೆ.

ಭಾರತ 26 ಅಂಕಗಳನ್ನು ತನ್ನ ಖಾತೆಯಲ್ಲಿ ಹೊಂದಿದ್ದು ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಲಾ 12 ಅಂಕಗಳನ್ನು ಹೊಂದಿವೆ. ಆಸ್ಟ್ರೇಲಿಯಾ 42 ಹಾಗೂ ಬಾಂಗ್ಲಾದೇಶ 12 ಅಂಕ ಪಡೆದಿದ್ದು, ಎಲ್ಲ ತಂಡಗಳ ಯಶಸ್ಸಿನ ದರ ಶೇಕಡ 50ರಷ್ಟಿದೆ. ಪಾಕಿಸ್ತಾನ 22 ಅಂಕ ಹೊಂದಿದ್ದರೂ, ಶೇಕಡಾವಾರು ಯಶಸ್ಸಿನ ದರದಲ್ಲಿ ಆರನೇ ಸ್ಥಾನಗಳಲ್ಲಿವೆ.

ಕೇವಲ ೧೦೭ ಓವರ್‌ಗಳಲ್ಲಿಯೇ ಅಂತ್ಯಗೊಂಡ ಪಂದ್ಯದಲ್ಲಿ ಟೀಂ ಇಂಡಿಯಾ ತಂಡ ಹರಿಣಗಳ ವಿರುದ್ಧ ಏಳು ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಮೊದಲ ಪಂದ್ಯದಲ್ಲಿ ಹಿನಾಯ ಸೋಲು ಅನುಭವಿಸಿದ್ದ ಭಾರತ ತಂಡ ಎರಡನೇ ಟೆಸ್ಟ್‌ನಲ್ಲಿ ಗೆಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿತ್ತು. ಇದರೊಂದಿಗೆ ಕೇಪ್‌ಟೌನ್‌ ನಲ್ಲಿ ಗೆಲುವನ್ನೇ ಕಾಣದ ಟೀಂ ಇಂಡಿಯಾ ತಂಡ ತನ್ನ ಮೊಲದ ಗೆಲುವು ದಾಖಲಿಸಿತು.

andolanait

Recent Posts

ಆಂದೋಲನ ಹಾಡುಪಾಡು | ಹುಲಿಯ ಕಣ್ಣಿನಲ್ಲಿ ಕಂಡ ನನ್ನದೇ ಪ್ರತಿಬಿಂಬ

ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…

18 mins ago

ಅರಣ್ಯ ಸಿಬ್ಬಂದಿಗೆ ಇಲಾಖೆಯಿಂದ ಬೇಕಿದೆ ಪ್ರೋತ್ಸಾಹ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…

30 mins ago

ಹನೂರು | ಉಡುತೊರೆಹಳ್ಳ ಜಲಾಶಯದ ಹೂಳು ತೆಗೆಯದೆ ಸಮಸ್ಯೆ

ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…

37 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 26 ಶನಿವಾರ

48 mins ago

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

2 hours ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

10 hours ago