ಕ್ರೀಡೆ

ಅಂತರಾಷ್ಟ್ರೀಯ ಫುಟ್ಬಾಲ್‌ಗೆ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಫುಟ್ಬಾಲ್‌ ತಾರೆ ಸುನಿಲ್‌ ಚೆಟ್ರಿ!

ಭಾರತ ಕಂಡ ಖ್ಯಾತ ಫುಟ್ಬಾಲ್‌ ತಾರೆ ಸುನಿಲ್‌ ಚೆಟ್ರಿ ಅವರು ಅಂತರಾಷ್ಟ್ರೀಯ ಫುಟ್ಬಾಲ್‌ಗೆ ವಿದಾಯ ಹೇಳಿದ್ದಾರೆ. ಇದೇ ಜೂನ್‌.6 ರಂದು ಕುವೈತ್‌ ವಿರುದ್ಧ ನಡೆಯಲಿರುವ ಫಿಫಾ ವಿಶ್ವಕಪ್‌ ಟೂರ್ನಿಯ ಅರ್ಹತಾ ಪಂದ್ಯದ ಬಳಿಕ ಚೆಟ್ರಿ ನಿವೃತ್ತಿ ಹೊಂದಲಿದ್ದಾರೆ.

2005 ರಲ್ಲಿ ಅಂತರಾಷ್ಟ್ರೀಯ ಫುಟ್ಬಾಲ್‌ಗೆ ಪಾದಾರ್ಪಣೆ ಮಾಡಿದ ಅವರು, 20 ವರ್ಷಗಳ ಕಾಲ ಭಾರತವನ್ನು  145 ಪಂದ್ಯಗಳಲ್ಲಿ ಪ್ರತಿನಿಧಿಸಿ 93 ಗೋಲುಗಳನ್ನು ಗಳಿಸಿದ್ದಾರೆ.

ಇನ್ನು ಫುಟ್ಬಾಲ್‌ ಇತಿಹಾಸದಲ್ಲಿ ಅತಿಹೆಚ್ಚು ಗೋಲು ಗಳಿಸಿದವರ ಪೈಕಿ ಇವರು ಮೂರನೇ ಸ್ಥಾನದಲ್ಲಿದ್ದಾರೆ. ಕ್ರಮವಾಗಿ ಮೊದಲ ಸ್ಥಾನದಲ್ಲಿ ರೊನಾಲ್ಡೋ, ಎರಡನೇ ಸ್ಥಾನವನ್ನು ಮೆಸ್ಸಿ ಅಲಂಕರಿಸಿದ್ದಾರೆ.

ಈ ಸಂಬಂಧ ಸುನಿಲ್‌ ಚಟ್ರಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಾವು ನಿವೃತ್ತಿ ಹೊಂದುವ ಬಗ್ಗೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. “ನಾನು ಎಂದಿಗೂ ಮರೆಯಲಾಗದ ಹಾಗೂ ಆಗಾಗ್ಗೆ ನೆನಪಿಸಿಕೊಳ್ಳುವ ಒಂದು ದಿನವಿದೆ. ಅದವೇ ನಾನು ದೇಶಕ್ಕಾಗಿ ಆಡಿದ ಮೊದಲ ದಿನ. ಇದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದು ನನ್ನ ಅತ್ಯುತ್ತಮ ದಿನಗಳಲ್ಲಿ ಒಂದಾಗಿದೆ” ಎಂದಿದ್ದಾರೆ.

ಆರಂಭದ ದಿನಗಳು ನಿಜಕ್ಕೂ ಕಷ್ಟಕರವಾಗಿತ್ತು. ನಾನು ದೆಹಲಿಯಲ್ಲಿ ಸುಬ್ರೊಟೊ ಕಪ್‌ ಆಡುವಾಗ ದೇಶಕ್ಕಾಗಿ ಆಡುತ್ತೇನೆ ಎಂದು ಭಾವಿಸಿರಲಿಲ್ಲ. ದೇವರ ದಯೆಯಿಂದ ದೇಶದ ಪರವಾಗಿ ಆಡುವ ಅವಕಾಶ ಒದಗಿಬಂತು. ದೇಶಕ್ಕಾಗಿ ಆಡುವ ಪ್ರತಿ ಕ್ಷಣವೂ ವಿಶೇಷ ಮತ್ತು ಅವಿಸ್ಮರಣೀಯ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಾನು ನನ್ನ ತಾಯಿ, ತಂದೆ, ಪತ್ನಿ ಹಾಗೂ ಕುಟುಂಬದ ಜೊತೆಗೆ ಸಹ ಆಟಗಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇವೆರೆಲ್ಲರೂ ಒತ್ತಡದ ಸಮಯದಲ್ಲಿ ನನ್ನ ಜತೆಗಿದ್ದು ಬೆಂಬಲ ನೀಡಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ.

https://x.com/chetrisunil11/status/1790953336901976541

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಂಕಷ್ಟಕ್ಕೆ ಸಿಲುಕಿದ ಸರ್ಕಾರಕ್ಕೆ ವರದಾನವಾದ ಕಬಿನಿ

ಮಂಜು ಕೋಟೆ ಕಬಿನಿ ಜಲಾಶಯ ಭರ್ತಿ; ೧೦ ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಬರದ ನಡುವೆಯೂ  ಕೇರಳದ…

2 mins ago

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

22 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

23 hours ago