ಕ್ರೀಡೆ

ರಸ್ತೆ ಮೇಲಲ್ಲ, ನ್ಯಾಯಾಲಯದಲ್ಲಿ ಹೋರಾಟ ಮುಂದುವರೆಯಲಿದೆ: ಕುಸ್ತಿಪಟುಗಳ ಎಚ್ಚರಿಕೆ

ನವದೆಹಲಿ: ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟವನ್ನು ರಸ್ತೆಗಳ ಮೇಲಲ್ಲ, ನ್ಯಾಯಾಲಯದಲ್ಲಿ ನಡೆಸುತ್ತೇವೆಂದು ಕುಸ್ತಿಪಟುಗಳು ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ಸಿಂಗ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸುವ ಭರವಸೆಯನ್ನು ಸರ್ಕಾರ ಈಡೇರಿಸಿದೆ. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದೇವೆ. ಆದರೆ, ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ. ಆದರೆ, ಆ ಹೋರಾಟ ರಸ್ತೆಗಳ ಮೇಲಲ್ಲ, ಬದಲಿಗೆ ನ್ಯಾಯಾಲಯದಲ್ಲಿ ಮುಂದುವರೆಯಲಿದೆ ಎಂದು ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಕುಸ್ತಿಪಟುಗಳು, ಡಬ್ಲ್ಯುಎಫ್‍ಐನ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿದೆ. ಜುಲೈ 11 ರ ಚುನಾವಣೆಗೆ ಸರ್ಕಾರ ನೀಡಿರುವ ಭರವಸೆಗಾಗಿ ಕಾಯುತ್ತೇವೆ. ಅಲ್ಲದೇ ಕೆಲವು ದಿನಗಳ ಕಾಲ ಸಾಮಾಜಿಕ ಜಾಲತಾಣಗಳಿಂದ ವಿರಾಮ ತೆಗೆದುಕೊಳ್ಳುತ್ತೇವೆಂದು ತಿಳಿಸಿದ್ದಾರೆ.

ಡಬ್ಲ್ಯುಎಫ್‍ಐ ಮುಖ್ಯಸ್ಥರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಏಷ್ಯನ್ ಗೇಮ್ಸ್‍ಗೆ ಮುನ್ನ ತಯಾರಿಗೆ ವಿನಾಯಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ವಿನೇಶ್ ಫೋಗಟ್ ಅವರು ಪತ್ರವೊಂದರ ಚಿತ್ರವನ್ನು ಟ್ವಿಟರ್‍ನಲ್ಲಿ ಹಾಕಿದ್ದಾರೆ. ಈ ಮೂಲಕ ಬಿಜೆಪಿ ಮುಖಂಡ ಹಾಗೂ ಮಾಜಿ ಕುಸ್ತಿಪಟು ಯೋಗೇಶ್ವರ್ ದತ್ ಕ್ರೀಡಾ ಸಚಿವಾಲಯದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆಂದು ತಿಳಿದುಬಂದಿದೆ.

andolanait

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago