ಟೆನಿಸ್ ಲೋಕದ ದಿಗ್ಗಜ, 20 ಗ್ರ್ಯಾಂಡ್ಸ್ಲ್ಯಾಮ್ಗಳ ಒಡೆಯ ರೋಜರ್ ಫೆಡರರ್ ಟೆನಿಸ್ ಅಂಗಳದಿಂದ ಹಿಂದೆ ಸರಿದಿದ್ದಾರೆ. ಮುಂದಿನ ವಾರ ಲಂಡನ್ನಲ್ಲಿ ನಡೆಯಲಿರುವ ಲೇವರ್ ಕಪ್ ನಂತರ ಅಧಿಕೃತವಾಗಿ ಟೆನ್ನಿಸ್ ಅಂಗಳದಿಂದ ನಿವೃತ್ತಿ ಹೊಂದುವುದಾಗಿ 41 ವರ್ಷದ ಟೆನ್ನಿಸ್ ಪಟು ರೋಜರ್ ಫೆಡರರ್ ಟ್ವೀಟ್ ಮಾಡಿದ್ದಾರೆ.
ವಿದಾಯದ ಬರಹವುಳ್ಳ ಎರಡು ಪುಟಗಳನ್ನು ಪೋಸ್ಟ್ ಮಾಡಿರುವ ರೋಜರ್, ಟೆನ್ನಿಸ್ನೊಂದಿಗಿನ ಸಂಬಂಧವನ್ನು ಮುಂದುವರೆಸುವೆ. ಆದರೆ ಲಂಡನ್ನಲ್ಲಿ ನಡೆಯುವ ಲೇವರ್ ಕಪ್ ನನ್ನ ವೃತ್ತಿಯ ಕೊನೆಯ ಟೂರ್ನಿಯಾಗಲಿದೆ ಎಂದು ಹೇಳಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಗಾಯದ ಸಮಸ್ಯೆ, ಶಸ್ತ್ರಚಿಕಿತ್ಸೆಗಳ ಗೋಜಿಲಿನಿಂದ ಬಳಲಿದ್ದೇನೆ. ಸಂಪೂರ್ಣವಾಗಿ ಚೇತರಿಸಿಕೊಂಡು ಸ್ಪರ್ಧಾತ್ಮಕ ಜಗತ್ತಿಗೆ ಮರಳಲು ಇಚ್ಛಿಸಿದ್ದೆ. ಆದರೆ, ನನ್ನ ದೇಹ ಸಹಕರಿಸುತ್ತಿಲ್ಲ. ಅದರ ಇತಿಮಿತಿಗಳು ನನಗೆ ತಿಳಿದಿದೆ. ನನಗೀಗ 41 ವರ್ಷ’ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
24 ವರ್ಷಗಳಲ್ಲಿ 1,500 ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ್ದೇನೆ. ಟೆನಿಸ್ ಲೋಕ ನಾನಂದುಕೊಂಡಿದ್ದಕ್ಕಿಂತ ಹೆಚ್ಚೇ ನನ್ನನ್ನು ಬಿಗಿದಪ್ಪಿದೆ. ಈ ಸಮಯ ನನ್ನ ಸ್ಪರ್ಧಾತ್ಮಕ ವೃತ್ತಿಜೀವನವನ್ನು ಕೊನೆಗೊಳಿಸಲು ಸುಸಮಯ ಎಂಬುದನ್ನು ಅರಿತುಕೊಂಡಿದ್ದೇನೆ. ಭವಿಷ್ಯದಲ್ಲಿ ಟೆನಿಸ್ ಆಡಿದರೂ, ಗ್ರ್ಯಾಂಡ್ ಸ್ಲ್ಯಾಮ್ಗಳಲ್ಲಿ ಭಾಗವಹಿಸುವುದಿಲ್ಲ’ ಎಂದು ತಿಳಿಸಿದ್ದಾರೆ.
ಟೆನ್ನಿಸ್ ಲೋಕದ ಹಿರಿಯ ಆಟಗಾರನಾಗಿರುವ ರೋಜರ್ ಫೆಡರರ್ 2018 ರಲ್ಲಿ ಆಸ್ಟ್ರೇಲಿಯನ್ ಓಪನ್ ಗೆದ್ದಿದ್ದೇ ಕೊನೆಯ ಗ್ರ್ಯಾಂಡ್ಸ್ಲ್ಯಾಮ್ ಆಗಿದೆ. 2019 ರಲ್ಲಿ ವಿಂಬಲ್ಡನ್ ಫೈನಲ್ ತಲುಪಿದ್ದರೂ, ಸೆರ್ಬಿಯಾದ ನೊವಾಕ್ ಜೊಕೊವಿಕ್ ವಿರುದ್ಧ ಸೋಲು ಕಂಡು 21 ನೇ ಪ್ರಶಸ್ತಿಯಿಂದ ವಂಚಿತರಾದರು.
ಇದಾದ ಬಳಿಕ ಪದೇ ಪದೆ ಗಾಯಕ್ಕೆ ತುತ್ತಾದ ಫೆಡರರ್ ಸ್ಪರ್ಧಾತ್ಮಕ ಟೆನ್ನಿಸ್ಗೆ ಮರಳಲು ಪರದಾಡಿದರು. ಕಳೆದ ವರ್ಷವೂ ವಿಂಬಲ್ಡನ್ ಟೂರ್ನಿ ವೇಳೆ ಗಾಯಗೊಂಡು ಹೊರಬಿದ್ದಿದ್ದರು. ಟೆನ್ನಿಸ್ ಜಗತ್ತಿನ ತ್ರಿವಳಿಗಳಲ್ಲಿ ಒಬ್ಬರಾಗಿದ್ದ ಫೆಡರರ್ಗಿಂತಲೂ ಸ್ಪೇನ್ನ ರಾಫೆಲ್ ನಡಾಲ್ 22, ಸರ್ಬಿಯಾದ ನೊವಾಕ್ ಜಾಕೊವಿಕ್ 21 ಗ್ರ್ಯಾಂಡ್ಸ್ಲ್ಯಾಮ್ ಜಯಿಸಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…