ಕ್ರೀಡೆ

ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ!

ನವದೆಹಲಿ: ದಕ್ಷಿಣ ಆಫ್ರಿಕಾ ತಂಡದ ನಡುವಿನ ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿದ ಹಿನ್ನಲೆಯಲ್ಲಿ ಭಾರತ ತಂಡ ವಿಶ್ವ ಟೆಸ್ಟ್‌ ಚಾಂಪಯನ್‌ ಶಿಪ್‌ ಟೂರ್ನಿಯಲ್ಲಿ ಅಗ್ರಸ್ಥಾನಕೇರಿದೆ.

ಕೇಪ್‌ಟೌನ್‌ ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳ ಬೇಟೆಯಾಡಿತು. ಭಾರತ ಬೌಲರ್‌ಗಳ ಮುಂದೆ ಮಂಕಾದ ಆಫ್ರಿಕಾ ತಂಡ ತತ್ತರಿಸಿ ಹೋಯಿತು. ಟೀಂ ಇಂಡಿಯಾ ಪರ ಬುಮ್ರಾ ಮತ್ತು ಸಿರಾಜ್‌ ೧೫ ವಿಕೆಟ್‌ಗಳನ್ನು ಪಡೆದು ಗಮನ ಸೆಳೆದರು.

೨೦೨೩-೨೫ರ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಭಾರತ ೫೪.೧೫ ಶೇಕಡಾವಾರು ಅಂಕದೊಂದಿಗೆ ಅಗ್ರಸ್ಥಾನಕ್ಕೇರಿತು. ಹರಿಣ ಪಡೆ ೫೦ ಶೇಕಡಾವಾರು ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದೆ.

ಭಾರತ 26 ಅಂಕಗಳನ್ನು ತನ್ನ ಖಾತೆಯಲ್ಲಿ ಹೊಂದಿದ್ದು ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಲಾ 12 ಅಂಕಗಳನ್ನು ಹೊಂದಿವೆ. ಆಸ್ಟ್ರೇಲಿಯಾ 42 ಹಾಗೂ ಬಾಂಗ್ಲಾದೇಶ 12 ಅಂಕ ಪಡೆದಿದ್ದು, ಎಲ್ಲ ತಂಡಗಳ ಯಶಸ್ಸಿನ ದರ ಶೇಕಡ 50ರಷ್ಟಿದೆ. ಪಾಕಿಸ್ತಾನ 22 ಅಂಕ ಹೊಂದಿದ್ದರೂ, ಶೇಕಡಾವಾರು ಯಶಸ್ಸಿನ ದರದಲ್ಲಿ ಆರನೇ ಸ್ಥಾನಗಳಲ್ಲಿವೆ.

ಕೇವಲ ೧೦೭ ಓವರ್‌ಗಳಲ್ಲಿಯೇ ಅಂತ್ಯಗೊಂಡ ಪಂದ್ಯದಲ್ಲಿ ಟೀಂ ಇಂಡಿಯಾ ತಂಡ ಹರಿಣಗಳ ವಿರುದ್ಧ ಏಳು ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಮೊದಲ ಪಂದ್ಯದಲ್ಲಿ ಹಿನಾಯ ಸೋಲು ಅನುಭವಿಸಿದ್ದ ಭಾರತ ತಂಡ ಎರಡನೇ ಟೆಸ್ಟ್‌ನಲ್ಲಿ ಗೆಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿತ್ತು. ಇದರೊಂದಿಗೆ ಕೇಪ್‌ಟೌನ್‌ ನಲ್ಲಿ ಗೆಲುವನ್ನೇ ಕಾಣದ ಟೀಂ ಇಂಡಿಯಾ ತಂಡ ತನ್ನ ಮೊಲದ ಗೆಲುವು ದಾಖಲಿಸಿತು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

24 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

24 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

24 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

24 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

24 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

24 hours ago