ನವದೆಹಲಿ: ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟವನ್ನು ರಸ್ತೆಗಳ ಮೇಲಲ್ಲ, ನ್ಯಾಯಾಲಯದಲ್ಲಿ ನಡೆಸುತ್ತೇವೆಂದು ಕುಸ್ತಿಪಟುಗಳು ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ಸಿಂಗ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸುವ ಭರವಸೆಯನ್ನು ಸರ್ಕಾರ ಈಡೇರಿಸಿದೆ. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದೇವೆ. ಆದರೆ, ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ. ಆದರೆ, ಆ ಹೋರಾಟ ರಸ್ತೆಗಳ ಮೇಲಲ್ಲ, ಬದಲಿಗೆ ನ್ಯಾಯಾಲಯದಲ್ಲಿ ಮುಂದುವರೆಯಲಿದೆ ಎಂದು ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಕುಸ್ತಿಪಟುಗಳು, ಡಬ್ಲ್ಯುಎಫ್ಐನ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿದೆ. ಜುಲೈ 11 ರ ಚುನಾವಣೆಗೆ ಸರ್ಕಾರ ನೀಡಿರುವ ಭರವಸೆಗಾಗಿ ಕಾಯುತ್ತೇವೆ. ಅಲ್ಲದೇ ಕೆಲವು ದಿನಗಳ ಕಾಲ ಸಾಮಾಜಿಕ ಜಾಲತಾಣಗಳಿಂದ ವಿರಾಮ ತೆಗೆದುಕೊಳ್ಳುತ್ತೇವೆಂದು ತಿಳಿಸಿದ್ದಾರೆ.
ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಏಷ್ಯನ್ ಗೇಮ್ಸ್ಗೆ ಮುನ್ನ ತಯಾರಿಗೆ ವಿನಾಯಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ವಿನೇಶ್ ಫೋಗಟ್ ಅವರು ಪತ್ರವೊಂದರ ಚಿತ್ರವನ್ನು ಟ್ವಿಟರ್ನಲ್ಲಿ ಹಾಕಿದ್ದಾರೆ. ಈ ಮೂಲಕ ಬಿಜೆಪಿ ಮುಖಂಡ ಹಾಗೂ ಮಾಜಿ ಕುಸ್ತಿಪಟು ಯೋಗೇಶ್ವರ್ ದತ್ ಕ್ರೀಡಾ ಸಚಿವಾಲಯದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆಂದು ತಿಳಿದುಬಂದಿದೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…