ಕ್ರೀಡೆ

ಇಂಗ್ಲೆಂಡ್‌ ತಂಡದಲ್ಲಿ ಅರೆಬೆಂದ ಆಟಗಾರರೇ ಹೆಚ್ಚು: ಮೈಕಲ್‌ ಅಥರ್ಟನ್‌ ಟೀಕೆ!

ನವದೆಹಲಿ : 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಡಿಫೆಂಡಿಂಗ್‌ ಚಾಂಪಿಯನ್ಸ್‌ ಇಂಗ್ಲೆಂಡ್‌ ಆಡಿದ ಮೊದಲ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಸೋತು ಕಂಗಾಲಾಗಿದೆ.

ಅದರಲ್ಲೂ ಭಾನುವಾರ (ಅ.15) ನಡೆದ ಪಂದ್ಯದಲ್ಲಿ ಕ್ರಿಕೆಟ್‌ ಕೂಸು ಅಫಘಾನಿಸ್ತಾನ ಎದುರು 69 ರನ್‌ಗಳ ಹೀನಾಯ ಸೋಲುಂಡಿತು. ಈ ಬಗ್ಗೆ ಮಾತನಾಡಿರುವ ಇಂಗ್ಲೆಂಡ್‌ನ ಮಾಜಿ ಆಟಗಾರ ಮೈಕಲ್‌ ಅಥರ್ಟನ್‌ ಟೀಕಾಸ್ತ್ರ ಪ್ರಯೋಗ ಮಾಡಿದ್ದಾರೆ. ಜೋಸ್‌ ಬಟ್ಲರ್‌ ಸಾರಥ್ಯದ ಇಂಗ್ಲೆಂಡ್‌ ತಂಡದಲ್ಲಿ ಅರೆಬೆಂದ ಆಟಗಾರರೇ ಹೆಚ್ಚಿದ್ದಾರೆ ಎಂದು ಜಾಡಿಸಿದ್ದಾರೆ.

“ಇಂಗ್ಲೆಂಡ್‌ ತಂಡ ಪ್ರಸಕ್ತ ಟೂರ್ನಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬೌಲಿಂಗ್‌ ಮಾಡಿಲ್ಲ. ತಂಡದ ಮೊದಲು ಈ ವಿಭಾಗದಲ್ಲಿ ಸುಧಾರಣೆ ತಂದುಕೊಳ್ಳುವ ಅಗತ್ಯವಿದೆ. ವಿಕೆಟ್‌ ವಿಚಾರದಲ್ಲಿ ತಂಡದಲ್ಲಿ ಬಹುತೇಕ ಅರೆಬೆಂದ ಆಟಗಾರರೇ ಹೆಚ್ಚಿದ್ದಾರೆ. ಒಡಿಐ ಕ್ರಿಕೆಟ್‌ನಲ್ಲಿ ಪಳಗಿದಂತೆ ಕಾಣಿಸುತ್ತಿಲ್ಲ. ಲಯ ಕಂಡುಕೊಳ್ಳಲು ಸಂಪೂರ್ಣ ವಿಫಲವಾಗಿದೆ. ಇಂಗ್ಲೆಂಡ್‌ ತಂಡ ತನ್ನ ಹಾದಿಯನ್ನು ತಾನೇ ಕಠಿಣವನ್ನಾಗಿಸಿಕೊಂಡಿದೆ,” ಎಂದು ಸಕ್ಯೂ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಮೈಕಲ್‌ ಅಥರ್ಟನ್‌ ಮಾತನಾಡಿದ್ದಾರೆ.
“ಅಫಘಾನಿಸ್ತಾನ ತಂಡ ಅಕ್ಷರಶಃ ಇಂಗ್ಲೆಂಡ್‌ ತಂಡಕ್ಕಿಂತಲೂ ಅತ್ಯುತ್ತಮ ಆಟವಾಡಿದೆ. ಸ್ಪಿನ್ನರ್‌ಗಳಿಗೆ ನೆರವಾಗುತ್ತಿದ್ದಂತಹ ಪಿಚ್‌ನಲ್ಲಿ ಅವರು ಇಂಗ್ಲೆಂಡ್‌ ವಿರುದ್ಧ ಜಯ ದಾಖಲಿಸಿದ ಪಂದ್ಯ ಇದಲ್ಲ. ಬ್ಯಾಟಿಂಗ್ ಮತ್ತು ಬೌಲಿಂಗ್‌ಗೆ ಹೇಳಿ ಮಾಡಿಸಿದ ಉತ್ತಮ ಪಿಚ್‌ ಅದಾಗಿತ್ತು. ಅಲ್ಲಿ ನಿಜಕ್ಕೂ ಶ್ರೇಷ್ಠ ಆಟವಾಡಿ ಅಫಘಾನಿಸ್ತಾನ ತಂಡ ಐತಿಹಾಸಿಕ ಜಯ ದಕ್ಕಿಸಿಕೊಂಡಿದೆ,” ಎಂದು ಅಥರ್ಟನ್‌ ಅಫಘಾನಿಸ್ತಾನ ತಂಡದ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.
andolanait

Recent Posts

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 mins ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 mins ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

11 mins ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

16 mins ago

ಜಂಬೂಸವಾರಿಯಲ್ಲಿ ಈ ಬಾರಿ ತಾರಾ ಮೆರುಗು

ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್‌ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…

22 mins ago