ನವದೆಹಲಿ : ರೋಹಿತ್ ಶರ್ಮಾ ನಾಯಕತ್ವದ ಭಾರತವನ್ನು ಸೋಲಿಸುವ ತಂಡ ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್ ಗೆಲ್ಲಲಿದೆ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಭವಿಷ್ಯ ನುಡಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 399 ರನ್ಗಳನ್ನು ಕಲೆ ಹಾಕಿದ ಬಳಿಕ ವಾನ್ ಈ ಹೇಳಿಕೆ ನೀಡಿದ್ದಾರೆ.
ಇಂದೋರ್ನ ಹೋಳ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಅದ್ಭುತ ಪ್ರದರ್ಶನ ತೋರಿತು. ಶುಭಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಶತಕಗಳ ಬಲದಿಂದ ಟೀಮ್ ಇಂಡಿಯಾ 399 ರನ್ಗಳನ್ನು ಕಲೆ ಹಾಕಿತು. ಆ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ 400 ರನ್ಗಳ ಗುರಿಯನ್ನು ನೀಡಿತು.
ಬಳಿಕ ಗುರಿ ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡ 28.2 ಓವರ್ಗಳಿಗೆ 217 ರನ್ಗಳಿಗೆ ಆಲ್ಔಟ್ ಆಯಿತು. ಆ ಮೂಲಕ 99 ರನ್ಗಳಿಂದ ಸೋಲು ಅನುಭವಿಸಿತು. ಈ ಪಂದ್ಯದ ಗೆಲುವಿನ ಮೂಲಕ ಟೀಮ್ ಇಂಡಿಯಾ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ 2-0 ಅಂತರದಲ್ಲಿ ಏಕದಿನ ಸರಣಿಯನ್ನು ವಶಪಡಿಸಿಕೊಂಡಿತು.
ಮೈಕಲ್ ವಾನ್ ಕೊಟ್ಟ ಹೇಳಿಕೆ : ಭಾರತ ತಂಡದ ಬ್ಯಾಟಿಂಗ್ಗೆ ಮೈಕಲ್ ವಾನ್ ಆಕರ್ಷಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟೀಮ್ ಇಂಡಿಯಾವನ್ನು ಶ್ಲಾಘಿಸಿದ್ದಾರೆ. ಈ ಬಾರಿ ಭಾರತವನ್ನು ಸೋಲಿಸುವ ತಂಡ ಏಕದಿನ ವಿಶ್ವಕಪ್ ಗೆಲ್ಲಲಿದೆ ಎಂದು ದೊಡ್ಡ ಭವಿಷ್ಯ ನುಡಿದಿದ್ದಾರೆ. ವಾನ್ ಟ್ವೀಟ್ಗೆ ಅಭಿಮಾನಿಗಳು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
“ಭಾರತವನ್ನು ಸೋಲಿಸುವ ತಂಡ ಈ ಬಾರಿ ಏಕದಿನ ವಿಶ್ವಕಪ್ ಮುಡಿಗೇರಿಸಿಕೊಳ್ಳಲಿದೆ ಎಂಬ ಬಗ್ಗೆ ನನಗೆ ಖಚಿತತೆ ಇದೆ. ಭಾರತದ ಪಿಚ್ಗಳಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಲೈನ್ ಅಪ್ ಹಾಸ್ಯಾಸ್ಪದವಾಗಿದೆ…ಇದರ ಜೊತೆಗೆ ಭಾರತ ತಂಡದಲ್ಲಿ ಬೌಲಿಂಗ್ ಸಂಯೋಜನೆ ಸಂಪೂರ್ಣವಾಗಿದೆ. ಆದರೆ, ಒತ್ತಡದ ಮೂಲಕ ಭಾರತ ತಂಡವನ್ನು ಎದುರಾಳಿ ತಂಡಗಳು ನಿಯಂತ್ರಿಸಬಹುದು,” ಎಂದು ಮೈಕಲ್ ವಾನ್ ಟ್ವೀಟ್ ಮಾಡಿದ್ದಾರೆ.
https://x.com/MichaelVaughan/status/1705922228842291389?s=20
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…