ಕ್ರೀಡೆ

32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆದು ವಿಶ್ವದಾಖಲೆ ಬರೆದ ಪ್ರಭಾತ್‌ ಜಯಸೂರ್ಯ

ಡರ್ಬನ್:‌ ಸೌತ್‌ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಶ್ರೀಲಂಕಾದ ಸ್ಪಿನ್‌ ಬೌಲರ್‌ ಪ್ರಭಾತ್‌ ಜಯಸೂರ್ಯ 32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಡರ್ಬನ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೌತ್‌ ಆಫ್ರಿಕಾ ಪ್ರಥಮ ಇನ್ನಿಂಗ್ಸ್‌ನಲ್ಲಿ 191 ರನ್‌ ಕಲೆಹಾಕಿ ಆಲೌಟ್‌ ಆದರೆ, ಶ್ರೀಲಂಕಾ ಕೇವಲ 42 ರನ್‌ಗಳಿಗೆ ಆಲೌಟ್‌ ಆಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ 366 ರನ್‌ಗಳಿಸಿ ದಕ್ಷಿಣ ಆಫ್ರಿಕಾ ಡಿಕ್ಲೇರ್‌ ಘೋಷಿಸುವ ಮೂಲಕ ಶ್ರೀಲಂಕಾಗೆ ಗೆಲ್ಲಲು 516 ರನ್‌ ಟಾರ್ಗೆಟ್‌ ನೀಡಿದೆ.

ಮೊದಲ ಟೆಸ್ಟ್‌ ಪಂದ್ಯದ ಎರಡೂ ಇನಿಂಗ್ಸ್‌ ಸೇರಿ ಒಟ್ಟು 4 ವಿಕೆಟ್‌ ಪಡೆಯುವ ಮೂಲಕ ಅತಿ ಕಡಿಮೆ 32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆದ ವಿಶ್ವದ ಮೂರನೇ ಬೌಲರ್‌ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಚಾರ್ಲಿ ಟರ್ನರ್‌ 30 ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆದು ಮೊದಲ ಸ್ಥಾನದಲ್ಲಿ ಇದ್ದರೆ, ಕ್ಲಾರಿ ಗ್ರಿಮೆಟ್ಟ್‌ 31 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿ 2ನೇ ಸ್ಥಾನದಲ್ಲಿದ್ದಾರೆ. ಇದೀಗ ಪ್ರಭಾತ್‌ ಜಯಸೂರ್ಯ 32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆಯುವ ಮೂಲಕ ಈ ಪಟ್ಟಿಯಲ್ಲಿ 3ನೇ ಸ್ಥಾನ ಆಲಂಕರಿಸಿದ್ದಾರೆ.

ಶ್ರೀಲಂಕಾ ಪರ 17 ಟೆಸ್ಟ್‌ ಪಂದ್ಯಗಳನ್ನು ಆಡಿರುವ ಪ್ರಭಾತ್‌ ಜಯಸೂರ್ಯ 32 ಇನ್ನಿಂಗ್ಸ್‌ನಲ್ಲಿ ಒಟ್ಟು 101 ವಿಕೆಟ್‌ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಅತಿ ಕಡಿಮೆ ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆದ ಏಷ್ಯಾದ ಮೊದಲ ಬೌಲರ್‌ ಎನಿಸಿಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

2 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

4 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

5 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

8 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago