ಕ್ರೀಡೆ

ಟೆನ್ನಿಸ್ ಅಂಗಳಕ್ಕೆ ವಿದಾಯ ಹೇಳಿದ ರೋಜರ್ ಫೆಡರರ್

ಟೆನಿಸ್​ ಲೋಕದ ದಿಗ್ಗಜ, 20 ಗ್ರ್ಯಾಂಡ್​ಸ್ಲ್ಯಾಮ್​ಗಳ ಒಡೆಯ ರೋಜರ್ ಫೆಡರರ್​ ಟೆನಿಸ್​ ಅಂಗಳದಿಂದ ಹಿಂದೆ ಸರಿದಿದ್ದಾರೆ. ಮುಂದಿನ ವಾರ ಲಂಡನ್‌ನಲ್ಲಿ ನಡೆಯಲಿರುವ ಲೇವರ್ ಕಪ್ ನಂತರ ಅಧಿಕೃತವಾಗಿ ಟೆನ್ನಿಸ್​ ಅಂಗಳದಿಂದ ನಿವೃತ್ತಿ ಹೊಂದುವುದಾಗಿ 41 ವರ್ಷದ ಟೆನ್ನಿಸ್ ಪಟು ರೋಜರ್ ಫೆಡರರ್ ಟ್ವೀಟ್​ ಮಾಡಿದ್ದಾರೆ.

ವಿದಾಯದ ಬರಹವುಳ್ಳ ಎರಡು ಪುಟಗಳನ್ನು ಪೋಸ್ಟ್​ ಮಾಡಿರುವ ರೋಜರ್​, ಟೆನ್ನಿಸ್‌ನೊಂದಿಗಿನ ಸಂಬಂಧವನ್ನು ಮುಂದುವರೆಸುವೆ. ಆದರೆ ಲಂಡನ್​ನಲ್ಲಿ ನಡೆಯುವ ಲೇವರ್ ಕಪ್ ನನ್ನ ವೃತ್ತಿಯ ಕೊನೆಯ ಟೂರ್ನಿಯಾಗಲಿದೆ ಎಂದು ಹೇಳಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಗಾಯದ ಸಮಸ್ಯೆ, ಶಸ್ತ್ರಚಿಕಿತ್ಸೆಗಳ ಗೋಜಿಲಿನಿಂದ ಬಳಲಿದ್ದೇನೆ. ಸಂಪೂರ್ಣವಾಗಿ ಚೇತರಿಸಿಕೊಂಡು ಸ್ಪರ್ಧಾತ್ಮಕ ಜಗತ್ತಿಗೆ ಮರಳಲು ಇಚ್ಛಿಸಿದ್ದೆ. ಆದರೆ, ನನ್ನ ದೇಹ ಸಹಕರಿಸುತ್ತಿಲ್ಲ. ಅದರ ಇತಿಮಿತಿಗಳು ನನಗೆ ತಿಳಿದಿದೆ. ನನಗೀಗ 41 ವರ್ಷ’ ಎಂದು ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

24 ವರ್ಷಗಳಲ್ಲಿ 1,500 ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ್ದೇನೆ. ಟೆನಿಸ್ ಲೋಕ ನಾನಂದುಕೊಂಡಿದ್ದಕ್ಕಿಂತ ಹೆಚ್ಚೇ ನನ್ನನ್ನು ಬಿಗಿದಪ್ಪಿದೆ. ಈ ಸಮಯ ನನ್ನ ಸ್ಪರ್ಧಾತ್ಮಕ ವೃತ್ತಿಜೀವನವನ್ನು ಕೊನೆಗೊಳಿಸಲು ಸುಸಮಯ ಎಂಬುದನ್ನು ಅರಿತುಕೊಂಡಿದ್ದೇನೆ. ಭವಿಷ್ಯದಲ್ಲಿ ಟೆನಿಸ್ ಆಡಿದರೂ, ಗ್ರ್ಯಾಂಡ್ ಸ್ಲ್ಯಾಮ್‌ಗಳಲ್ಲಿ ಭಾಗವಹಿಸುವುದಿಲ್ಲ’ ಎಂದು ತಿಳಿಸಿದ್ದಾರೆ.

ಟೆನ್ನಿಸ್​ ಲೋಕದ ಹಿರಿಯ ಆಟಗಾರನಾಗಿರುವ ರೋಜರ್​ ಫೆಡರರ್​ 2018 ರಲ್ಲಿ ಆಸ್ಟ್ರೇಲಿಯನ್​ ಓಪನ್​ ಗೆದ್ದಿದ್ದೇ ಕೊನೆಯ ಗ್ರ್ಯಾಂಡ್​ಸ್ಲ್ಯಾಮ್​ ಆಗಿದೆ. 2019 ರಲ್ಲಿ ವಿಂಬಲ್ಡನ್ ಫೈನಲ್ ತಲುಪಿದ್ದರೂ, ಸೆರ್ಬಿಯಾದ ನೊವಾಕ್ ಜೊಕೊವಿಕ್ ವಿರುದ್ಧ ಸೋಲು ಕಂಡು 21 ನೇ ಪ್ರಶಸ್ತಿಯಿಂದ ವಂಚಿತರಾದರು.

ಇದಾದ ಬಳಿಕ ಪದೇ ಪದೆ ಗಾಯಕ್ಕೆ ತುತ್ತಾದ ಫೆಡರರ್​ ಸ್ಪರ್ಧಾತ್ಮಕ ಟೆನ್ನಿಸ್​ಗೆ ಮರಳಲು ಪರದಾಡಿದರು. ಕಳೆದ ವರ್ಷವೂ ವಿಂಬಲ್ಡನ್​ ಟೂರ್ನಿ ವೇಳೆ ಗಾಯಗೊಂಡು ಹೊರಬಿದ್ದಿದ್ದರು. ಟೆನ್ನಿಸ್​ ಜಗತ್ತಿನ ತ್ರಿವಳಿಗಳಲ್ಲಿ ಒಬ್ಬರಾಗಿದ್ದ ಫೆಡರರ್​ಗಿಂತಲೂ ಸ್ಪೇನ್​ನ ರಾಫೆಲ್​ ನಡಾಲ್​ 22, ಸರ್ಬಿಯಾದ ನೊವಾಕ್​ ಜಾಕೊವಿಕ್​ 21 ಗ್ರ್ಯಾಂಡ್​ಸ್ಲ್ಯಾಮ್​ ಜಯಿಸಿದ್ದಾರೆ.

 

 

andolanait

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

3 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

4 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

12 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

15 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

16 hours ago