ಕ್ರೀಡೆ

ಅಂತರಾಷ್ಟ್ರೀಯ ಫುಟ್ಬಾಲ್‌ಗೆ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಫುಟ್ಬಾಲ್‌ ತಾರೆ ಸುನಿಲ್‌ ಚೆಟ್ರಿ!

ಭಾರತ ಕಂಡ ಖ್ಯಾತ ಫುಟ್ಬಾಲ್‌ ತಾರೆ ಸುನಿಲ್‌ ಚೆಟ್ರಿ ಅವರು ಅಂತರಾಷ್ಟ್ರೀಯ ಫುಟ್ಬಾಲ್‌ಗೆ ವಿದಾಯ ಹೇಳಿದ್ದಾರೆ. ಇದೇ ಜೂನ್‌.6 ರಂದು ಕುವೈತ್‌ ವಿರುದ್ಧ ನಡೆಯಲಿರುವ ಫಿಫಾ ವಿಶ್ವಕಪ್‌ ಟೂರ್ನಿಯ ಅರ್ಹತಾ ಪಂದ್ಯದ ಬಳಿಕ ಚೆಟ್ರಿ ನಿವೃತ್ತಿ ಹೊಂದಲಿದ್ದಾರೆ.

2005 ರಲ್ಲಿ ಅಂತರಾಷ್ಟ್ರೀಯ ಫುಟ್ಬಾಲ್‌ಗೆ ಪಾದಾರ್ಪಣೆ ಮಾಡಿದ ಅವರು, 20 ವರ್ಷಗಳ ಕಾಲ ಭಾರತವನ್ನು  145 ಪಂದ್ಯಗಳಲ್ಲಿ ಪ್ರತಿನಿಧಿಸಿ 93 ಗೋಲುಗಳನ್ನು ಗಳಿಸಿದ್ದಾರೆ.

ಇನ್ನು ಫುಟ್ಬಾಲ್‌ ಇತಿಹಾಸದಲ್ಲಿ ಅತಿಹೆಚ್ಚು ಗೋಲು ಗಳಿಸಿದವರ ಪೈಕಿ ಇವರು ಮೂರನೇ ಸ್ಥಾನದಲ್ಲಿದ್ದಾರೆ. ಕ್ರಮವಾಗಿ ಮೊದಲ ಸ್ಥಾನದಲ್ಲಿ ರೊನಾಲ್ಡೋ, ಎರಡನೇ ಸ್ಥಾನವನ್ನು ಮೆಸ್ಸಿ ಅಲಂಕರಿಸಿದ್ದಾರೆ.

ಈ ಸಂಬಂಧ ಸುನಿಲ್‌ ಚಟ್ರಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಾವು ನಿವೃತ್ತಿ ಹೊಂದುವ ಬಗ್ಗೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. “ನಾನು ಎಂದಿಗೂ ಮರೆಯಲಾಗದ ಹಾಗೂ ಆಗಾಗ್ಗೆ ನೆನಪಿಸಿಕೊಳ್ಳುವ ಒಂದು ದಿನವಿದೆ. ಅದವೇ ನಾನು ದೇಶಕ್ಕಾಗಿ ಆಡಿದ ಮೊದಲ ದಿನ. ಇದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದು ನನ್ನ ಅತ್ಯುತ್ತಮ ದಿನಗಳಲ್ಲಿ ಒಂದಾಗಿದೆ” ಎಂದಿದ್ದಾರೆ.

ಆರಂಭದ ದಿನಗಳು ನಿಜಕ್ಕೂ ಕಷ್ಟಕರವಾಗಿತ್ತು. ನಾನು ದೆಹಲಿಯಲ್ಲಿ ಸುಬ್ರೊಟೊ ಕಪ್‌ ಆಡುವಾಗ ದೇಶಕ್ಕಾಗಿ ಆಡುತ್ತೇನೆ ಎಂದು ಭಾವಿಸಿರಲಿಲ್ಲ. ದೇವರ ದಯೆಯಿಂದ ದೇಶದ ಪರವಾಗಿ ಆಡುವ ಅವಕಾಶ ಒದಗಿಬಂತು. ದೇಶಕ್ಕಾಗಿ ಆಡುವ ಪ್ರತಿ ಕ್ಷಣವೂ ವಿಶೇಷ ಮತ್ತು ಅವಿಸ್ಮರಣೀಯ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಾನು ನನ್ನ ತಾಯಿ, ತಂದೆ, ಪತ್ನಿ ಹಾಗೂ ಕುಟುಂಬದ ಜೊತೆಗೆ ಸಹ ಆಟಗಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇವೆರೆಲ್ಲರೂ ಒತ್ತಡದ ಸಮಯದಲ್ಲಿ ನನ್ನ ಜತೆಗಿದ್ದು ಬೆಂಬಲ ನೀಡಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ.

https://x.com/chetrisunil11/status/1790953336901976541

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

2 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

7 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

7 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

7 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

7 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

7 hours ago