ಕ್ರೀಡೆ

ವಿಶ್ವಕಪ್‌ಗಿಂತಲೂ ದೊಡ್ಡದು ಮತ್ತೊಂದಿಲ್ಲ, ಕ್ರಿಕೆಟ್‌ನ ಒಲಿಂಪಿಕ್ಸ್‌ ಇದು: ವೀರೇಂದ್ರ ಸೆಹ್ವಾಗ್‌!

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಆಯೋಜಿಸುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯು ಕ್ರಿಕೆಟ್‌ನ ಒಲಿಂಪಿಕ್ಸ್‌ ಇದ್ದಹಾಗೆ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ವೀರೇಂದ್ರ ಸೆಹ್ವಾಗ್‌ ಹೇಳಿದ್ದಾರೆ. ಇದೇ ವರ್ಷ ಭಾರತದ ಆತಿಥ್ಯದಲ್ಲಿ ಒಡಿಐ ವಿಶ್ವಕಪ್‌ ನಡೆಯಲಿದ್ದು, ಈ ಸಲುವಾಗಿ ಐಸಿಸಿ ಮಂಗಳವಾರ (ಜೂ.27) ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಅಕ್ಟೋಬರ್‌ 5ರಿಂದ ನವೆಂಬರ್‌ 15ರವರೆಗೆ ಟೂರ್ನಿ ನಡೆಯಲಿದ್ದು, ಭಾರತ ತಂಡ ಐದು ಬಾರಿಯ ವಿಶ್ವ ಚಾಂಪಿಯನ್ಸ್‌ ಆಸ್ಟ್ರೇಲಿಯಾ ಎದುರು ಅ.8ರಂದು ಕಾದಾಟ ನಡೆಸುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.

2011ರಲ್ಲಿ ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಜಂಟಿ ಆತಿಥ್ಯದಲ್ಲಿ ಒಡಿಐ ವಿಶ್ವಕಪ್‌ ಟೂರ್ನಿ ಆಯೋಜನೆ ಆದ ಸಂದರ್ಭದಲ್ಲಿ ಎಂಎಸ್‌ ಧೋನಿ ಸಾರಥ್ಯದ ಭಾರತ ತಂಡ ಟ್ರೋಫಿ ಗೆದ್ದಿತ್ತು. ಇದೀಗ ರೋಹಿತ್‌ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ ಕೂಡ ಅಂಥದ್ದೇ ಸಾಧನೆ ಮೆರೆಯಲು ಎದುರು ನೋಡುತ್ತಿದೆ. ಕಳೆದ 2 ವರ್ಷಗಳಲ್ಲಿ ನಡೆದ ಬ್ಯಾಕ್‌ ಟು ಬ್ಯಾಕ್‌ ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ವೈಫಲ್ಯ ಕಂಡ ಭಾರತ ತಂಡ ಕಳೆದ 10 ವರ್ಷಗಳಿಂದ ಐಸಿಸಿ ಆಯೋಜಿತ ಯಾವುದೇ ಟೂರ್ನಿಗಳಲ್ಲಿ ಟ್ರೋಫಿ ಗೆದ್ದಿಲ್ಲ. ಹೀಗಾಗಿ 2023ರ ವಿಶ್ವಕಪ್‌ ಗೆದ್ದು ಟ್ರೋಫಿ ಗೆಲುವಿನ ಬರ ನೀಗಿಸಿಕೊಳ್ಳುವ ಲೆಕ್ಕಾಚಾರ ಮಾಡಿದೆ.

ನವೆಂಬರ್‌ 19ಕ್ಕೆ ಫೈನಲ್: 

ಟೂರ್ನಿಯ ಸೆಮಿಫೈನಲ್‌ ಪಂದ್ಯಗಳು ನವೆಂಬರ್‌ 15 ಮತ್ತು 16ರಂದು ಜರುಗಲಿದ್ದು, ಫೈನಲ್‌ ಪಂದ್ಯ ನವೆಂಬರ್ 19ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಬಗ್ಗೆ ಮಾತನಾಡಿರುವ ಭಾರತದ ವಿಶ್ವಕಪ್‌ ವಿನ್ನರ್‌ ವೀರೇಂದ್ರ ಸೆಹ್ವಾಗ್‌, ಒಡಿಐ ವಿಶ್ವಕಪ್‌ ಟೂರ್ನಿಯ ಮಹತ್ವವನ್ನು ಕೊಂಡಾಡಿದ್ದಾರೆ.

“ನನ್ನ ಪ್ರಕಾರ ಒಡಿಐ ಕ್ರಿಕೆಟ್ ವಿಶ್ವಕಪ್‌ ಟೂರ್ನಿಯೇ ಬಹುದೊಡ್ಡದು. ನಾಣು ಒಮ್ಮೆ ಫೈನಲ್‌ ತಲುಪಿದ್ದೇನೆ, ಮತ್ತೊಂದು ಫೈನಲ್‌ನಲ್ಲಿ ಟ್ರೋಫಿ ಗೆದ್ದಿದ್ದೇನೆ. ಮತ್ತೊಂದು ವಿಶ್ವಕಪ್‌ನಲ್ಲಿ ಆರಂಭಿಕ ಸುತ್ತಿನಲ್ಲೇ ಸೋತ ಅನುಭವವೂ ಇದೆ. ಹೀಗಾಗಿ ನನ್ನ ಪಯಣ ಸಾಕಷ್ಟು ಏಳುಬೀಳಿನಿಂದ ಕೂಡಿತ್ತು. ನನ್ನ ಪಾಲಿನ ಅತ್ಯುತ್ತಮ ವಿಶ್ವಕಪ್‌ ಎಂದರೆ 2003 ಮತ್ತು 2011ರ ವಿಶ್ವಕಪ್‌. 2011ರಲ್ಲಿ ನಮ್ಮ ಗೆಲುವು ಅವಿಸ್ಮರಣೀಯ. ಅಲ್ಲಿಯವರೆಗೂ ಆತಿಥೇಯ ತಂಡ ವಿಶ್ವಕಪ್ ಗೆದ್ದಿರಲಿಲ್ಲ. ಹೀಗಾಗಿ ನಾವು ಗೆದ್ದು ಇತಿಹಾಸ ಬರೆಯಲೇಬೇಕೆಂಬ ಒತ್ತಡವೂ ಇತ್ತು,” ಎಂದು ಸೆಹ್ವಾಗ್‌ ಹೇಳಿಕೆ ನೀಡಿದ್ದಾರೆ.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago