ಕ್ರೀಡೆ

ಇಂಗ್ಲೆಂಡ್‌ ತಂಡದಲ್ಲಿ ಅರೆಬೆಂದ ಆಟಗಾರರೇ ಹೆಚ್ಚು: ಮೈಕಲ್‌ ಅಥರ್ಟನ್‌ ಟೀಕೆ!

ನವದೆಹಲಿ : 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಡಿಫೆಂಡಿಂಗ್‌ ಚಾಂಪಿಯನ್ಸ್‌ ಇಂಗ್ಲೆಂಡ್‌ ಆಡಿದ ಮೊದಲ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಸೋತು ಕಂಗಾಲಾಗಿದೆ.

ಅದರಲ್ಲೂ ಭಾನುವಾರ (ಅ.15) ನಡೆದ ಪಂದ್ಯದಲ್ಲಿ ಕ್ರಿಕೆಟ್‌ ಕೂಸು ಅಫಘಾನಿಸ್ತಾನ ಎದುರು 69 ರನ್‌ಗಳ ಹೀನಾಯ ಸೋಲುಂಡಿತು. ಈ ಬಗ್ಗೆ ಮಾತನಾಡಿರುವ ಇಂಗ್ಲೆಂಡ್‌ನ ಮಾಜಿ ಆಟಗಾರ ಮೈಕಲ್‌ ಅಥರ್ಟನ್‌ ಟೀಕಾಸ್ತ್ರ ಪ್ರಯೋಗ ಮಾಡಿದ್ದಾರೆ. ಜೋಸ್‌ ಬಟ್ಲರ್‌ ಸಾರಥ್ಯದ ಇಂಗ್ಲೆಂಡ್‌ ತಂಡದಲ್ಲಿ ಅರೆಬೆಂದ ಆಟಗಾರರೇ ಹೆಚ್ಚಿದ್ದಾರೆ ಎಂದು ಜಾಡಿಸಿದ್ದಾರೆ.

“ಇಂಗ್ಲೆಂಡ್‌ ತಂಡ ಪ್ರಸಕ್ತ ಟೂರ್ನಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬೌಲಿಂಗ್‌ ಮಾಡಿಲ್ಲ. ತಂಡದ ಮೊದಲು ಈ ವಿಭಾಗದಲ್ಲಿ ಸುಧಾರಣೆ ತಂದುಕೊಳ್ಳುವ ಅಗತ್ಯವಿದೆ. ವಿಕೆಟ್‌ ವಿಚಾರದಲ್ಲಿ ತಂಡದಲ್ಲಿ ಬಹುತೇಕ ಅರೆಬೆಂದ ಆಟಗಾರರೇ ಹೆಚ್ಚಿದ್ದಾರೆ. ಒಡಿಐ ಕ್ರಿಕೆಟ್‌ನಲ್ಲಿ ಪಳಗಿದಂತೆ ಕಾಣಿಸುತ್ತಿಲ್ಲ. ಲಯ ಕಂಡುಕೊಳ್ಳಲು ಸಂಪೂರ್ಣ ವಿಫಲವಾಗಿದೆ. ಇಂಗ್ಲೆಂಡ್‌ ತಂಡ ತನ್ನ ಹಾದಿಯನ್ನು ತಾನೇ ಕಠಿಣವನ್ನಾಗಿಸಿಕೊಂಡಿದೆ,” ಎಂದು ಸಕ್ಯೂ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಮೈಕಲ್‌ ಅಥರ್ಟನ್‌ ಮಾತನಾಡಿದ್ದಾರೆ.
“ಅಫಘಾನಿಸ್ತಾನ ತಂಡ ಅಕ್ಷರಶಃ ಇಂಗ್ಲೆಂಡ್‌ ತಂಡಕ್ಕಿಂತಲೂ ಅತ್ಯುತ್ತಮ ಆಟವಾಡಿದೆ. ಸ್ಪಿನ್ನರ್‌ಗಳಿಗೆ ನೆರವಾಗುತ್ತಿದ್ದಂತಹ ಪಿಚ್‌ನಲ್ಲಿ ಅವರು ಇಂಗ್ಲೆಂಡ್‌ ವಿರುದ್ಧ ಜಯ ದಾಖಲಿಸಿದ ಪಂದ್ಯ ಇದಲ್ಲ. ಬ್ಯಾಟಿಂಗ್ ಮತ್ತು ಬೌಲಿಂಗ್‌ಗೆ ಹೇಳಿ ಮಾಡಿಸಿದ ಉತ್ತಮ ಪಿಚ್‌ ಅದಾಗಿತ್ತು. ಅಲ್ಲಿ ನಿಜಕ್ಕೂ ಶ್ರೇಷ್ಠ ಆಟವಾಡಿ ಅಫಘಾನಿಸ್ತಾನ ತಂಡ ಐತಿಹಾಸಿಕ ಜಯ ದಕ್ಕಿಸಿಕೊಂಡಿದೆ,” ಎಂದು ಅಥರ್ಟನ್‌ ಅಫಘಾನಿಸ್ತಾನ ತಂಡದ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.
andolanait

Recent Posts

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

1 hour ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

1 hour ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

1 hour ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

2 hours ago

ಶತಾಯುಷಿ ಸುತಾರ್ ವಿಧಿವಶ ; ದೇಶ-ವಿದೇಶ ನಾಯಕರ ಪ್ರತಿಮೆ ಕೆತ್ತಿದ್ದ ಹೆಗ್ಗಳಿಕೆ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸದ್ದು ಮಾಡುತ್ತಿರುವ ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವ

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…

2 hours ago