ಕ್ರೀಡೆ

ಡಬ್ಲ್ಯೂಎಫ್‌ಐ ಅಮಾನತುಗೊಳಿಸಿದ ವಿಶ್ವ ಕುಸ್ತಿ ಸಂಸ್ಥೆ

ನವದೆಹಲಿ : ಚುನಾವಣೆಗಳನ್ನು ನಡೆಸಲು ವಿಫಲವಾಗಿರುವ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯು ಎಫ್ ಐ)ಅನ್ನು ವಿಶ್ವ ಕುಸ್ತಿ ಸಂಸ್ಥೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಗುರುವಾರ ಅಮಾನತುಗೊಳಿಸಿದೆ. ಈ ಬೆಳವಣಿಗೆಯು ಮುಂಬರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಧ್ವಜದ ಅಡಿಯಲ್ಲಿ ಸ್ಪರ್ಧಿಸಲು ಭಾರತೀಯ ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ.

ಭೂಪೇಂದರ್ ಸಿಂಗ್ ಬಜ್ವಾ ನೇತೃತ್ವದ ತಾತ್ಕಾಲಿಕ ಸಮಿತಿಯು ಚುನಾವಣೆಗಳನ್ನು ನಡೆಸಲು ವಿಶ್ವ ಕುಸ್ತಿ ಸಂಸ್ಥೆ ನೀಡಿದ 45 ದಿನಗಳ ಗಡುವನ್ನು ಗೌರವಿಸದ ಕಾರಣ ಸೆಪ್ಟೆಂಬರ್ 16 ರಿಂದ ಆರಂಭವಾಗುವ ಒಲಿಂಪಿಕ್ ಅರ್ಹತಾ ಟೂರ್ನಿಯಾಗಿರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಕುಸ್ತಿಪಟುಗಳು ‘ತಟಸ್ಥ ಅಥ್ಲೀಟ್ಗಳಾಗಿ’ ಸ್ಪರ್ಧಿಸಬೇಕಾಗುತ್ತದೆ.

ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ನ ಹಂಗಾಮಿ ಸಿಇಒ ಕಲ್ಯಾಣ್ ಚೌಬೆ ಅವರು ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತದ ಕುಸ್ತಿಪಟುಗಳು ಭಾಗವಹಿಸುತ್ತಾರೆ ಆದರೂ ಅದು ತಟಸ್ಥವಾಗಿರುತ್ತದೆ ಹಾಗೂ ಅವರು ರಾಷ್ಟ್ರಧ್ವಜದ ಅಡಿಯಲ್ಲಿ ಸ್ಪರ್ದಿಸುವುದಿಲ್ಲ. ಇದಲ್ಲದೆ, ಭಾರತದ ಕುಸ್ತಿಪಟುಗಳು ಪದಕ ಜಯಿಸಿದರೆ ರಾಷ್ಟ್ರಗೀತೆಯನ್ನು ನುಡಿಸಲಾಗುವುದಿಲ್ಲ.

ವಿಶ್ವ ಕುಸ್ತಿ ಸಂಸ್ಥೆಯು ಐಒಎಗೆ ಪತ್ರ ಬರೆದು, ನಿರ್ಧಾರದ ಬಗ್ಗೆ ತಿಳಿಸಿದೆ.

IOA ಸಂವಹನವನ್ನು ಸ್ವೀಕರಿಸಿದೆ ಮತ್ತು ವಿಶ್ವ ಚಾಂಪಿಯನ್ ಶಿಪ್ ಗಾಗಿ ತಂಡಗಳ ಆಯ್ಕೆ ಸೇರಿದಂತೆ ಭವಿಷ್ಯದ ಕ್ರಮವನ್ನು ನಿರ್ಧರಿಸುತ್ತದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

60 mins ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

1 hour ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

1 hour ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

2 hours ago