ಕ್ರೀಡೆ

32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆದು ವಿಶ್ವದಾಖಲೆ ಬರೆದ ಪ್ರಭಾತ್‌ ಜಯಸೂರ್ಯ

ಡರ್ಬನ್:‌ ಸೌತ್‌ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಶ್ರೀಲಂಕಾದ ಸ್ಪಿನ್‌ ಬೌಲರ್‌ ಪ್ರಭಾತ್‌ ಜಯಸೂರ್ಯ 32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಡರ್ಬನ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೌತ್‌ ಆಫ್ರಿಕಾ ಪ್ರಥಮ ಇನ್ನಿಂಗ್ಸ್‌ನಲ್ಲಿ 191 ರನ್‌ ಕಲೆಹಾಕಿ ಆಲೌಟ್‌ ಆದರೆ, ಶ್ರೀಲಂಕಾ ಕೇವಲ 42 ರನ್‌ಗಳಿಗೆ ಆಲೌಟ್‌ ಆಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ 366 ರನ್‌ಗಳಿಸಿ ದಕ್ಷಿಣ ಆಫ್ರಿಕಾ ಡಿಕ್ಲೇರ್‌ ಘೋಷಿಸುವ ಮೂಲಕ ಶ್ರೀಲಂಕಾಗೆ ಗೆಲ್ಲಲು 516 ರನ್‌ ಟಾರ್ಗೆಟ್‌ ನೀಡಿದೆ.

ಮೊದಲ ಟೆಸ್ಟ್‌ ಪಂದ್ಯದ ಎರಡೂ ಇನಿಂಗ್ಸ್‌ ಸೇರಿ ಒಟ್ಟು 4 ವಿಕೆಟ್‌ ಪಡೆಯುವ ಮೂಲಕ ಅತಿ ಕಡಿಮೆ 32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆದ ವಿಶ್ವದ ಮೂರನೇ ಬೌಲರ್‌ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಚಾರ್ಲಿ ಟರ್ನರ್‌ 30 ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆದು ಮೊದಲ ಸ್ಥಾನದಲ್ಲಿ ಇದ್ದರೆ, ಕ್ಲಾರಿ ಗ್ರಿಮೆಟ್ಟ್‌ 31 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿ 2ನೇ ಸ್ಥಾನದಲ್ಲಿದ್ದಾರೆ. ಇದೀಗ ಪ್ರಭಾತ್‌ ಜಯಸೂರ್ಯ 32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆಯುವ ಮೂಲಕ ಈ ಪಟ್ಟಿಯಲ್ಲಿ 3ನೇ ಸ್ಥಾನ ಆಲಂಕರಿಸಿದ್ದಾರೆ.

ಶ್ರೀಲಂಕಾ ಪರ 17 ಟೆಸ್ಟ್‌ ಪಂದ್ಯಗಳನ್ನು ಆಡಿರುವ ಪ್ರಭಾತ್‌ ಜಯಸೂರ್ಯ 32 ಇನ್ನಿಂಗ್ಸ್‌ನಲ್ಲಿ ಒಟ್ಟು 101 ವಿಕೆಟ್‌ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಅತಿ ಕಡಿಮೆ ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆದ ಏಷ್ಯಾದ ಮೊದಲ ಬೌಲರ್‌ ಎನಿಸಿಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

16 mins ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

22 mins ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

26 mins ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

31 mins ago

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

12 hours ago