ಕ್ರೀಡೆ

ಅಂತರಾಷ್ಟ್ರೀಯ ಫುಟ್ಬಾಲ್‌ಗೆ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಫುಟ್ಬಾಲ್‌ ತಾರೆ ಸುನಿಲ್‌ ಚೆಟ್ರಿ!

ಭಾರತ ಕಂಡ ಖ್ಯಾತ ಫುಟ್ಬಾಲ್‌ ತಾರೆ ಸುನಿಲ್‌ ಚೆಟ್ರಿ ಅವರು ಅಂತರಾಷ್ಟ್ರೀಯ ಫುಟ್ಬಾಲ್‌ಗೆ ವಿದಾಯ ಹೇಳಿದ್ದಾರೆ. ಇದೇ ಜೂನ್‌.6 ರಂದು ಕುವೈತ್‌ ವಿರುದ್ಧ ನಡೆಯಲಿರುವ ಫಿಫಾ ವಿಶ್ವಕಪ್‌ ಟೂರ್ನಿಯ ಅರ್ಹತಾ ಪಂದ್ಯದ ಬಳಿಕ ಚೆಟ್ರಿ ನಿವೃತ್ತಿ ಹೊಂದಲಿದ್ದಾರೆ.

2005 ರಲ್ಲಿ ಅಂತರಾಷ್ಟ್ರೀಯ ಫುಟ್ಬಾಲ್‌ಗೆ ಪಾದಾರ್ಪಣೆ ಮಾಡಿದ ಅವರು, 20 ವರ್ಷಗಳ ಕಾಲ ಭಾರತವನ್ನು  145 ಪಂದ್ಯಗಳಲ್ಲಿ ಪ್ರತಿನಿಧಿಸಿ 93 ಗೋಲುಗಳನ್ನು ಗಳಿಸಿದ್ದಾರೆ.

ಇನ್ನು ಫುಟ್ಬಾಲ್‌ ಇತಿಹಾಸದಲ್ಲಿ ಅತಿಹೆಚ್ಚು ಗೋಲು ಗಳಿಸಿದವರ ಪೈಕಿ ಇವರು ಮೂರನೇ ಸ್ಥಾನದಲ್ಲಿದ್ದಾರೆ. ಕ್ರಮವಾಗಿ ಮೊದಲ ಸ್ಥಾನದಲ್ಲಿ ರೊನಾಲ್ಡೋ, ಎರಡನೇ ಸ್ಥಾನವನ್ನು ಮೆಸ್ಸಿ ಅಲಂಕರಿಸಿದ್ದಾರೆ.

ಈ ಸಂಬಂಧ ಸುನಿಲ್‌ ಚಟ್ರಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಾವು ನಿವೃತ್ತಿ ಹೊಂದುವ ಬಗ್ಗೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. “ನಾನು ಎಂದಿಗೂ ಮರೆಯಲಾಗದ ಹಾಗೂ ಆಗಾಗ್ಗೆ ನೆನಪಿಸಿಕೊಳ್ಳುವ ಒಂದು ದಿನವಿದೆ. ಅದವೇ ನಾನು ದೇಶಕ್ಕಾಗಿ ಆಡಿದ ಮೊದಲ ದಿನ. ಇದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದು ನನ್ನ ಅತ್ಯುತ್ತಮ ದಿನಗಳಲ್ಲಿ ಒಂದಾಗಿದೆ” ಎಂದಿದ್ದಾರೆ.

ಆರಂಭದ ದಿನಗಳು ನಿಜಕ್ಕೂ ಕಷ್ಟಕರವಾಗಿತ್ತು. ನಾನು ದೆಹಲಿಯಲ್ಲಿ ಸುಬ್ರೊಟೊ ಕಪ್‌ ಆಡುವಾಗ ದೇಶಕ್ಕಾಗಿ ಆಡುತ್ತೇನೆ ಎಂದು ಭಾವಿಸಿರಲಿಲ್ಲ. ದೇವರ ದಯೆಯಿಂದ ದೇಶದ ಪರವಾಗಿ ಆಡುವ ಅವಕಾಶ ಒದಗಿಬಂತು. ದೇಶಕ್ಕಾಗಿ ಆಡುವ ಪ್ರತಿ ಕ್ಷಣವೂ ವಿಶೇಷ ಮತ್ತು ಅವಿಸ್ಮರಣೀಯ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಾನು ನನ್ನ ತಾಯಿ, ತಂದೆ, ಪತ್ನಿ ಹಾಗೂ ಕುಟುಂಬದ ಜೊತೆಗೆ ಸಹ ಆಟಗಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇವೆರೆಲ್ಲರೂ ಒತ್ತಡದ ಸಮಯದಲ್ಲಿ ನನ್ನ ಜತೆಗಿದ್ದು ಬೆಂಬಲ ನೀಡಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ.

https://x.com/chetrisunil11/status/1790953336901976541

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

2 mins ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

2 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

5 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

5 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

5 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

5 hours ago