ಕ್ರೀಡೆ

ಇಂಗ್ಲೆಂಡ್‌ ತಂಡದಲ್ಲಿ ಅರೆಬೆಂದ ಆಟಗಾರರೇ ಹೆಚ್ಚು: ಮೈಕಲ್‌ ಅಥರ್ಟನ್‌ ಟೀಕೆ!

ನವದೆಹಲಿ : 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಡಿಫೆಂಡಿಂಗ್‌ ಚಾಂಪಿಯನ್ಸ್‌ ಇಂಗ್ಲೆಂಡ್‌ ಆಡಿದ ಮೊದಲ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಸೋತು ಕಂಗಾಲಾಗಿದೆ.

ಅದರಲ್ಲೂ ಭಾನುವಾರ (ಅ.15) ನಡೆದ ಪಂದ್ಯದಲ್ಲಿ ಕ್ರಿಕೆಟ್‌ ಕೂಸು ಅಫಘಾನಿಸ್ತಾನ ಎದುರು 69 ರನ್‌ಗಳ ಹೀನಾಯ ಸೋಲುಂಡಿತು. ಈ ಬಗ್ಗೆ ಮಾತನಾಡಿರುವ ಇಂಗ್ಲೆಂಡ್‌ನ ಮಾಜಿ ಆಟಗಾರ ಮೈಕಲ್‌ ಅಥರ್ಟನ್‌ ಟೀಕಾಸ್ತ್ರ ಪ್ರಯೋಗ ಮಾಡಿದ್ದಾರೆ. ಜೋಸ್‌ ಬಟ್ಲರ್‌ ಸಾರಥ್ಯದ ಇಂಗ್ಲೆಂಡ್‌ ತಂಡದಲ್ಲಿ ಅರೆಬೆಂದ ಆಟಗಾರರೇ ಹೆಚ್ಚಿದ್ದಾರೆ ಎಂದು ಜಾಡಿಸಿದ್ದಾರೆ.

“ಇಂಗ್ಲೆಂಡ್‌ ತಂಡ ಪ್ರಸಕ್ತ ಟೂರ್ನಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬೌಲಿಂಗ್‌ ಮಾಡಿಲ್ಲ. ತಂಡದ ಮೊದಲು ಈ ವಿಭಾಗದಲ್ಲಿ ಸುಧಾರಣೆ ತಂದುಕೊಳ್ಳುವ ಅಗತ್ಯವಿದೆ. ವಿಕೆಟ್‌ ವಿಚಾರದಲ್ಲಿ ತಂಡದಲ್ಲಿ ಬಹುತೇಕ ಅರೆಬೆಂದ ಆಟಗಾರರೇ ಹೆಚ್ಚಿದ್ದಾರೆ. ಒಡಿಐ ಕ್ರಿಕೆಟ್‌ನಲ್ಲಿ ಪಳಗಿದಂತೆ ಕಾಣಿಸುತ್ತಿಲ್ಲ. ಲಯ ಕಂಡುಕೊಳ್ಳಲು ಸಂಪೂರ್ಣ ವಿಫಲವಾಗಿದೆ. ಇಂಗ್ಲೆಂಡ್‌ ತಂಡ ತನ್ನ ಹಾದಿಯನ್ನು ತಾನೇ ಕಠಿಣವನ್ನಾಗಿಸಿಕೊಂಡಿದೆ,” ಎಂದು ಸಕ್ಯೂ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಮೈಕಲ್‌ ಅಥರ್ಟನ್‌ ಮಾತನಾಡಿದ್ದಾರೆ.
“ಅಫಘಾನಿಸ್ತಾನ ತಂಡ ಅಕ್ಷರಶಃ ಇಂಗ್ಲೆಂಡ್‌ ತಂಡಕ್ಕಿಂತಲೂ ಅತ್ಯುತ್ತಮ ಆಟವಾಡಿದೆ. ಸ್ಪಿನ್ನರ್‌ಗಳಿಗೆ ನೆರವಾಗುತ್ತಿದ್ದಂತಹ ಪಿಚ್‌ನಲ್ಲಿ ಅವರು ಇಂಗ್ಲೆಂಡ್‌ ವಿರುದ್ಧ ಜಯ ದಾಖಲಿಸಿದ ಪಂದ್ಯ ಇದಲ್ಲ. ಬ್ಯಾಟಿಂಗ್ ಮತ್ತು ಬೌಲಿಂಗ್‌ಗೆ ಹೇಳಿ ಮಾಡಿಸಿದ ಉತ್ತಮ ಪಿಚ್‌ ಅದಾಗಿತ್ತು. ಅಲ್ಲಿ ನಿಜಕ್ಕೂ ಶ್ರೇಷ್ಠ ಆಟವಾಡಿ ಅಫಘಾನಿಸ್ತಾನ ತಂಡ ಐತಿಹಾಸಿಕ ಜಯ ದಕ್ಕಿಸಿಕೊಂಡಿದೆ,” ಎಂದು ಅಥರ್ಟನ್‌ ಅಫಘಾನಿಸ್ತಾನ ತಂಡದ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.
andolanait

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

10 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

19 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

19 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

19 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

19 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

19 hours ago