ಕ್ರೀಡೆ

ಡಬ್ಲ್ಯೂಎಫ್‌ಐ ಅಮಾನತುಗೊಳಿಸಿದ ವಿಶ್ವ ಕುಸ್ತಿ ಸಂಸ್ಥೆ

ನವದೆಹಲಿ : ಚುನಾವಣೆಗಳನ್ನು ನಡೆಸಲು ವಿಫಲವಾಗಿರುವ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯು ಎಫ್ ಐ)ಅನ್ನು ವಿಶ್ವ ಕುಸ್ತಿ ಸಂಸ್ಥೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಗುರುವಾರ ಅಮಾನತುಗೊಳಿಸಿದೆ. ಈ ಬೆಳವಣಿಗೆಯು ಮುಂಬರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಧ್ವಜದ ಅಡಿಯಲ್ಲಿ ಸ್ಪರ್ಧಿಸಲು ಭಾರತೀಯ ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ.

ಭೂಪೇಂದರ್ ಸಿಂಗ್ ಬಜ್ವಾ ನೇತೃತ್ವದ ತಾತ್ಕಾಲಿಕ ಸಮಿತಿಯು ಚುನಾವಣೆಗಳನ್ನು ನಡೆಸಲು ವಿಶ್ವ ಕುಸ್ತಿ ಸಂಸ್ಥೆ ನೀಡಿದ 45 ದಿನಗಳ ಗಡುವನ್ನು ಗೌರವಿಸದ ಕಾರಣ ಸೆಪ್ಟೆಂಬರ್ 16 ರಿಂದ ಆರಂಭವಾಗುವ ಒಲಿಂಪಿಕ್ ಅರ್ಹತಾ ಟೂರ್ನಿಯಾಗಿರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಕುಸ್ತಿಪಟುಗಳು ‘ತಟಸ್ಥ ಅಥ್ಲೀಟ್ಗಳಾಗಿ’ ಸ್ಪರ್ಧಿಸಬೇಕಾಗುತ್ತದೆ.

ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ನ ಹಂಗಾಮಿ ಸಿಇಒ ಕಲ್ಯಾಣ್ ಚೌಬೆ ಅವರು ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತದ ಕುಸ್ತಿಪಟುಗಳು ಭಾಗವಹಿಸುತ್ತಾರೆ ಆದರೂ ಅದು ತಟಸ್ಥವಾಗಿರುತ್ತದೆ ಹಾಗೂ ಅವರು ರಾಷ್ಟ್ರಧ್ವಜದ ಅಡಿಯಲ್ಲಿ ಸ್ಪರ್ದಿಸುವುದಿಲ್ಲ. ಇದಲ್ಲದೆ, ಭಾರತದ ಕುಸ್ತಿಪಟುಗಳು ಪದಕ ಜಯಿಸಿದರೆ ರಾಷ್ಟ್ರಗೀತೆಯನ್ನು ನುಡಿಸಲಾಗುವುದಿಲ್ಲ.

ವಿಶ್ವ ಕುಸ್ತಿ ಸಂಸ್ಥೆಯು ಐಒಎಗೆ ಪತ್ರ ಬರೆದು, ನಿರ್ಧಾರದ ಬಗ್ಗೆ ತಿಳಿಸಿದೆ.

IOA ಸಂವಹನವನ್ನು ಸ್ವೀಕರಿಸಿದೆ ಮತ್ತು ವಿಶ್ವ ಚಾಂಪಿಯನ್ ಶಿಪ್ ಗಾಗಿ ತಂಡಗಳ ಆಯ್ಕೆ ಸೇರಿದಂತೆ ಭವಿಷ್ಯದ ಕ್ರಮವನ್ನು ನಿರ್ಧರಿಸುತ್ತದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

29 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

34 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

43 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago