ಕ್ರೀಡೆ

ಟೆನ್ನಿಸ್ ಅಂಗಳಕ್ಕೆ ವಿದಾಯ ಹೇಳಿದ ರೋಜರ್ ಫೆಡರರ್

ಟೆನಿಸ್​ ಲೋಕದ ದಿಗ್ಗಜ, 20 ಗ್ರ್ಯಾಂಡ್​ಸ್ಲ್ಯಾಮ್​ಗಳ ಒಡೆಯ ರೋಜರ್ ಫೆಡರರ್​ ಟೆನಿಸ್​ ಅಂಗಳದಿಂದ ಹಿಂದೆ ಸರಿದಿದ್ದಾರೆ. ಮುಂದಿನ ವಾರ ಲಂಡನ್‌ನಲ್ಲಿ ನಡೆಯಲಿರುವ ಲೇವರ್ ಕಪ್ ನಂತರ ಅಧಿಕೃತವಾಗಿ ಟೆನ್ನಿಸ್​ ಅಂಗಳದಿಂದ ನಿವೃತ್ತಿ ಹೊಂದುವುದಾಗಿ 41 ವರ್ಷದ ಟೆನ್ನಿಸ್ ಪಟು ರೋಜರ್ ಫೆಡರರ್ ಟ್ವೀಟ್​ ಮಾಡಿದ್ದಾರೆ.

ವಿದಾಯದ ಬರಹವುಳ್ಳ ಎರಡು ಪುಟಗಳನ್ನು ಪೋಸ್ಟ್​ ಮಾಡಿರುವ ರೋಜರ್​, ಟೆನ್ನಿಸ್‌ನೊಂದಿಗಿನ ಸಂಬಂಧವನ್ನು ಮುಂದುವರೆಸುವೆ. ಆದರೆ ಲಂಡನ್​ನಲ್ಲಿ ನಡೆಯುವ ಲೇವರ್ ಕಪ್ ನನ್ನ ವೃತ್ತಿಯ ಕೊನೆಯ ಟೂರ್ನಿಯಾಗಲಿದೆ ಎಂದು ಹೇಳಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಗಾಯದ ಸಮಸ್ಯೆ, ಶಸ್ತ್ರಚಿಕಿತ್ಸೆಗಳ ಗೋಜಿಲಿನಿಂದ ಬಳಲಿದ್ದೇನೆ. ಸಂಪೂರ್ಣವಾಗಿ ಚೇತರಿಸಿಕೊಂಡು ಸ್ಪರ್ಧಾತ್ಮಕ ಜಗತ್ತಿಗೆ ಮರಳಲು ಇಚ್ಛಿಸಿದ್ದೆ. ಆದರೆ, ನನ್ನ ದೇಹ ಸಹಕರಿಸುತ್ತಿಲ್ಲ. ಅದರ ಇತಿಮಿತಿಗಳು ನನಗೆ ತಿಳಿದಿದೆ. ನನಗೀಗ 41 ವರ್ಷ’ ಎಂದು ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

24 ವರ್ಷಗಳಲ್ಲಿ 1,500 ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ್ದೇನೆ. ಟೆನಿಸ್ ಲೋಕ ನಾನಂದುಕೊಂಡಿದ್ದಕ್ಕಿಂತ ಹೆಚ್ಚೇ ನನ್ನನ್ನು ಬಿಗಿದಪ್ಪಿದೆ. ಈ ಸಮಯ ನನ್ನ ಸ್ಪರ್ಧಾತ್ಮಕ ವೃತ್ತಿಜೀವನವನ್ನು ಕೊನೆಗೊಳಿಸಲು ಸುಸಮಯ ಎಂಬುದನ್ನು ಅರಿತುಕೊಂಡಿದ್ದೇನೆ. ಭವಿಷ್ಯದಲ್ಲಿ ಟೆನಿಸ್ ಆಡಿದರೂ, ಗ್ರ್ಯಾಂಡ್ ಸ್ಲ್ಯಾಮ್‌ಗಳಲ್ಲಿ ಭಾಗವಹಿಸುವುದಿಲ್ಲ’ ಎಂದು ತಿಳಿಸಿದ್ದಾರೆ.

ಟೆನ್ನಿಸ್​ ಲೋಕದ ಹಿರಿಯ ಆಟಗಾರನಾಗಿರುವ ರೋಜರ್​ ಫೆಡರರ್​ 2018 ರಲ್ಲಿ ಆಸ್ಟ್ರೇಲಿಯನ್​ ಓಪನ್​ ಗೆದ್ದಿದ್ದೇ ಕೊನೆಯ ಗ್ರ್ಯಾಂಡ್​ಸ್ಲ್ಯಾಮ್​ ಆಗಿದೆ. 2019 ರಲ್ಲಿ ವಿಂಬಲ್ಡನ್ ಫೈನಲ್ ತಲುಪಿದ್ದರೂ, ಸೆರ್ಬಿಯಾದ ನೊವಾಕ್ ಜೊಕೊವಿಕ್ ವಿರುದ್ಧ ಸೋಲು ಕಂಡು 21 ನೇ ಪ್ರಶಸ್ತಿಯಿಂದ ವಂಚಿತರಾದರು.

ಇದಾದ ಬಳಿಕ ಪದೇ ಪದೆ ಗಾಯಕ್ಕೆ ತುತ್ತಾದ ಫೆಡರರ್​ ಸ್ಪರ್ಧಾತ್ಮಕ ಟೆನ್ನಿಸ್​ಗೆ ಮರಳಲು ಪರದಾಡಿದರು. ಕಳೆದ ವರ್ಷವೂ ವಿಂಬಲ್ಡನ್​ ಟೂರ್ನಿ ವೇಳೆ ಗಾಯಗೊಂಡು ಹೊರಬಿದ್ದಿದ್ದರು. ಟೆನ್ನಿಸ್​ ಜಗತ್ತಿನ ತ್ರಿವಳಿಗಳಲ್ಲಿ ಒಬ್ಬರಾಗಿದ್ದ ಫೆಡರರ್​ಗಿಂತಲೂ ಸ್ಪೇನ್​ನ ರಾಫೆಲ್​ ನಡಾಲ್​ 22, ಸರ್ಬಿಯಾದ ನೊವಾಕ್​ ಜಾಕೊವಿಕ್​ 21 ಗ್ರ್ಯಾಂಡ್​ಸ್ಲ್ಯಾಮ್​ ಜಯಿಸಿದ್ದಾರೆ.

 

 

andolanait

Recent Posts

ಬಿಡದಿ ಟೌನ್‌ಶಿಪ್‌ : ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಏಟು ; ವಾಹನ ಜಖಂ

ಬಿಡದಿ : ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…

1 hour ago

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

6 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

6 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

13 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

13 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

13 hours ago