ಕ್ರೀಡೆ

ಬೆಳ್ಳಂಬೆಳಗ್ಗೆ ನಿವೃತ್ತಿ ಘೋಷಿಸಿ, ಅಭಿಮಾನಿಗಳಿಗೆ ಶಾಕ್‌ ಕೊಟ್ಟ ಟೀಂ ಇಂಡಿಯಾ ಸ್ಟಾರ್‌ ಕ್ರಿಕೆಟಿಗ..

ಒಂದು ಕಾಲದಲ್ಲಿ ಟೀಮ್‌ ಇಂಡಿಯಾದ ಆರಂಭಿಕ ಆಟಗಾರ, ರನ್‌ಗಳ ಮಳೆ ಹರಿಸಿದ್ದ ಎಡಗೈ ಬ್ಯಾಟರ್‌ ಶಿಖರ್‌ ಧವನ್‌ ಅಂತರರಾಷ್ಟ್ರೀಯ ಮತ್ತು ದೇಶಿಯ ಕ್ರಿಕೆಟ್‌ಗೆ ವಿಧಾಯ ಹೇಳಿದ್ದಾರೆ . ಗಬ್ಬರ್‌ ಸಿಂಗ್‌ ಎಂದೇ ಖ್ಯಾತಿ ಪಡೆದಿದ್ದ ಧವನ್‌, ಹಲವು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದಾಖಲೆಗಳನ್ನು ಬರೆದಿದ್ದಾರೆ. ಆದರೆ, ಕಳೆದ ಎರಡು ವರ್ಷಗಳಿಂದ ತಂಡದಲ್ಲಿ ಅವರು ಸ್ಥಾನ ಪಡೆದಿರಲಿಲ್ಲ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ನಿವೃತ್ತಿ ಘೋಷಿಸಿರುವ ಧವನ್‌, ನಾನು ನನ್ನ ಕ್ರಿಕೆಟ್‌ ಅಧ್ಯಾಯವನ್ನು ಕೊನೆಗೊಳಿಸುತ್ತಿದ್ದೇನೆ. ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಗಳನ್ನು ನಾನು ಹೊತ್ತುಕೊಂಡು ಹೋಗುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯಾದಗಳು. ಜೈ ಹಿಂದ್! ಎಂದು ಬರೆದುಕೊಂಡಿದ್ದಾರೆ.

ಜೀವನದಲ್ಲಿ ಮುಂದುವರಿಯಲಿ ಪುಟವನ್ನು ತಿರುಗಿಸುವುದು ಮುಖ್ಯ. ಅದಕ್ಕಾಗಿಯೇ ನಾನು ಅಂತರರಾಷ್ಟ್ರೀಯ ಮತ್ತು ದೇಶಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ನೆಮ್ಮದಿಯಿಂದ ನಿರ್ಗಮಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

2010ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಧವನ್‌, ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ಶಿಖರ್‌ ಧವನ್‌ ಈವರೆಗೆ ಭಾರತದ ಪರ 34 ಟೆಸ್ಟ್‌, 167ಒಡಿಐ ಹಾಗೂ 67 ಟಿ-20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಏಕದಿನ ಮಾದರಿಯ ಆಟಗಳಲ್ಲಿ 44.11 ಸರಾಸರಿಯಲ್ಲಿ 6793 ರನ್‌ಗಳಿಸಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 40.61ರ ಸರಾಸರಿಯಲ್ಲಿ 2315 ರನ್‌ ಗಳಿಸಿದ್ದಾರೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago