ಕ್ರೀಡೆ

ವಿಶ್ವಕಪ್‌ಗಿಂತಲೂ ದೊಡ್ಡದು ಮತ್ತೊಂದಿಲ್ಲ, ಕ್ರಿಕೆಟ್‌ನ ಒಲಿಂಪಿಕ್ಸ್‌ ಇದು: ವೀರೇಂದ್ರ ಸೆಹ್ವಾಗ್‌!

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಆಯೋಜಿಸುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯು ಕ್ರಿಕೆಟ್‌ನ ಒಲಿಂಪಿಕ್ಸ್‌ ಇದ್ದಹಾಗೆ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ವೀರೇಂದ್ರ ಸೆಹ್ವಾಗ್‌ ಹೇಳಿದ್ದಾರೆ. ಇದೇ ವರ್ಷ ಭಾರತದ ಆತಿಥ್ಯದಲ್ಲಿ ಒಡಿಐ ವಿಶ್ವಕಪ್‌ ನಡೆಯಲಿದ್ದು, ಈ ಸಲುವಾಗಿ ಐಸಿಸಿ ಮಂಗಳವಾರ (ಜೂ.27) ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಅಕ್ಟೋಬರ್‌ 5ರಿಂದ ನವೆಂಬರ್‌ 15ರವರೆಗೆ ಟೂರ್ನಿ ನಡೆಯಲಿದ್ದು, ಭಾರತ ತಂಡ ಐದು ಬಾರಿಯ ವಿಶ್ವ ಚಾಂಪಿಯನ್ಸ್‌ ಆಸ್ಟ್ರೇಲಿಯಾ ಎದುರು ಅ.8ರಂದು ಕಾದಾಟ ನಡೆಸುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.

2011ರಲ್ಲಿ ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಜಂಟಿ ಆತಿಥ್ಯದಲ್ಲಿ ಒಡಿಐ ವಿಶ್ವಕಪ್‌ ಟೂರ್ನಿ ಆಯೋಜನೆ ಆದ ಸಂದರ್ಭದಲ್ಲಿ ಎಂಎಸ್‌ ಧೋನಿ ಸಾರಥ್ಯದ ಭಾರತ ತಂಡ ಟ್ರೋಫಿ ಗೆದ್ದಿತ್ತು. ಇದೀಗ ರೋಹಿತ್‌ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ ಕೂಡ ಅಂಥದ್ದೇ ಸಾಧನೆ ಮೆರೆಯಲು ಎದುರು ನೋಡುತ್ತಿದೆ. ಕಳೆದ 2 ವರ್ಷಗಳಲ್ಲಿ ನಡೆದ ಬ್ಯಾಕ್‌ ಟು ಬ್ಯಾಕ್‌ ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ವೈಫಲ್ಯ ಕಂಡ ಭಾರತ ತಂಡ ಕಳೆದ 10 ವರ್ಷಗಳಿಂದ ಐಸಿಸಿ ಆಯೋಜಿತ ಯಾವುದೇ ಟೂರ್ನಿಗಳಲ್ಲಿ ಟ್ರೋಫಿ ಗೆದ್ದಿಲ್ಲ. ಹೀಗಾಗಿ 2023ರ ವಿಶ್ವಕಪ್‌ ಗೆದ್ದು ಟ್ರೋಫಿ ಗೆಲುವಿನ ಬರ ನೀಗಿಸಿಕೊಳ್ಳುವ ಲೆಕ್ಕಾಚಾರ ಮಾಡಿದೆ.

ನವೆಂಬರ್‌ 19ಕ್ಕೆ ಫೈನಲ್: 

ಟೂರ್ನಿಯ ಸೆಮಿಫೈನಲ್‌ ಪಂದ್ಯಗಳು ನವೆಂಬರ್‌ 15 ಮತ್ತು 16ರಂದು ಜರುಗಲಿದ್ದು, ಫೈನಲ್‌ ಪಂದ್ಯ ನವೆಂಬರ್ 19ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಬಗ್ಗೆ ಮಾತನಾಡಿರುವ ಭಾರತದ ವಿಶ್ವಕಪ್‌ ವಿನ್ನರ್‌ ವೀರೇಂದ್ರ ಸೆಹ್ವಾಗ್‌, ಒಡಿಐ ವಿಶ್ವಕಪ್‌ ಟೂರ್ನಿಯ ಮಹತ್ವವನ್ನು ಕೊಂಡಾಡಿದ್ದಾರೆ.

“ನನ್ನ ಪ್ರಕಾರ ಒಡಿಐ ಕ್ರಿಕೆಟ್ ವಿಶ್ವಕಪ್‌ ಟೂರ್ನಿಯೇ ಬಹುದೊಡ್ಡದು. ನಾಣು ಒಮ್ಮೆ ಫೈನಲ್‌ ತಲುಪಿದ್ದೇನೆ, ಮತ್ತೊಂದು ಫೈನಲ್‌ನಲ್ಲಿ ಟ್ರೋಫಿ ಗೆದ್ದಿದ್ದೇನೆ. ಮತ್ತೊಂದು ವಿಶ್ವಕಪ್‌ನಲ್ಲಿ ಆರಂಭಿಕ ಸುತ್ತಿನಲ್ಲೇ ಸೋತ ಅನುಭವವೂ ಇದೆ. ಹೀಗಾಗಿ ನನ್ನ ಪಯಣ ಸಾಕಷ್ಟು ಏಳುಬೀಳಿನಿಂದ ಕೂಡಿತ್ತು. ನನ್ನ ಪಾಲಿನ ಅತ್ಯುತ್ತಮ ವಿಶ್ವಕಪ್‌ ಎಂದರೆ 2003 ಮತ್ತು 2011ರ ವಿಶ್ವಕಪ್‌. 2011ರಲ್ಲಿ ನಮ್ಮ ಗೆಲುವು ಅವಿಸ್ಮರಣೀಯ. ಅಲ್ಲಿಯವರೆಗೂ ಆತಿಥೇಯ ತಂಡ ವಿಶ್ವಕಪ್ ಗೆದ್ದಿರಲಿಲ್ಲ. ಹೀಗಾಗಿ ನಾವು ಗೆದ್ದು ಇತಿಹಾಸ ಬರೆಯಲೇಬೇಕೆಂಬ ಒತ್ತಡವೂ ಇತ್ತು,” ಎಂದು ಸೆಹ್ವಾಗ್‌ ಹೇಳಿಕೆ ನೀಡಿದ್ದಾರೆ.

andolanait

Recent Posts

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

21 mins ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

45 mins ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

3 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

3 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

3 hours ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

3 hours ago