ಕ್ರೀಡೆ

ಇಂಗ್ಲೆಂಡ್‌ ತಂಡದಲ್ಲಿ ಅರೆಬೆಂದ ಆಟಗಾರರೇ ಹೆಚ್ಚು: ಮೈಕಲ್‌ ಅಥರ್ಟನ್‌ ಟೀಕೆ!

ನವದೆಹಲಿ : 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಡಿಫೆಂಡಿಂಗ್‌ ಚಾಂಪಿಯನ್ಸ್‌ ಇಂಗ್ಲೆಂಡ್‌ ಆಡಿದ ಮೊದಲ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಸೋತು ಕಂಗಾಲಾಗಿದೆ.

ಅದರಲ್ಲೂ ಭಾನುವಾರ (ಅ.15) ನಡೆದ ಪಂದ್ಯದಲ್ಲಿ ಕ್ರಿಕೆಟ್‌ ಕೂಸು ಅಫಘಾನಿಸ್ತಾನ ಎದುರು 69 ರನ್‌ಗಳ ಹೀನಾಯ ಸೋಲುಂಡಿತು. ಈ ಬಗ್ಗೆ ಮಾತನಾಡಿರುವ ಇಂಗ್ಲೆಂಡ್‌ನ ಮಾಜಿ ಆಟಗಾರ ಮೈಕಲ್‌ ಅಥರ್ಟನ್‌ ಟೀಕಾಸ್ತ್ರ ಪ್ರಯೋಗ ಮಾಡಿದ್ದಾರೆ. ಜೋಸ್‌ ಬಟ್ಲರ್‌ ಸಾರಥ್ಯದ ಇಂಗ್ಲೆಂಡ್‌ ತಂಡದಲ್ಲಿ ಅರೆಬೆಂದ ಆಟಗಾರರೇ ಹೆಚ್ಚಿದ್ದಾರೆ ಎಂದು ಜಾಡಿಸಿದ್ದಾರೆ.

“ಇಂಗ್ಲೆಂಡ್‌ ತಂಡ ಪ್ರಸಕ್ತ ಟೂರ್ನಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬೌಲಿಂಗ್‌ ಮಾಡಿಲ್ಲ. ತಂಡದ ಮೊದಲು ಈ ವಿಭಾಗದಲ್ಲಿ ಸುಧಾರಣೆ ತಂದುಕೊಳ್ಳುವ ಅಗತ್ಯವಿದೆ. ವಿಕೆಟ್‌ ವಿಚಾರದಲ್ಲಿ ತಂಡದಲ್ಲಿ ಬಹುತೇಕ ಅರೆಬೆಂದ ಆಟಗಾರರೇ ಹೆಚ್ಚಿದ್ದಾರೆ. ಒಡಿಐ ಕ್ರಿಕೆಟ್‌ನಲ್ಲಿ ಪಳಗಿದಂತೆ ಕಾಣಿಸುತ್ತಿಲ್ಲ. ಲಯ ಕಂಡುಕೊಳ್ಳಲು ಸಂಪೂರ್ಣ ವಿಫಲವಾಗಿದೆ. ಇಂಗ್ಲೆಂಡ್‌ ತಂಡ ತನ್ನ ಹಾದಿಯನ್ನು ತಾನೇ ಕಠಿಣವನ್ನಾಗಿಸಿಕೊಂಡಿದೆ,” ಎಂದು ಸಕ್ಯೂ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಮೈಕಲ್‌ ಅಥರ್ಟನ್‌ ಮಾತನಾಡಿದ್ದಾರೆ.
“ಅಫಘಾನಿಸ್ತಾನ ತಂಡ ಅಕ್ಷರಶಃ ಇಂಗ್ಲೆಂಡ್‌ ತಂಡಕ್ಕಿಂತಲೂ ಅತ್ಯುತ್ತಮ ಆಟವಾಡಿದೆ. ಸ್ಪಿನ್ನರ್‌ಗಳಿಗೆ ನೆರವಾಗುತ್ತಿದ್ದಂತಹ ಪಿಚ್‌ನಲ್ಲಿ ಅವರು ಇಂಗ್ಲೆಂಡ್‌ ವಿರುದ್ಧ ಜಯ ದಾಖಲಿಸಿದ ಪಂದ್ಯ ಇದಲ್ಲ. ಬ್ಯಾಟಿಂಗ್ ಮತ್ತು ಬೌಲಿಂಗ್‌ಗೆ ಹೇಳಿ ಮಾಡಿಸಿದ ಉತ್ತಮ ಪಿಚ್‌ ಅದಾಗಿತ್ತು. ಅಲ್ಲಿ ನಿಜಕ್ಕೂ ಶ್ರೇಷ್ಠ ಆಟವಾಡಿ ಅಫಘಾನಿಸ್ತಾನ ತಂಡ ಐತಿಹಾಸಿಕ ಜಯ ದಕ್ಕಿಸಿಕೊಂಡಿದೆ,” ಎಂದು ಅಥರ್ಟನ್‌ ಅಫಘಾನಿಸ್ತಾನ ತಂಡದ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.
andolanait

Recent Posts

ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಈಶ್ವರ್‌ ಖಂಡ್ರೆ

ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್‌ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

1 hour ago

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟನೆ

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…

1 hour ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

3 hours ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

4 hours ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

5 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

5 hours ago