ಒಂದು ಕಾಲದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ, ರನ್ಗಳ ಮಳೆ ಹರಿಸಿದ್ದ ಎಡಗೈ ಬ್ಯಾಟರ್ ಶಿಖರ್ ಧವನ್ ಅಂತರರಾಷ್ಟ್ರೀಯ ಮತ್ತು ದೇಶಿಯ ಕ್ರಿಕೆಟ್ಗೆ ವಿಧಾಯ ಹೇಳಿದ್ದಾರೆ . ಗಬ್ಬರ್ ಸಿಂಗ್ ಎಂದೇ ಖ್ಯಾತಿ ಪಡೆದಿದ್ದ ಧವನ್, ಹಲವು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ದಾಖಲೆಗಳನ್ನು ಬರೆದಿದ್ದಾರೆ. ಆದರೆ, ಕಳೆದ ಎರಡು ವರ್ಷಗಳಿಂದ ತಂಡದಲ್ಲಿ ಅವರು ಸ್ಥಾನ ಪಡೆದಿರಲಿಲ್ಲ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ನಿವೃತ್ತಿ ಘೋಷಿಸಿರುವ ಧವನ್, ನಾನು ನನ್ನ ಕ್ರಿಕೆಟ್ ಅಧ್ಯಾಯವನ್ನು ಕೊನೆಗೊಳಿಸುತ್ತಿದ್ದೇನೆ. ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಗಳನ್ನು ನಾನು ಹೊತ್ತುಕೊಂಡು ಹೋಗುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯಾದಗಳು. ಜೈ ಹಿಂದ್! ಎಂದು ಬರೆದುಕೊಂಡಿದ್ದಾರೆ.
ಜೀವನದಲ್ಲಿ ಮುಂದುವರಿಯಲಿ ಪುಟವನ್ನು ತಿರುಗಿಸುವುದು ಮುಖ್ಯ. ಅದಕ್ಕಾಗಿಯೇ ನಾನು ಅಂತರರಾಷ್ಟ್ರೀಯ ಮತ್ತು ದೇಶಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ನೆಮ್ಮದಿಯಿಂದ ನಿರ್ಗಮಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
2010ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಧವನ್, ಮೂರು ಮಾದರಿಯ ಕ್ರಿಕೆಟ್ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.
ಶಿಖರ್ ಧವನ್ ಈವರೆಗೆ ಭಾರತದ ಪರ 34 ಟೆಸ್ಟ್, 167ಒಡಿಐ ಹಾಗೂ 67 ಟಿ-20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಏಕದಿನ ಮಾದರಿಯ ಆಟಗಳಲ್ಲಿ 44.11 ಸರಾಸರಿಯಲ್ಲಿ 6793 ರನ್ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 40.61ರ ಸರಾಸರಿಯಲ್ಲಿ 2315 ರನ್ ಗಳಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…