ಕ್ರೀಡೆ

ಡಬ್ಲ್ಯೂಎಫ್‌ಐ ಅಮಾನತುಗೊಳಿಸಿದ ವಿಶ್ವ ಕುಸ್ತಿ ಸಂಸ್ಥೆ

ನವದೆಹಲಿ : ಚುನಾವಣೆಗಳನ್ನು ನಡೆಸಲು ವಿಫಲವಾಗಿರುವ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯು ಎಫ್ ಐ)ಅನ್ನು ವಿಶ್ವ ಕುಸ್ತಿ ಸಂಸ್ಥೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಗುರುವಾರ ಅಮಾನತುಗೊಳಿಸಿದೆ. ಈ ಬೆಳವಣಿಗೆಯು ಮುಂಬರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಧ್ವಜದ ಅಡಿಯಲ್ಲಿ ಸ್ಪರ್ಧಿಸಲು ಭಾರತೀಯ ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ.

ಭೂಪೇಂದರ್ ಸಿಂಗ್ ಬಜ್ವಾ ನೇತೃತ್ವದ ತಾತ್ಕಾಲಿಕ ಸಮಿತಿಯು ಚುನಾವಣೆಗಳನ್ನು ನಡೆಸಲು ವಿಶ್ವ ಕುಸ್ತಿ ಸಂಸ್ಥೆ ನೀಡಿದ 45 ದಿನಗಳ ಗಡುವನ್ನು ಗೌರವಿಸದ ಕಾರಣ ಸೆಪ್ಟೆಂಬರ್ 16 ರಿಂದ ಆರಂಭವಾಗುವ ಒಲಿಂಪಿಕ್ ಅರ್ಹತಾ ಟೂರ್ನಿಯಾಗಿರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಕುಸ್ತಿಪಟುಗಳು ‘ತಟಸ್ಥ ಅಥ್ಲೀಟ್ಗಳಾಗಿ’ ಸ್ಪರ್ಧಿಸಬೇಕಾಗುತ್ತದೆ.

ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ನ ಹಂಗಾಮಿ ಸಿಇಒ ಕಲ್ಯಾಣ್ ಚೌಬೆ ಅವರು ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತದ ಕುಸ್ತಿಪಟುಗಳು ಭಾಗವಹಿಸುತ್ತಾರೆ ಆದರೂ ಅದು ತಟಸ್ಥವಾಗಿರುತ್ತದೆ ಹಾಗೂ ಅವರು ರಾಷ್ಟ್ರಧ್ವಜದ ಅಡಿಯಲ್ಲಿ ಸ್ಪರ್ದಿಸುವುದಿಲ್ಲ. ಇದಲ್ಲದೆ, ಭಾರತದ ಕುಸ್ತಿಪಟುಗಳು ಪದಕ ಜಯಿಸಿದರೆ ರಾಷ್ಟ್ರಗೀತೆಯನ್ನು ನುಡಿಸಲಾಗುವುದಿಲ್ಲ.

ವಿಶ್ವ ಕುಸ್ತಿ ಸಂಸ್ಥೆಯು ಐಒಎಗೆ ಪತ್ರ ಬರೆದು, ನಿರ್ಧಾರದ ಬಗ್ಗೆ ತಿಳಿಸಿದೆ.

IOA ಸಂವಹನವನ್ನು ಸ್ವೀಕರಿಸಿದೆ ಮತ್ತು ವಿಶ್ವ ಚಾಂಪಿಯನ್ ಶಿಪ್ ಗಾಗಿ ತಂಡಗಳ ಆಯ್ಕೆ ಸೇರಿದಂತೆ ಭವಿಷ್ಯದ ಕ್ರಮವನ್ನು ನಿರ್ಧರಿಸುತ್ತದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

9 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

11 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

11 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

11 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

12 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

12 hours ago