ಕ್ರೀಡೆ

ಭಾರತವನ್ನು ಸೋಲಿಸುವ ತಂಡ ಈ ಬಾರಿ ವಿಶ್ವಕಪ್‌ ಗೆಲ್ಲಲಿದೆ: ಮೈಕಲ್‌ ವಾನ್‌

ನವದೆಹಲಿ : ರೋಹಿತ್‌ ಶರ್ಮಾ ನಾಯಕತ್ವದ ಭಾರತವನ್ನು ಸೋಲಿಸುವ ತಂಡ ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಗೆಲ್ಲಲಿದೆ ಎಂದು ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಮೈಕಲ್‌ ವಾನ್‌ ಭವಿಷ್ಯ ನುಡಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 399 ರನ್‌ಗಳನ್ನು ಕಲೆ ಹಾಕಿದ ಬಳಿಕ ವಾನ್ ಈ ಹೇಳಿಕೆ ನೀಡಿದ್ದಾರೆ.

ಇಂದೋರ್‌ನ ಹೋಳ್ಕರ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ ಅದ್ಭುತ ಪ್ರದರ್ಶನ ತೋರಿತು. ಶುಭಮನ್ ಗಿಲ್ ಹಾಗೂ ಶ್ರೇಯಸ್‌ ಅಯ್ಯರ್ ಅವರ ಶತಕಗಳ ಬಲದಿಂದ ಟೀಮ್‌ ಇಂಡಿಯಾ 399 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ 400 ರನ್‌ಗಳ ಗುರಿಯನ್ನು ನೀಡಿತು.

ಬಳಿಕ ಗುರಿ ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡ 28.2 ಓವರ್‌ಗಳಿಗೆ 217 ರನ್‌ಗಳಿಗೆ ಆಲ್‌ಔಟ್‌ ಆಯಿತು. ಆ ಮೂಲಕ 99 ರನ್‌ಗಳಿಂದ ಸೋಲು ಅನುಭವಿಸಿತು. ಈ ಪಂದ್ಯದ ಗೆಲುವಿನ ಮೂಲಕ ಟೀಮ್‌ ಇಂಡಿಯಾ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ 2-0 ಅಂತರದಲ್ಲಿ ಏಕದಿನ ಸರಣಿಯನ್ನು ವಶಪಡಿಸಿಕೊಂಡಿತು.

ಮೈಕಲ್‌ ವಾನ್‌ ಕೊಟ್ಟ ಹೇಳಿಕೆ : ಭಾರತ ತಂಡದ ಬ್ಯಾಟಿಂಗ್‌ಗೆ ಮೈಕಲ್‌ ವಾನ್‌ ಆಕರ್ಷಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟೀಮ್ ಇಂಡಿಯಾವನ್ನು ಶ್ಲಾಘಿಸಿದ್ದಾರೆ. ಈ ಬಾರಿ ಭಾರತವನ್ನು ಸೋಲಿಸುವ ತಂಡ ಏಕದಿನ ವಿಶ್ವಕಪ್‌ ಗೆಲ್ಲಲಿದೆ ಎಂದು ದೊಡ್ಡ ಭವಿಷ್ಯ ನುಡಿದಿದ್ದಾರೆ. ವಾನ್‌ ಟ್ವೀಟ್‌ಗೆ ಅಭಿಮಾನಿಗಳು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಭಾರತವನ್ನು ಸೋಲಿಸುವ ತಂಡ ಈ ಬಾರಿ ಏಕದಿನ ವಿಶ್ವಕಪ್‌ ಮುಡಿಗೇರಿಸಿಕೊಳ್ಳಲಿದೆ ಎಂಬ ಬಗ್ಗೆ ನನಗೆ ಖಚಿತತೆ ಇದೆ. ಭಾರತದ ಪಿಚ್‌ಗಳಲ್ಲಿ ಟೀಮ್‌ ಇಂಡಿಯಾ ಬ್ಯಾಟಿಂಗ್ ಲೈನ್ ಅಪ್ ಹಾಸ್ಯಾಸ್ಪದವಾಗಿದೆ…ಇದರ ಜೊತೆಗೆ ಭಾರತ ತಂಡದಲ್ಲಿ ಬೌಲಿಂಗ್‌ ಸಂಯೋಜನೆ ಸಂಪೂರ್ಣವಾಗಿದೆ. ಆದರೆ, ಒತ್ತಡದ ಮೂಲಕ ಭಾರತ ತಂಡವನ್ನು ಎದುರಾಳಿ ತಂಡಗಳು ನಿಯಂತ್ರಿಸಬಹುದು,” ಎಂದು ಮೈಕಲ್‌ ವಾನ್‌ ಟ್ವೀಟ್‌ ಮಾಡಿದ್ದಾರೆ.

https://x.com/MichaelVaughan/status/1705922228842291389?s=20

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago