ನವದೆಹಲಿ : ಚುನಾವಣೆಗಳನ್ನು ನಡೆಸಲು ವಿಫಲವಾಗಿರುವ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯು ಎಫ್ ಐ)ಅನ್ನು ವಿಶ್ವ ಕುಸ್ತಿ ಸಂಸ್ಥೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಗುರುವಾರ ಅಮಾನತುಗೊಳಿಸಿದೆ. ಈ ಬೆಳವಣಿಗೆಯು ಮುಂಬರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಧ್ವಜದ ಅಡಿಯಲ್ಲಿ ಸ್ಪರ್ಧಿಸಲು ಭಾರತೀಯ ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ.
ಭೂಪೇಂದರ್ ಸಿಂಗ್ ಬಜ್ವಾ ನೇತೃತ್ವದ ತಾತ್ಕಾಲಿಕ ಸಮಿತಿಯು ಚುನಾವಣೆಗಳನ್ನು ನಡೆಸಲು ವಿಶ್ವ ಕುಸ್ತಿ ಸಂಸ್ಥೆ ನೀಡಿದ 45 ದಿನಗಳ ಗಡುವನ್ನು ಗೌರವಿಸದ ಕಾರಣ ಸೆಪ್ಟೆಂಬರ್ 16 ರಿಂದ ಆರಂಭವಾಗುವ ಒಲಿಂಪಿಕ್ ಅರ್ಹತಾ ಟೂರ್ನಿಯಾಗಿರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಕುಸ್ತಿಪಟುಗಳು ‘ತಟಸ್ಥ ಅಥ್ಲೀಟ್ಗಳಾಗಿ’ ಸ್ಪರ್ಧಿಸಬೇಕಾಗುತ್ತದೆ.
ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ನ ಹಂಗಾಮಿ ಸಿಇಒ ಕಲ್ಯಾಣ್ ಚೌಬೆ ಅವರು ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತದ ಕುಸ್ತಿಪಟುಗಳು ಭಾಗವಹಿಸುತ್ತಾರೆ ಆದರೂ ಅದು ತಟಸ್ಥವಾಗಿರುತ್ತದೆ ಹಾಗೂ ಅವರು ರಾಷ್ಟ್ರಧ್ವಜದ ಅಡಿಯಲ್ಲಿ ಸ್ಪರ್ದಿಸುವುದಿಲ್ಲ. ಇದಲ್ಲದೆ, ಭಾರತದ ಕುಸ್ತಿಪಟುಗಳು ಪದಕ ಜಯಿಸಿದರೆ ರಾಷ್ಟ್ರಗೀತೆಯನ್ನು ನುಡಿಸಲಾಗುವುದಿಲ್ಲ.
ವಿಶ್ವ ಕುಸ್ತಿ ಸಂಸ್ಥೆಯು ಐಒಎಗೆ ಪತ್ರ ಬರೆದು, ನಿರ್ಧಾರದ ಬಗ್ಗೆ ತಿಳಿಸಿದೆ.
IOA ಸಂವಹನವನ್ನು ಸ್ವೀಕರಿಸಿದೆ ಮತ್ತು ವಿಶ್ವ ಚಾಂಪಿಯನ್ ಶಿಪ್ ಗಾಗಿ ತಂಡಗಳ ಆಯ್ಕೆ ಸೇರಿದಂತೆ ಭವಿಷ್ಯದ ಕ್ರಮವನ್ನು ನಿರ್ಧರಿಸುತ್ತದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…