ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಯೋಜಿಸುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯು ಕ್ರಿಕೆಟ್ನ ಒಲಿಂಪಿಕ್ಸ್ ಇದ್ದಹಾಗೆ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಇದೇ ವರ್ಷ ಭಾರತದ ಆತಿಥ್ಯದಲ್ಲಿ ಒಡಿಐ ವಿಶ್ವಕಪ್ ನಡೆಯಲಿದ್ದು, ಈ ಸಲುವಾಗಿ ಐಸಿಸಿ ಮಂಗಳವಾರ (ಜೂ.27) ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಅಕ್ಟೋಬರ್ 5ರಿಂದ ನವೆಂಬರ್ 15ರವರೆಗೆ ಟೂರ್ನಿ ನಡೆಯಲಿದ್ದು, ಭಾರತ ತಂಡ ಐದು ಬಾರಿಯ ವಿಶ್ವ ಚಾಂಪಿಯನ್ಸ್ ಆಸ್ಟ್ರೇಲಿಯಾ ಎದುರು ಅ.8ರಂದು ಕಾದಾಟ ನಡೆಸುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.
2011ರಲ್ಲಿ ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಜಂಟಿ ಆತಿಥ್ಯದಲ್ಲಿ ಒಡಿಐ ವಿಶ್ವಕಪ್ ಟೂರ್ನಿ ಆಯೋಜನೆ ಆದ ಸಂದರ್ಭದಲ್ಲಿ ಎಂಎಸ್ ಧೋನಿ ಸಾರಥ್ಯದ ಭಾರತ ತಂಡ ಟ್ರೋಫಿ ಗೆದ್ದಿತ್ತು. ಇದೀಗ ರೋಹಿತ್ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ ಕೂಡ ಅಂಥದ್ದೇ ಸಾಧನೆ ಮೆರೆಯಲು ಎದುರು ನೋಡುತ್ತಿದೆ. ಕಳೆದ 2 ವರ್ಷಗಳಲ್ಲಿ ನಡೆದ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್ ಟೂರ್ನಿಗಳಲ್ಲಿ ವೈಫಲ್ಯ ಕಂಡ ಭಾರತ ತಂಡ ಕಳೆದ 10 ವರ್ಷಗಳಿಂದ ಐಸಿಸಿ ಆಯೋಜಿತ ಯಾವುದೇ ಟೂರ್ನಿಗಳಲ್ಲಿ ಟ್ರೋಫಿ ಗೆದ್ದಿಲ್ಲ. ಹೀಗಾಗಿ 2023ರ ವಿಶ್ವಕಪ್ ಗೆದ್ದು ಟ್ರೋಫಿ ಗೆಲುವಿನ ಬರ ನೀಗಿಸಿಕೊಳ್ಳುವ ಲೆಕ್ಕಾಚಾರ ಮಾಡಿದೆ.
ನವೆಂಬರ್ 19ಕ್ಕೆ ಫೈನಲ್:
ಟೂರ್ನಿಯ ಸೆಮಿಫೈನಲ್ ಪಂದ್ಯಗಳು ನವೆಂಬರ್ 15 ಮತ್ತು 16ರಂದು ಜರುಗಲಿದ್ದು, ಫೈನಲ್ ಪಂದ್ಯ ನವೆಂಬರ್ 19ರಂದು ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಬಗ್ಗೆ ಮಾತನಾಡಿರುವ ಭಾರತದ ವಿಶ್ವಕಪ್ ವಿನ್ನರ್ ವೀರೇಂದ್ರ ಸೆಹ್ವಾಗ್, ಒಡಿಐ ವಿಶ್ವಕಪ್ ಟೂರ್ನಿಯ ಮಹತ್ವವನ್ನು ಕೊಂಡಾಡಿದ್ದಾರೆ.
“ನನ್ನ ಪ್ರಕಾರ ಒಡಿಐ ಕ್ರಿಕೆಟ್ ವಿಶ್ವಕಪ್ ಟೂರ್ನಿಯೇ ಬಹುದೊಡ್ಡದು. ನಾಣು ಒಮ್ಮೆ ಫೈನಲ್ ತಲುಪಿದ್ದೇನೆ, ಮತ್ತೊಂದು ಫೈನಲ್ನಲ್ಲಿ ಟ್ರೋಫಿ ಗೆದ್ದಿದ್ದೇನೆ. ಮತ್ತೊಂದು ವಿಶ್ವಕಪ್ನಲ್ಲಿ ಆರಂಭಿಕ ಸುತ್ತಿನಲ್ಲೇ ಸೋತ ಅನುಭವವೂ ಇದೆ. ಹೀಗಾಗಿ ನನ್ನ ಪಯಣ ಸಾಕಷ್ಟು ಏಳುಬೀಳಿನಿಂದ ಕೂಡಿತ್ತು. ನನ್ನ ಪಾಲಿನ ಅತ್ಯುತ್ತಮ ವಿಶ್ವಕಪ್ ಎಂದರೆ 2003 ಮತ್ತು 2011ರ ವಿಶ್ವಕಪ್. 2011ರಲ್ಲಿ ನಮ್ಮ ಗೆಲುವು ಅವಿಸ್ಮರಣೀಯ. ಅಲ್ಲಿಯವರೆಗೂ ಆತಿಥೇಯ ತಂಡ ವಿಶ್ವಕಪ್ ಗೆದ್ದಿರಲಿಲ್ಲ. ಹೀಗಾಗಿ ನಾವು ಗೆದ್ದು ಇತಿಹಾಸ ಬರೆಯಲೇಬೇಕೆಂಬ ಒತ್ತಡವೂ ಇತ್ತು,” ಎಂದು ಸೆಹ್ವಾಗ್ ಹೇಳಿಕೆ ನೀಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…