ಟೆನಿಸ್ ಲೋಕದ ದಿಗ್ಗಜ, 20 ಗ್ರ್ಯಾಂಡ್ಸ್ಲ್ಯಾಮ್ಗಳ ಒಡೆಯ ರೋಜರ್ ಫೆಡರರ್ ಟೆನಿಸ್ ಅಂಗಳದಿಂದ ಹಿಂದೆ ಸರಿದಿದ್ದಾರೆ. ಮುಂದಿನ ವಾರ ಲಂಡನ್ನಲ್ಲಿ ನಡೆಯಲಿರುವ ಲೇವರ್ ಕಪ್ ನಂತರ ಅಧಿಕೃತವಾಗಿ ಟೆನ್ನಿಸ್ ಅಂಗಳದಿಂದ ನಿವೃತ್ತಿ ಹೊಂದುವುದಾಗಿ 41 ವರ್ಷದ ಟೆನ್ನಿಸ್ ಪಟು ರೋಜರ್ ಫೆಡರರ್ ಟ್ವೀಟ್ ಮಾಡಿದ್ದಾರೆ.
ವಿದಾಯದ ಬರಹವುಳ್ಳ ಎರಡು ಪುಟಗಳನ್ನು ಪೋಸ್ಟ್ ಮಾಡಿರುವ ರೋಜರ್, ಟೆನ್ನಿಸ್ನೊಂದಿಗಿನ ಸಂಬಂಧವನ್ನು ಮುಂದುವರೆಸುವೆ. ಆದರೆ ಲಂಡನ್ನಲ್ಲಿ ನಡೆಯುವ ಲೇವರ್ ಕಪ್ ನನ್ನ ವೃತ್ತಿಯ ಕೊನೆಯ ಟೂರ್ನಿಯಾಗಲಿದೆ ಎಂದು ಹೇಳಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಗಾಯದ ಸಮಸ್ಯೆ, ಶಸ್ತ್ರಚಿಕಿತ್ಸೆಗಳ ಗೋಜಿಲಿನಿಂದ ಬಳಲಿದ್ದೇನೆ. ಸಂಪೂರ್ಣವಾಗಿ ಚೇತರಿಸಿಕೊಂಡು ಸ್ಪರ್ಧಾತ್ಮಕ ಜಗತ್ತಿಗೆ ಮರಳಲು ಇಚ್ಛಿಸಿದ್ದೆ. ಆದರೆ, ನನ್ನ ದೇಹ ಸಹಕರಿಸುತ್ತಿಲ್ಲ. ಅದರ ಇತಿಮಿತಿಗಳು ನನಗೆ ತಿಳಿದಿದೆ. ನನಗೀಗ 41 ವರ್ಷ’ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
24 ವರ್ಷಗಳಲ್ಲಿ 1,500 ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ್ದೇನೆ. ಟೆನಿಸ್ ಲೋಕ ನಾನಂದುಕೊಂಡಿದ್ದಕ್ಕಿಂತ ಹೆಚ್ಚೇ ನನ್ನನ್ನು ಬಿಗಿದಪ್ಪಿದೆ. ಈ ಸಮಯ ನನ್ನ ಸ್ಪರ್ಧಾತ್ಮಕ ವೃತ್ತಿಜೀವನವನ್ನು ಕೊನೆಗೊಳಿಸಲು ಸುಸಮಯ ಎಂಬುದನ್ನು ಅರಿತುಕೊಂಡಿದ್ದೇನೆ. ಭವಿಷ್ಯದಲ್ಲಿ ಟೆನಿಸ್ ಆಡಿದರೂ, ಗ್ರ್ಯಾಂಡ್ ಸ್ಲ್ಯಾಮ್ಗಳಲ್ಲಿ ಭಾಗವಹಿಸುವುದಿಲ್ಲ’ ಎಂದು ತಿಳಿಸಿದ್ದಾರೆ.
ಟೆನ್ನಿಸ್ ಲೋಕದ ಹಿರಿಯ ಆಟಗಾರನಾಗಿರುವ ರೋಜರ್ ಫೆಡರರ್ 2018 ರಲ್ಲಿ ಆಸ್ಟ್ರೇಲಿಯನ್ ಓಪನ್ ಗೆದ್ದಿದ್ದೇ ಕೊನೆಯ ಗ್ರ್ಯಾಂಡ್ಸ್ಲ್ಯಾಮ್ ಆಗಿದೆ. 2019 ರಲ್ಲಿ ವಿಂಬಲ್ಡನ್ ಫೈನಲ್ ತಲುಪಿದ್ದರೂ, ಸೆರ್ಬಿಯಾದ ನೊವಾಕ್ ಜೊಕೊವಿಕ್ ವಿರುದ್ಧ ಸೋಲು ಕಂಡು 21 ನೇ ಪ್ರಶಸ್ತಿಯಿಂದ ವಂಚಿತರಾದರು.
ಇದಾದ ಬಳಿಕ ಪದೇ ಪದೆ ಗಾಯಕ್ಕೆ ತುತ್ತಾದ ಫೆಡರರ್ ಸ್ಪರ್ಧಾತ್ಮಕ ಟೆನ್ನಿಸ್ಗೆ ಮರಳಲು ಪರದಾಡಿದರು. ಕಳೆದ ವರ್ಷವೂ ವಿಂಬಲ್ಡನ್ ಟೂರ್ನಿ ವೇಳೆ ಗಾಯಗೊಂಡು ಹೊರಬಿದ್ದಿದ್ದರು. ಟೆನ್ನಿಸ್ ಜಗತ್ತಿನ ತ್ರಿವಳಿಗಳಲ್ಲಿ ಒಬ್ಬರಾಗಿದ್ದ ಫೆಡರರ್ಗಿಂತಲೂ ಸ್ಪೇನ್ನ ರಾಫೆಲ್ ನಡಾಲ್ 22, ಸರ್ಬಿಯಾದ ನೊವಾಕ್ ಜಾಕೊವಿಕ್ 21 ಗ್ರ್ಯಾಂಡ್ಸ್ಲ್ಯಾಮ್ ಜಯಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…