ಕ್ರೀಡೆ

ಭಾರತವನ್ನು ಸೋಲಿಸುವ ತಂಡ ಈ ಬಾರಿ ವಿಶ್ವಕಪ್‌ ಗೆಲ್ಲಲಿದೆ: ಮೈಕಲ್‌ ವಾನ್‌

ನವದೆಹಲಿ : ರೋಹಿತ್‌ ಶರ್ಮಾ ನಾಯಕತ್ವದ ಭಾರತವನ್ನು ಸೋಲಿಸುವ ತಂಡ ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಗೆಲ್ಲಲಿದೆ ಎಂದು ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಮೈಕಲ್‌ ವಾನ್‌ ಭವಿಷ್ಯ ನುಡಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 399 ರನ್‌ಗಳನ್ನು ಕಲೆ ಹಾಕಿದ ಬಳಿಕ ವಾನ್ ಈ ಹೇಳಿಕೆ ನೀಡಿದ್ದಾರೆ.

ಇಂದೋರ್‌ನ ಹೋಳ್ಕರ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ ಅದ್ಭುತ ಪ್ರದರ್ಶನ ತೋರಿತು. ಶುಭಮನ್ ಗಿಲ್ ಹಾಗೂ ಶ್ರೇಯಸ್‌ ಅಯ್ಯರ್ ಅವರ ಶತಕಗಳ ಬಲದಿಂದ ಟೀಮ್‌ ಇಂಡಿಯಾ 399 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ 400 ರನ್‌ಗಳ ಗುರಿಯನ್ನು ನೀಡಿತು.

ಬಳಿಕ ಗುರಿ ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡ 28.2 ಓವರ್‌ಗಳಿಗೆ 217 ರನ್‌ಗಳಿಗೆ ಆಲ್‌ಔಟ್‌ ಆಯಿತು. ಆ ಮೂಲಕ 99 ರನ್‌ಗಳಿಂದ ಸೋಲು ಅನುಭವಿಸಿತು. ಈ ಪಂದ್ಯದ ಗೆಲುವಿನ ಮೂಲಕ ಟೀಮ್‌ ಇಂಡಿಯಾ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ 2-0 ಅಂತರದಲ್ಲಿ ಏಕದಿನ ಸರಣಿಯನ್ನು ವಶಪಡಿಸಿಕೊಂಡಿತು.

ಮೈಕಲ್‌ ವಾನ್‌ ಕೊಟ್ಟ ಹೇಳಿಕೆ : ಭಾರತ ತಂಡದ ಬ್ಯಾಟಿಂಗ್‌ಗೆ ಮೈಕಲ್‌ ವಾನ್‌ ಆಕರ್ಷಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟೀಮ್ ಇಂಡಿಯಾವನ್ನು ಶ್ಲಾಘಿಸಿದ್ದಾರೆ. ಈ ಬಾರಿ ಭಾರತವನ್ನು ಸೋಲಿಸುವ ತಂಡ ಏಕದಿನ ವಿಶ್ವಕಪ್‌ ಗೆಲ್ಲಲಿದೆ ಎಂದು ದೊಡ್ಡ ಭವಿಷ್ಯ ನುಡಿದಿದ್ದಾರೆ. ವಾನ್‌ ಟ್ವೀಟ್‌ಗೆ ಅಭಿಮಾನಿಗಳು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಭಾರತವನ್ನು ಸೋಲಿಸುವ ತಂಡ ಈ ಬಾರಿ ಏಕದಿನ ವಿಶ್ವಕಪ್‌ ಮುಡಿಗೇರಿಸಿಕೊಳ್ಳಲಿದೆ ಎಂಬ ಬಗ್ಗೆ ನನಗೆ ಖಚಿತತೆ ಇದೆ. ಭಾರತದ ಪಿಚ್‌ಗಳಲ್ಲಿ ಟೀಮ್‌ ಇಂಡಿಯಾ ಬ್ಯಾಟಿಂಗ್ ಲೈನ್ ಅಪ್ ಹಾಸ್ಯಾಸ್ಪದವಾಗಿದೆ…ಇದರ ಜೊತೆಗೆ ಭಾರತ ತಂಡದಲ್ಲಿ ಬೌಲಿಂಗ್‌ ಸಂಯೋಜನೆ ಸಂಪೂರ್ಣವಾಗಿದೆ. ಆದರೆ, ಒತ್ತಡದ ಮೂಲಕ ಭಾರತ ತಂಡವನ್ನು ಎದುರಾಳಿ ತಂಡಗಳು ನಿಯಂತ್ರಿಸಬಹುದು,” ಎಂದು ಮೈಕಲ್‌ ವಾನ್‌ ಟ್ವೀಟ್‌ ಮಾಡಿದ್ದಾರೆ.

https://x.com/MichaelVaughan/status/1705922228842291389?s=20

andolanait

Recent Posts

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

19 mins ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

2 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

3 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

6 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

6 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

6 hours ago