ಕ್ರೀಡೆ

IND vs ENG 5th test: ಇಂಗ್ಲೆಂಡ್‌ ವಿರುದ್ಧ 4-1 ರಲ್ಲಿ ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ

ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಣ ಐದನೇ ಮತ್ತು ಅಂತಿಮ ಟೆಸ್ಟ್‌ ಪಂದ್ಯವನ್ನು ಟೀಂ ಇಂಡಿಯಾ ಇನ್ನಿಂಗ್ಸ್‌ ಹಾಗೂ 64 ರನ್‌ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಆ ಮೂಲಕ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಇಂಗ್ಲೆಂಡ್‌ ತಂಡವನ್ನು 4-1 ಅಂತರದಲ್ಲಿ ಸೋಲಿಸಿದೆ.

ಟೀಂ ಇಂಡಿಯಾ ನೀಡಿದ್ದ 259 ರನ್‌ ಗಳ ಮುನ್ನಡೆಯನ್ನು ಚೇಸ್‌ ಮಾಡುವಲ್ಲಿ ವಿಫಲವಾದ ಇಂಗ್ಲೆಂಡ್‌ ತಂಡ ಇನ್ನಿಂಗ್ಸ್‌ ಹಾಗೂ 64 ರನ್‌ ಅಂತರದಿಂದ ಸೋಲೊಪ್ಪಿಕೊಂಡಿತು.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಇಂಗ್ಲೆಂಡ್‌ 218 ರನ್‌ಗಳಿಗೆ ಇನ್ನಿಂಗ್ಸ್‌ ಮುಗಿಸಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 477 ರನ್‌ ಕಲೆ ಹಾಕಿ 259ರನ್‌ ಮುನ್ನಡೆ ಕಾಯ್ದುಕೊಂಡಿತ್ತು. ಅಶ್ವಿನ್‌ ಅವರ ಮಾರಕ ಸ್ಪಿನ್‌ ದಾಳಿಗೆ (77/5) ನಲುಗಿದ ಆಂಗ್ಲ ಪಡೆ, ಇದನ್ನು ಚೇಸ್‌ ಮಾಡಲಾಗದೇ 48.1 ಓವರ್‌ಗಳಲ್ಲಿ ಸರ್ವಪತನ ಕಂಡು ಕೇವಲ 195 ರನ್‌ ಗಳಿಸಲಷ್ಟೆ ಶಕ್ತವಾಯಿತು.

ಟೀಂ ಇಂಡಿಯಾ ಪರ ಅಶ್ವಿನ್‌ ಮೂರನೇ ದಿನದಾಟದಲ್ಲಿ ಐದು ವಿಕೆಟ್‌ ಗೊಂಚಲು ಪಡೆದರು. ಇವರಿಗೆ ಸಾಥ್‌ ನೀಡಿದ ಕುಲ್ದೀಪ್‌ ಯಾದವ್‌ ಮತ್ತು ಬುಮ್ರಾ ತಲಾ ಎರಡು ವಿಕೆಟ್‌ ಕಿತ್ತು ಪಂದ್ಯ ಗೆಲ್ಲಲು ಕಾರಣರಾದರು.

ಎರಡನೇ ಇನ್ನಿಂಗ್ಸ್‌ನಲ್ಲಿ ಜೋ ರೂಟ್‌ 84 ರನ್‌ ಬಾರಿಸಿದ್ದೇ ವಯಕ್ತಿಕ ಗರಿಷ್ಟ ರನ್‌ ಆಗಿತ್ತು. ಜಾನಿ ಬೇರ್‌ಸ್ಟೋ 39, ಟಾಮ್‌ ಹಾರ್ಟ್ಲಿ 20, ಪೋಪ್‌ 19 ರನ್‌ ಬಾರಿಸಿದರು. ನಾಯಕ ಸ್ಟೋಕ್ಸ್‌ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು. ಉಳಿದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಕಂಡು ಬರಲಿಲ್ಲ.

ಸರಣಿಯುದ್ದಕ್ಕೂ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗದಲ್ಲಿ ಹೀನಾಯ ಪ್ರದರ್ಶನ ತೋರಿದ ಇಂಗ್ಲೆಂಡ್‌ ತಂಡ ಸರಣಿಯನ್ನು 4-1 ಅಂತರದಿಂದ ಸೋತಿದೆ.

ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ ಕುಲ್ದೀಪ್‌ ಯಾದವ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇನ್ನು ಈ ಸರಣಿಯುದ್ದಕ್ಕೂ ಉತ್ತಮ ಬ್ಯಾಟಿಂಗ್‌ ಮಾಡಿದ ಯುವ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌ಗೆ ಟೆಸ್ಟ್‌ನಲ್ಲಿ ಮೊದಲ ಸರಣಿ ಶ್ರೇಷ್ಠ ಪ್ರಶಸ್ತಿ ಲಭಿಸಿತು.

 

ಸ್ಕೋರ್‌ ವಿವರ: 

ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌: 218/10 ( ಜಾಕ್‌ ಕ್ರಾಲಿ 79, ಕುಲ್ದೀಪ್‌ ಯಾದವ್‌ 72/5 ಮತ್ತು ಅಶ್ವಿನ್‌ 51/4)

ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌: 477/10 (ಶುಭ್‌ಮನ್‌ ಗಿಲ್‌ 110, ರೋಹಿತ್‌ ಶರ್ಮಾ 103, ಬಷೀರ್‌ 173/5)

ಇಂಗ್ಲೆಂಡ್‌ ಎರಡನೇ ಇನ್ನಿಂಗ್ಸ್‌: 195/10 ( ಜೋ ರೂಟ್‌ 84, ಅಶ್ವಿನ್‌ 77/5 ಕುಲ್ದೀಪ್‌ ಯಾದವ್‌ 40/2, ಬುಮ್ರಾ 38/2)

ಪಂದ್ಯ ಶ್ರೇಷ್ಠ: ಕುಲ್ದೀಪ್‌ ಯಾದವ್‌
ಸರಣಿ ಶ್ರೇಷ್ಠ: ಯಶಸ್ವಿ ಜೈಸ್ವಾಲ್‌

andolanait

Recent Posts

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

21 seconds ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

4 mins ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

7 mins ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

17 mins ago

ಮಂಡ್ಯಕ್ಕೆ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ ಘೋಷಣೆ

ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…

27 mins ago

ಸಫಾರಿ ಷರತ್ತು ಕಟ್ಟುನಿಟ್ಟಾಗಿ ಜಾರಿಗೆ ತನ್ನಿ ; ಸಚಿವ ಖಂಡ್ರೆ ಸೂಚನೆ

ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ…

43 mins ago