ಕ್ರೀಡೆ

ರಸ್ತೆ ಮೇಲಲ್ಲ, ನ್ಯಾಯಾಲಯದಲ್ಲಿ ಹೋರಾಟ ಮುಂದುವರೆಯಲಿದೆ: ಕುಸ್ತಿಪಟುಗಳ ಎಚ್ಚರಿಕೆ

ನವದೆಹಲಿ: ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟವನ್ನು ರಸ್ತೆಗಳ ಮೇಲಲ್ಲ, ನ್ಯಾಯಾಲಯದಲ್ಲಿ ನಡೆಸುತ್ತೇವೆಂದು ಕುಸ್ತಿಪಟುಗಳು ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ಸಿಂಗ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸುವ ಭರವಸೆಯನ್ನು ಸರ್ಕಾರ ಈಡೇರಿಸಿದೆ. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದೇವೆ. ಆದರೆ, ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ. ಆದರೆ, ಆ ಹೋರಾಟ ರಸ್ತೆಗಳ ಮೇಲಲ್ಲ, ಬದಲಿಗೆ ನ್ಯಾಯಾಲಯದಲ್ಲಿ ಮುಂದುವರೆಯಲಿದೆ ಎಂದು ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಕುಸ್ತಿಪಟುಗಳು, ಡಬ್ಲ್ಯುಎಫ್‍ಐನ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿದೆ. ಜುಲೈ 11 ರ ಚುನಾವಣೆಗೆ ಸರ್ಕಾರ ನೀಡಿರುವ ಭರವಸೆಗಾಗಿ ಕಾಯುತ್ತೇವೆ. ಅಲ್ಲದೇ ಕೆಲವು ದಿನಗಳ ಕಾಲ ಸಾಮಾಜಿಕ ಜಾಲತಾಣಗಳಿಂದ ವಿರಾಮ ತೆಗೆದುಕೊಳ್ಳುತ್ತೇವೆಂದು ತಿಳಿಸಿದ್ದಾರೆ.

ಡಬ್ಲ್ಯುಎಫ್‍ಐ ಮುಖ್ಯಸ್ಥರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಏಷ್ಯನ್ ಗೇಮ್ಸ್‍ಗೆ ಮುನ್ನ ತಯಾರಿಗೆ ವಿನಾಯಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ವಿನೇಶ್ ಫೋಗಟ್ ಅವರು ಪತ್ರವೊಂದರ ಚಿತ್ರವನ್ನು ಟ್ವಿಟರ್‍ನಲ್ಲಿ ಹಾಕಿದ್ದಾರೆ. ಈ ಮೂಲಕ ಬಿಜೆಪಿ ಮುಖಂಡ ಹಾಗೂ ಮಾಜಿ ಕುಸ್ತಿಪಟು ಯೋಗೇಶ್ವರ್ ದತ್ ಕ್ರೀಡಾ ಸಚಿವಾಲಯದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆಂದು ತಿಳಿದುಬಂದಿದೆ.

andolanait

Recent Posts

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

12 mins ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

44 mins ago

ಓದುಗರ ಪತ್ರ: ಗಾಳಿ… ತಂಗಾಳಿ !

ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…

50 mins ago

ಓದುಗರ ಪತ್ರ:  ದ್ವೇಷ ಭಾಷಣ ಮಸೂದೆ ದುರ್ಬಳಕೆಯಾಗದಿರಲಿ

ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…

53 mins ago

ಮೈಸೂರು ಮುಡಾ ಹಗರಣ: ಅಕ್ರಮ ನಿವೇಶನ ಹಂಚಿಕೆಗೆ 22.47 ಕೋಟಿ ಲಂಚ ಪಡೆದಿದ್ದ ದಿನೇಶ್‌ ಕುಮಾರ್‌

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ…

55 mins ago

ಓದುಗರ ಪತ್ರ: ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ

ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…

1 hour ago