ಮುಂಬೈ: ಗಾಯದ ಕಾರಣದಿಂದ ಕೆಎಲ್ ರಾಹುಲ್ ಅವರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಿಂದ ಹೊರಬಿದ್ದ ಕಾರಣ ಬಿಸಿಸಿಐ ಬದಲಿ ಆಟಗಾರನನ್ನು ನೇಮಿಸಿದೆ. ಇಶಾನ್ ಕಿಶನ್ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ.
ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಅವರ ಬಲ ತೊಡೆಯ ಭಾಗಕ್ಕೆ ಗಾಯವಾಗಿತ್ತು. ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ನಂತರ, ರಾಹುಲ್ ಅವರಿಗೆ ಆದಷ್ಟು ಬೇಗ ಶಸ್ತ್ರಚಿಕಿತ್ಸೆಗೆ ಒಳಗಾಗಲು ನಿರ್ಧರಿಸಲಾಗಿದೆ. ಅವರಿಗೆ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿ ಮಾಡಲು ನಿರ್ಧರಿಸಲಾಗಿದೆ.
ಹೀಗಾಗಿ ಮುಂದಿನ ಐಪಿಎಲ್ ಪಂದ್ಯಗಳು ಮತ್ತು ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಿಂದ ಅವರು ಹೊರಗುಳಿದಿದ್ದಾರೆ.
ಫೈನಲ್ ಪಂದ್ಯಕ್ಕೆ ನೇಮಕವಾಗಿದ್ದ ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕತ್ ಅವರು ಗಾಯಗೊಂಡಿದ್ದು, ಅವರ ಫೈನಲ್ ಪಂದ್ಯ ಪಾಲ್ಗೊಳ್ಳುವ ಬಗ್ಗೆ ಮುಂದಿನ ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ.
ಡಬ್ಲೂಟಿಸಿ ಫೈನಲ್ ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿ.ಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್, ಇಶಾನ್ ಕಿಶನ್ (ವಿ.ಕೀ).
ಸ್ಟ್ಯಾಂಡ್ ಬೈ ಆಟಗಾರರು: ರುತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…