ನವದೆಹಲಿ: ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟವನ್ನು ರಸ್ತೆಗಳ ಮೇಲಲ್ಲ, ನ್ಯಾಯಾಲಯದಲ್ಲಿ ನಡೆಸುತ್ತೇವೆಂದು ಕುಸ್ತಿಪಟುಗಳು ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ಸಿಂಗ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸುವ ಭರವಸೆಯನ್ನು ಸರ್ಕಾರ ಈಡೇರಿಸಿದೆ. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದೇವೆ. ಆದರೆ, ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ. ಆದರೆ, ಆ ಹೋರಾಟ ರಸ್ತೆಗಳ ಮೇಲಲ್ಲ, ಬದಲಿಗೆ ನ್ಯಾಯಾಲಯದಲ್ಲಿ ಮುಂದುವರೆಯಲಿದೆ ಎಂದು ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಕುಸ್ತಿಪಟುಗಳು, ಡಬ್ಲ್ಯುಎಫ್ಐನ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿದೆ. ಜುಲೈ 11 ರ ಚುನಾವಣೆಗೆ ಸರ್ಕಾರ ನೀಡಿರುವ ಭರವಸೆಗಾಗಿ ಕಾಯುತ್ತೇವೆ. ಅಲ್ಲದೇ ಕೆಲವು ದಿನಗಳ ಕಾಲ ಸಾಮಾಜಿಕ ಜಾಲತಾಣಗಳಿಂದ ವಿರಾಮ ತೆಗೆದುಕೊಳ್ಳುತ್ತೇವೆಂದು ತಿಳಿಸಿದ್ದಾರೆ.
ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಏಷ್ಯನ್ ಗೇಮ್ಸ್ಗೆ ಮುನ್ನ ತಯಾರಿಗೆ ವಿನಾಯಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ವಿನೇಶ್ ಫೋಗಟ್ ಅವರು ಪತ್ರವೊಂದರ ಚಿತ್ರವನ್ನು ಟ್ವಿಟರ್ನಲ್ಲಿ ಹಾಕಿದ್ದಾರೆ. ಈ ಮೂಲಕ ಬಿಜೆಪಿ ಮುಖಂಡ ಹಾಗೂ ಮಾಜಿ ಕುಸ್ತಿಪಟು ಯೋಗೇಶ್ವರ್ ದತ್ ಕ್ರೀಡಾ ಸಚಿವಾಲಯದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆಂದು ತಿಳಿದುಬಂದಿದೆ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…