ಕ್ರೀಡೆ

ಅಂತರಾಷ್ಟ್ರೀಯ ಫುಟ್ಬಾಲ್‌ಗೆ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಫುಟ್ಬಾಲ್‌ ತಾರೆ ಸುನಿಲ್‌ ಚೆಟ್ರಿ!

ಭಾರತ ಕಂಡ ಖ್ಯಾತ ಫುಟ್ಬಾಲ್‌ ತಾರೆ ಸುನಿಲ್‌ ಚೆಟ್ರಿ ಅವರು ಅಂತರಾಷ್ಟ್ರೀಯ ಫುಟ್ಬಾಲ್‌ಗೆ ವಿದಾಯ ಹೇಳಿದ್ದಾರೆ. ಇದೇ ಜೂನ್‌.6 ರಂದು ಕುವೈತ್‌ ವಿರುದ್ಧ ನಡೆಯಲಿರುವ ಫಿಫಾ ವಿಶ್ವಕಪ್‌ ಟೂರ್ನಿಯ ಅರ್ಹತಾ ಪಂದ್ಯದ ಬಳಿಕ ಚೆಟ್ರಿ ನಿವೃತ್ತಿ ಹೊಂದಲಿದ್ದಾರೆ.

2005 ರಲ್ಲಿ ಅಂತರಾಷ್ಟ್ರೀಯ ಫುಟ್ಬಾಲ್‌ಗೆ ಪಾದಾರ್ಪಣೆ ಮಾಡಿದ ಅವರು, 20 ವರ್ಷಗಳ ಕಾಲ ಭಾರತವನ್ನು  145 ಪಂದ್ಯಗಳಲ್ಲಿ ಪ್ರತಿನಿಧಿಸಿ 93 ಗೋಲುಗಳನ್ನು ಗಳಿಸಿದ್ದಾರೆ.

ಇನ್ನು ಫುಟ್ಬಾಲ್‌ ಇತಿಹಾಸದಲ್ಲಿ ಅತಿಹೆಚ್ಚು ಗೋಲು ಗಳಿಸಿದವರ ಪೈಕಿ ಇವರು ಮೂರನೇ ಸ್ಥಾನದಲ್ಲಿದ್ದಾರೆ. ಕ್ರಮವಾಗಿ ಮೊದಲ ಸ್ಥಾನದಲ್ಲಿ ರೊನಾಲ್ಡೋ, ಎರಡನೇ ಸ್ಥಾನವನ್ನು ಮೆಸ್ಸಿ ಅಲಂಕರಿಸಿದ್ದಾರೆ.

ಈ ಸಂಬಂಧ ಸುನಿಲ್‌ ಚಟ್ರಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಾವು ನಿವೃತ್ತಿ ಹೊಂದುವ ಬಗ್ಗೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. “ನಾನು ಎಂದಿಗೂ ಮರೆಯಲಾಗದ ಹಾಗೂ ಆಗಾಗ್ಗೆ ನೆನಪಿಸಿಕೊಳ್ಳುವ ಒಂದು ದಿನವಿದೆ. ಅದವೇ ನಾನು ದೇಶಕ್ಕಾಗಿ ಆಡಿದ ಮೊದಲ ದಿನ. ಇದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದು ನನ್ನ ಅತ್ಯುತ್ತಮ ದಿನಗಳಲ್ಲಿ ಒಂದಾಗಿದೆ” ಎಂದಿದ್ದಾರೆ.

ಆರಂಭದ ದಿನಗಳು ನಿಜಕ್ಕೂ ಕಷ್ಟಕರವಾಗಿತ್ತು. ನಾನು ದೆಹಲಿಯಲ್ಲಿ ಸುಬ್ರೊಟೊ ಕಪ್‌ ಆಡುವಾಗ ದೇಶಕ್ಕಾಗಿ ಆಡುತ್ತೇನೆ ಎಂದು ಭಾವಿಸಿರಲಿಲ್ಲ. ದೇವರ ದಯೆಯಿಂದ ದೇಶದ ಪರವಾಗಿ ಆಡುವ ಅವಕಾಶ ಒದಗಿಬಂತು. ದೇಶಕ್ಕಾಗಿ ಆಡುವ ಪ್ರತಿ ಕ್ಷಣವೂ ವಿಶೇಷ ಮತ್ತು ಅವಿಸ್ಮರಣೀಯ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಾನು ನನ್ನ ತಾಯಿ, ತಂದೆ, ಪತ್ನಿ ಹಾಗೂ ಕುಟುಂಬದ ಜೊತೆಗೆ ಸಹ ಆಟಗಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇವೆರೆಲ್ಲರೂ ಒತ್ತಡದ ಸಮಯದಲ್ಲಿ ನನ್ನ ಜತೆಗಿದ್ದು ಬೆಂಬಲ ನೀಡಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ.

https://x.com/chetrisunil11/status/1790953336901976541

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…

2 mins ago

9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…

6 mins ago

ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು ಬಾಲಗಂಗಾಧರನಾಥರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…

13 mins ago

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

2 hours ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

3 hours ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

3 hours ago