ಕ್ರೀಡೆ

ಅಂತರಾಷ್ಟ್ರೀಯ ಫುಟ್ಬಾಲ್‌ಗೆ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಫುಟ್ಬಾಲ್‌ ತಾರೆ ಸುನಿಲ್‌ ಚೆಟ್ರಿ!

ಭಾರತ ಕಂಡ ಖ್ಯಾತ ಫುಟ್ಬಾಲ್‌ ತಾರೆ ಸುನಿಲ್‌ ಚೆಟ್ರಿ ಅವರು ಅಂತರಾಷ್ಟ್ರೀಯ ಫುಟ್ಬಾಲ್‌ಗೆ ವಿದಾಯ ಹೇಳಿದ್ದಾರೆ. ಇದೇ ಜೂನ್‌.6 ರಂದು ಕುವೈತ್‌ ವಿರುದ್ಧ ನಡೆಯಲಿರುವ ಫಿಫಾ ವಿಶ್ವಕಪ್‌ ಟೂರ್ನಿಯ ಅರ್ಹತಾ ಪಂದ್ಯದ ಬಳಿಕ ಚೆಟ್ರಿ ನಿವೃತ್ತಿ ಹೊಂದಲಿದ್ದಾರೆ.

2005 ರಲ್ಲಿ ಅಂತರಾಷ್ಟ್ರೀಯ ಫುಟ್ಬಾಲ್‌ಗೆ ಪಾದಾರ್ಪಣೆ ಮಾಡಿದ ಅವರು, 20 ವರ್ಷಗಳ ಕಾಲ ಭಾರತವನ್ನು  145 ಪಂದ್ಯಗಳಲ್ಲಿ ಪ್ರತಿನಿಧಿಸಿ 93 ಗೋಲುಗಳನ್ನು ಗಳಿಸಿದ್ದಾರೆ.

ಇನ್ನು ಫುಟ್ಬಾಲ್‌ ಇತಿಹಾಸದಲ್ಲಿ ಅತಿಹೆಚ್ಚು ಗೋಲು ಗಳಿಸಿದವರ ಪೈಕಿ ಇವರು ಮೂರನೇ ಸ್ಥಾನದಲ್ಲಿದ್ದಾರೆ. ಕ್ರಮವಾಗಿ ಮೊದಲ ಸ್ಥಾನದಲ್ಲಿ ರೊನಾಲ್ಡೋ, ಎರಡನೇ ಸ್ಥಾನವನ್ನು ಮೆಸ್ಸಿ ಅಲಂಕರಿಸಿದ್ದಾರೆ.

ಈ ಸಂಬಂಧ ಸುನಿಲ್‌ ಚಟ್ರಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಾವು ನಿವೃತ್ತಿ ಹೊಂದುವ ಬಗ್ಗೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. “ನಾನು ಎಂದಿಗೂ ಮರೆಯಲಾಗದ ಹಾಗೂ ಆಗಾಗ್ಗೆ ನೆನಪಿಸಿಕೊಳ್ಳುವ ಒಂದು ದಿನವಿದೆ. ಅದವೇ ನಾನು ದೇಶಕ್ಕಾಗಿ ಆಡಿದ ಮೊದಲ ದಿನ. ಇದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದು ನನ್ನ ಅತ್ಯುತ್ತಮ ದಿನಗಳಲ್ಲಿ ಒಂದಾಗಿದೆ” ಎಂದಿದ್ದಾರೆ.

ಆರಂಭದ ದಿನಗಳು ನಿಜಕ್ಕೂ ಕಷ್ಟಕರವಾಗಿತ್ತು. ನಾನು ದೆಹಲಿಯಲ್ಲಿ ಸುಬ್ರೊಟೊ ಕಪ್‌ ಆಡುವಾಗ ದೇಶಕ್ಕಾಗಿ ಆಡುತ್ತೇನೆ ಎಂದು ಭಾವಿಸಿರಲಿಲ್ಲ. ದೇವರ ದಯೆಯಿಂದ ದೇಶದ ಪರವಾಗಿ ಆಡುವ ಅವಕಾಶ ಒದಗಿಬಂತು. ದೇಶಕ್ಕಾಗಿ ಆಡುವ ಪ್ರತಿ ಕ್ಷಣವೂ ವಿಶೇಷ ಮತ್ತು ಅವಿಸ್ಮರಣೀಯ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಾನು ನನ್ನ ತಾಯಿ, ತಂದೆ, ಪತ್ನಿ ಹಾಗೂ ಕುಟುಂಬದ ಜೊತೆಗೆ ಸಹ ಆಟಗಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇವೆರೆಲ್ಲರೂ ಒತ್ತಡದ ಸಮಯದಲ್ಲಿ ನನ್ನ ಜತೆಗಿದ್ದು ಬೆಂಬಲ ನೀಡಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ.

https://x.com/chetrisunil11/status/1790953336901976541

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

2 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

2 hours ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

2 hours ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

2 hours ago

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

14 hours ago