ಕ್ರೀಡೆ

ನಾಕೌಟ್‌ ಆಗಿ ಏರ್ಪಟ್ಟ ಆಸ್ಟ್ರೇಲಿಯಾ-ಆಫ್ಗನ್‌ ನಡುವಿನ ಪಂದ್ಯ

ಲಾಹೋರ್‌: ಇಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯವು ನಾಕೌಟ್‌ ಪಂದ್ಯವಾಗಿ ಏರ್ಪಟ್ಟಿದೆ.

ಇಂಗ್ಲೆಂಡ್‌ ತಂಡ ಸೋಲಿಸಿ ಉತ್ಸಾಹದಲ್ಲಿರುವ ಅಫ್ಘಾನಿಸ್ತಾನ ತಂಡವು ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಹೇಗಾದರೂ ಮಾಡಿ ಸೋಲಿಸಿ ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಹಷ್ಮತ್‌ವುಲ್ಲಾ ಶಾಹಿದಿ ಬಳಗವು ಚಿಂತನೆ ನಡೆಸಿದೆ.

ಚಾಂಪಿಯನ್ಸ್‌ ಟ್ರೋಫಿಗೆ ಪದಾರ್ಪಣೆ ಮಾಡಿದ ಅಫ್ಗನ್‌ ಪಡೆ ಗಡಾಫಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು 8 ರನ್‌ಗಳಿಂದ ಸೋಲಿಸಿ ಅಚ್ಚರಿಯ ಗೆಲುವು ಪಡೆದಿತ್ತು.

ಎಂಟು ರಾಷ್ಟ್ರಗಳ ಈ ಟೂರ್ನಿಯಲ್ಲಿ ನಾಲ್ಕರ ಘಟ್ಟ ತಲುಪಬೇಕಾದರೆ ಅಫ್ಗನ್ನರಿಗೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.

ಇತ್ತ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್‌ ವಿರುದ್ಧ 351 ರನ್‌ಗಳ ದೊಡ್ಡ ಮೊತ್ತ ಬೆನ್ನಟ್ಟಿ ಜಯಗಳಿಸಿತ್ತು. ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಪಂದ್ಯ ಮಳೆಯಿಂದ ರದ್ದಾಗಿತ್ತು.

ಅಫ್ಗನ್‌ ತಂಡ 2 ಪಂದ್ಯಗಳಲ್ಲಿ ಒಂದನ್ನು ಗೆದ್ದ 2 ಅಂಕಗಳಿಸಿದ್ದರೆ, ಆಸ್ಟ್ರೇಲಿಯಾ ತಂಡ 3 ಅಂಕ ಹೊಂದಿದೆ. ಸೆಮಿಫೈನಲ್‌ಗೆ ತಲುಪಬೇಕಾದರೆ ಎರಡು ತಂಡಗಳಿಗೂ ಈ ಪಂದ್ಯದ ಗೆಲುವು ಅನಿವಾರ್ಯವಾಗಿದೆ.

ಪಂದ್ಯ ಆರಂಭ: 2:30 PM
ಸ್ಥಳ: ಗಡಾಫಿ ಸ್ಟೇಡಿಯಂ, ಲಾಹೋರ್‌

ಆಂದೋಲನ ಡೆಸ್ಕ್

Recent Posts

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…

3 mins ago

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

47 mins ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

2 hours ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

2 hours ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

3 hours ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

3 hours ago